ಚೆನ್ನೈ : ತಮಿಳುನಾಡು ವಿಧಾನಸಭೆ ಚುನಾವಣೆಯ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಟಿವಿಕೆ ಮುಖ್ಯಸ್ಥ ದಳಪತಿ ವಿಜಯ್ ಅವರ ಕಾರು ಚಾಲಕನ ಪುತ್ರನಿಗೆ ಅದೃಷ್ಟ ಖುಲಾಯಿಸಿದೆ. ನಟ-ರಾಜಕಾರಣಿ ವಿಜಯ್ ಅವರು ತಮ್ಮ ಕಾರು ಚಾಲಕನ ಪುತ್ರ ಆರ್.ಶಬರಿನಾಥನ್ ಅವರಿಗೆ ಟಿವಿಕೆ ಟಿಕೆಟ್ ನೀಡಿ, ವಿರುಗಂಬಕ್ಕಂ ಕ್ಷೇತ್ರದಿಂದ ಕಣಕ್ಕೀಳಿಸಿ ಗೆಲ್ಲಿಸಿಕೊಂಡು ಬಂದಿದ್ದಾರೆ.
ಶಬರಿನಾಥನ್ ಅವರು ಗೆಲುವು ಸಾಧಿಸುತ್ತಿದ್ದಂತೆ, ತಮಿಳಗ ವೆಟ್ರಿ ಕಳಗಂ(ಟಿವಿಕೆ) ಅಭ್ಯರ್ಥಿಗಳ ಪಟ್ಟಿಯಲ್ಲಿ ತಮ್ಮ ಹೆಸರು ಕಾಣಿಸಿಕೊಂಡ ನಂತರ ವೇದಿಕೆಯಲ್ಲೇ ವಿಜಯ್ ಅವರನ್ನು ಅಪ್ಪಿಕೊಂಡು ಕಣ್ಣೀರಿಟ್ಟ ಭಾವನಾತ್ಮಕ ಮತ್ತು ಹೃದಯಸ್ಪರ್ಶಿ ವಿಡಿಯೋ ವೈರಲ್ ಆಗಿದೆ. ದಳಪತಿ ವಿಜಯ್ ಅವರ ