Thalapathy Vijay is the Chief Ministerial Candidate for TVK Party
ಚೆನ್ನೈ : ಮುಂಬರುವ 2026ರಲ್ಲಿ ತಮಿಳುನಾಡು ರಾಜ್ಯದಲ್ಲಿ ನಡೆಯುವ ವಿಧಾನಸಭೆ ಚುನಾವಣೆಯಲ್ಲಿ ತಮಿಳಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಪಕ್ಷದ ಸಂಸ್ಥಾಪಕ ದಳಪತಿ ವಿಜಯ್ ಅವರೇ ಎಂದು ಶುಕ್ರವಾರ ಅಧಿಕೃತವಾಗಿ ಘೊಷಿಸಲಾಗಿದೆ.
ಈ ವಿಶೇಷ ನಿರ್ಣಯವನ್ನು ಪಕ್ಷದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಅಂಗೀಕರಿಸಲಾಗಿದೆ.
ಬಳಿಕ ಮಾತನಾಡಿದ ದಳಪತಿ ವಿಜಯ್, ಬಿಜೆಪಿ ಜೊತೆಗಿನ ಮೈತ್ರಿ ವದಂತಿಯನ್ನು ತಳ್ಳಿಹಾಕಿದ್ದಾರೆ. ಸೈದ್ಧಾಂತಿಕ ಶತ್ರು ಮತ್ತು ಪ್ರತ್ಯೇಕತಾವಾದಿಗಳೊಂದಿಗೆ ನೇರ ಅಥವಾ ಪರೋಕ್ಷ ಮೈತ್ರಿ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ನಮ್ಮ ಸೈದ್ದಾಂತಿಕ ವಿರೋಧಿಯಾದ ಬಿಜೆಪಿ ಬೇರೆಲ್ಲಾದರೂ ವಿಷ ಬೀಜ ಬಿತ್ತಬಹುದು ಹೊರತು, ತಮಿಳುನಾಡಿನಲ್ಲಲ್ಲ. ನೀವು ಅಣ್ಣಾ ಮತ್ತು ಪೆರಿಯಾರ್ ಅವರನ್ನು ವಿರೋಧಿಸಿ ತಮಿಳುನಾಡಿನಲ್ಲಿ ಗೆಲುವು ಸಾಧಿಸಲು ಸಾಧ್ಯವಿಲ್ಲ ಎಂದು ದಳಪತಿ ವಿಜಯ್ ಟಿವಿಕೆ ಪಕ್ಷವು ಡಿಎಂಕೆ ಹಾಗೂ ಬಿಜೆಪಿ ಎರಡು ಪಕ್ಷವನ್ನು ವಿರೋಧಿಸಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…
ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…
ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…
ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…
ಟಿ.ಕೆ.ಹರೀಶ್ ಮನೆ ಮುಂದಿನ ರಸ್ತೆಯ ಕಸ ವಿಲೇವಾರಿಗೆ ನಾಗರಿಕರು ಜಾಗೃತರಾಗಬೇಕು ಮೈಸೂರು ಎಂದರೆ ಕೇವಲ ಒಂದು ನಗರವಲ್ಲ. ಅದು ಕರ್ನಾಟಕದ…
ಎಸ್.ಎಸ್.ಭಟ್ ನಂ.ಗೂಡು: ಕಳಚಿ ಬೀಳುತ್ತಿದೆ ಸೀಲಿಂಗ್ ಕಾಂಕ್ರೀಟ್; ವಾಹನ ಸವಾರರಲ್ಲಿ ಆತಂಕ ನಂಜನಗೂಡು: ನಗರದ ರೈಲು ನಿಲ್ದಾಣಕ್ಕೆ ತಾಗಿದಂತೆ ಮಹಾತ್ಮ…