ದೇಶ- ವಿದೇಶ

ಪಠ್ಯಪಸ್ತಕ ತಿದ್ದುಪಡಿ ಕೇಸರಿಕರಣ ಎನ್ನಲಾಗದು: ಎನ್‌ಸಿಇಆರ್‌ಟಿ

ನವದೆಹಲಿ: ಶಾಲೆಗಳಲ್ಲಿ ಗಲಭೆ, ಧ್ವಂಸಗಳ ಕುರಿತು ಬೋಧಿಸುವ ಅಗತ್ಯವಿಲ್ಲ. ಆದರೆ ಪಠ್ಯಪುಸ್ತಕ ತಿದ್ದುಪಡಿ ಜಾಗತಿಕ ಬದಲಾವಣೆ, ಪರಿಷ್ಕರಣೆಯನ್ನು ಕೇಸರೀಕರಣ ಎಂದು ಕರೆಯಲಾಗದು ಎಂದು ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ(ಎನ್‌ಸಿಈಆರ್‌ಟಿ) ನಿರ್ದೇಶಕ ದಿನೇಶ್‌ ಪ್ರಸಾದ್‌ ಸಕ್ಲಾನಿ ಹೇಳಿದ್ದಾರೆ.

ಸುದ್ದಿ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ಶಾಲಾ ಪಠ್ಯಕ್ರಮದಲ್ಲಿ ಕೇಸರಿಕರಣದ ಆರೋಪಗಳನ್ನು ತಳ್ಳಿಹಾಕಿ, ಗುಜರಾತ್‌ ಗಲಭೆಗಳು ಹಾಗೂ ಬಾಬ್ರಿ ಮಸೀದಿ ಧ್ವಂಸ ವಿಷಯಗಳನ್ನು ಶಾಲಾ ಪಠ್ಯಪುಸ್ತಕಗಳಲ್ಲಿ ಮಾರ್ಪಡಿಸಲಾಗಿದೆ ಎಂದರು.

ಹನ್ನೆರಡನೇ ತರಗತಿಯ ರಾಜಕೀಯ ಶಾಸ್ತ್ರದ ಪಠ್ಯಪುಸ್ತಕದಲ್ಲಿ ಬಾಬ್ರಿ ಮಸೀದಿಯನ್ನು ಮೂರು ಗೋಪುರದ ಕಟ್ಟಡವೆಂದು ವರ್ಣಿಸಲಾಗಿದೆ. ಅಯೋಧ್ಯೆಯ ಪಾಠವಿದೆ. ಎಲ್.ಕೆ ಅಡ್ವಾನಿಯವರ ನೇತೃತ್ವದಲ್ಲಿ ನಡೆದ ಬಿಜೆಪಿ ರಥಯಾತ್ರೆಯನ್ನು ಉಲ್ಲೇಖಿಸಲಾಗಿದೆ. ಕರ ಸೇವಕರಿಂದ ಬಾಬ್ರಿ ಮಸೀದಿ ಕೆಡವಲಾಗಿದ್ದು, ಆ ಸಂಬಂಧಿತ ಘಟನೆಗಳ ವಿವರ ಕೊಡಲಾಗಿದೆ ಎಂದು ಹೇಳಿದರು.

ಬಿಜೆಪಿಯ ಆಡಳಿತದ ರಾಜ್ಯಗಳಲ್ಲಿ ರಾಷ್ಟ್ರಪತಿ ಆಳ್ವಿಕೆ ಹಾಗೂ ಬಿಜೆಪಯ ವಿಷಾದಗಳ ವಿಷಯಗಳು ಸೇರಿವೆ. ಮೊಘಲರ ಸಾಧನೆಗಳಿಗೆ ಕತ್ತರಿ ಹಾಕಲಾಗಿದ್ದು, ರಾಮಮಂದಿರ ನಿರ್ಮಾಣ ಹಾಗೂ ಹೊಸ ಸಂಸತ್ ಭವನ ನಿರ್ಮಾಣ ವಿಷಯಗಳು ಸೇರಿಕೊಂಡಿವೆ.

