ದೇಶ- ವಿದೇಶ

ಪಠ್ಯಪಸ್ತಕ ತಿದ್ದುಪಡಿ ಕೇಸರಿಕರಣ ಎನ್ನಲಾಗದು: ಎನ್‌ಸಿಇಆರ್‌ಟಿ

ನವದೆಹಲಿ: ಶಾಲೆಗಳಲ್ಲಿ ಗಲಭೆ, ಧ್ವಂಸಗಳ ಕುರಿತು ಬೋಧಿಸುವ ಅಗತ್ಯವಿಲ್ಲ. ಆದರೆ ಪಠ್ಯಪುಸ್ತಕ ತಿದ್ದುಪಡಿ ಜಾಗತಿಕ ಬದಲಾವಣೆ, ಪರಿಷ್ಕರಣೆಯನ್ನು ಕೇಸರೀಕರಣ ಎಂದು ಕರೆಯಲಾಗದು ಎಂದು ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ(ಎನ್‌ಸಿಈಆರ್‌ಟಿ) ನಿರ್ದೇಶಕ ದಿನೇಶ್‌ ಪ್ರಸಾದ್‌ ಸಕ್ಲಾನಿ ಹೇಳಿದ್ದಾರೆ.

ಸುದ್ದಿ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ಶಾಲಾ ಪಠ್ಯಕ್ರಮದಲ್ಲಿ ಕೇಸರಿಕರಣದ ಆರೋಪಗಳನ್ನು ತಳ್ಳಿಹಾಕಿ, ಗುಜರಾತ್‌ ಗಲಭೆಗಳು ಹಾಗೂ ಬಾಬ್ರಿ ಮಸೀದಿ ಧ್ವಂಸ ವಿಷಯಗಳನ್ನು ಶಾಲಾ ಪಠ್ಯಪುಸ್ತಕಗಳಲ್ಲಿ ಮಾರ್ಪಡಿಸಲಾಗಿದೆ ಎಂದರು.

ಹನ್ನೆರಡನೇ ತರಗತಿಯ ರಾಜಕೀಯ ಶಾಸ್ತ್ರದ ಪಠ್ಯಪುಸ್ತಕದಲ್ಲಿ ಬಾಬ್ರಿ ಮಸೀದಿಯನ್ನು ಮೂರು ಗೋಪುರದ ಕಟ್ಟಡವೆಂದು ವರ್ಣಿಸಲಾಗಿದೆ. ಅಯೋಧ್ಯೆಯ ಪಾಠವಿದೆ. ಎಲ್.ಕೆ ಅಡ್ವಾನಿಯವರ ನೇತೃತ್ವದಲ್ಲಿ ನಡೆದ ಬಿಜೆಪಿ ರಥಯಾತ್ರೆಯನ್ನು ಉಲ್ಲೇಖಿಸಲಾಗಿದೆ. ಕರ ಸೇವಕರಿಂದ ಬಾಬ್ರಿ ಮಸೀದಿ ಕೆಡವಲಾಗಿದ್ದು, ಆ ಸಂಬಂಧಿತ ಘಟನೆಗಳ ವಿವರ ಕೊಡಲಾಗಿದೆ ಎಂದು ಹೇಳಿದರು.

ಬಿಜೆಪಿಯ ಆಡಳಿತದ ರಾಜ್ಯಗಳಲ್ಲಿ ರಾಷ್ಟ್ರಪತಿ ಆಳ್ವಿಕೆ ಹಾಗೂ ಬಿಜೆಪಯ ವಿಷಾದಗಳ ವಿಷಯಗಳು ಸೇರಿವೆ. ಮೊಘಲರ ಸಾಧನೆಗಳಿಗೆ ಕತ್ತರಿ ಹಾಕಲಾಗಿದ್ದು, ರಾಮಮಂದಿರ ನಿರ್ಮಾಣ ಹಾಗೂ ಹೊಸ ಸಂಸತ್ ಭವನ ನಿರ್ಮಾಣ ವಿಷಯಗಳು ಸೇರಿಕೊಂಡಿವೆ.

ಯಾವುದಾದರೂ ಅಪ್ರಸ್ತುತ ವಿಷಯವಿದ್ದರೆ ಅದನ್ನು ಅಪ್‌ಡೇಟ್‌ ಮಾಡಬೇಕಾಗುತ್ತದೆ. ಬದಲಾವಣೆ ಮಾಡಬಾರದು ಎನ್ನಲಾಗುವುದಿಲ್ಲ. ನಾವು ಮಕ್ಕಳಿಗೆ ಇತಿಹಾಸ ಹೇಳಿಕೊಡುವುದು ನೈಜ ಜ್ಞಾನವನ್ನು ತುಂಬಲೇ ಹೊರತು ಘರ್ಷಣೆಗೆ ನೂಕುವುದಕ್ಕಲ್ಲ ಎಂದರು.

ರಾಮಮಂದಿರ, ಹೊಸ ಸಂಸತ್‌ ಭವನದ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಬಾರದೇಕೆ? ಪ್ರಾಚೀನ ಘಟನೆಗಳ ಜೊತೆಗೆ ಇತ್ತೀಚಿನ ವಿದ್ಯಮಾನವನ್ನು ಮಕ್ಕಳಿಗೆ ತಿಳಿಸುವುದು ನಮ್ಮ ಕರ್ತವ್ಯ ಎಂದು ದಿನೇಶ್‌ ಪ್ರಸಾದ್‌ ಸಕ್ಲಾನಿ ಸ್ಪಷ್ಟಪಡಿಸಿದ್ದಾರೆ.

ಹೆಚ್‌ಎನ್‌ಬಿ ಗರ್‌ವಾಲ್‌ ವಿವಿಯ ಪುರಾತತ್ವ ಇತಿಹಾಸ ವಿಭಾಗದ ಮುಖ್ಯಸ್ಥರಾಗಿದ್ದ ದಿನೇಶ್‌ ಪ್ರಸಾದ್‌ ಅವರನ್ನು 2022 ರಲ್ಲಿ ಎನ್‌ಸಿಇಆರ್‌ಟಿ ಮುಖ್ಯಸ್ಥರನ್ನಾಗಿ ನೇಮಿಸಲಾಯಿತು. ಇವರು ಅಧಿಕಾರ ಸ್ವೀಕರಿಸಿದ ನಂತರ ಪಠ್ಯಗಳಲ್ಲಿ ಹಲವು ಬದಲಾವಣೆ ಮಾಡಲಾಗಿದೆ ಎಂದು ಆರೋಪ ಇವರ ಮೇಲಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

8 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

8 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

8 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

11 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

11 hours ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

11 hours ago