ಯಾವುದಾದರೂ ಅಪ್ರಸ್ತುತ ವಿಷಯವಿದ್ದರೆ ಅದನ್ನು ಅಪ್‌ಡೇಟ್‌ ಮಾಡಬೇಕಾಗುತ್ತದೆ. ಬದಲಾವಣೆ ಮಾಡಬಾರದು ಎನ್ನಲಾಗುವುದಿಲ್ಲ. ನಾವು ಮಕ್ಕಳಿಗೆ ಇತಿಹಾಸ ಹೇಳಿಕೊಡುವುದು ನೈಜ ಜ್ಞಾನವನ್ನು ತುಂಬಲೇ ಹೊರತು ಘರ್ಷಣೆಗೆ ನೂಕುವುದಕ್ಕಲ್ಲ ಎಂದರು.

ರಾಮಮಂದಿರ, ಹೊಸ ಸಂಸತ್‌ ಭವನದ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಬಾರದೇಕೆ? ಪ್ರಾಚೀನ ಘಟನೆಗಳ ಜೊತೆಗೆ ಇತ್ತೀಚಿನ ವಿದ್ಯಮಾನವನ್ನು ಮಕ್ಕಳಿಗೆ ತಿಳಿಸುವುದು ನಮ್ಮ ಕರ್ತವ್ಯ ಎಂದು ದಿನೇಶ್‌ ಪ್ರಸಾದ್‌ ಸಕ್ಲಾನಿ ಸ್ಪಷ್ಟಪಡಿಸಿದ್ದಾರೆ.

ಹೆಚ್‌ಎನ್‌ಬಿ ಗರ್‌ವಾಲ್‌ ವಿವಿಯ ಪುರಾತತ್ವ ಇತಿಹಾಸ ವಿಭಾಗದ ಮುಖ್ಯಸ್ಥರಾಗಿದ್ದ ದಿನೇಶ್‌ ಪ್ರಸಾದ್‌ ಅವರನ್ನು 2022 ರಲ್ಲಿ ಎನ್‌ಸಿಇಆರ್‌ಟಿ ಮುಖ್ಯಸ್ಥರನ್ನಾಗಿ ನೇಮಿಸಲಾಯಿತು. ಇವರು ಅಧಿಕಾರ ಸ್ವೀಕರಿಸಿದ ನಂತರ ಪಠ್ಯಗಳಲ್ಲಿ ಹಲವು ಬದಲಾವಣೆ ಮಾಡಲಾಗಿದೆ ಎಂದು ಆರೋಪ ಇವರ ಮೇಲಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ನಿವೃತ್ತ ನ್ಯಾ.ಪಿ.ಎನ್.ದೇಸಾಯಿ ನೇಮಕ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…

12 hours ago

ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕರಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ

ಬೆಂಗಳೂರು : ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…

14 hours ago

ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ : ಮಾಜಿ ಸಚಿವ ಎನ್.ಮಹೇಶ್‌

ಕೊಳ್ಳೇಗಾಲ : ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ ಎಂದು ಮಾಜಿ ಸಚಿವ ಎನ್‌.ಮಹೇಶ್‌ ಮಾರ್ಮಿಕವಾಗಿ…

15 hours ago

ಲೋಕಭವನದ ಗ್ಲಾಸ್‌ಹೌಸ್‌ನಲ್ಲೇ ಡಿಕೆಶಿ ಪ್ರಮಾಣವಚನ ಸ್ವೀಕಾರ ; ಸಾರ್ವಜನಿಕರಿಗಿಲ್ಲ ಪ್ರವೇಶ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ…

15 hours ago

ಪೊನ್ನಾಚಿ | ಚಿರತೆ ದಾಳಿಗೆ ಕುರಿ ಬಲಿ

ಹನೂರು : ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಧನಗಾಹಿ ಮೇಲೆ ಚಿರತೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.…

15 hours ago

ಮಣಿಪುರದಲ್ಲಿ ನಿಷೇಧಿತ ಸಂಘಟನೆಗಳಿಗೆ ಸೇರಿದ ಐವರು ಉಗ್ರರ ಬಂಧನ

ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…

18 hours ago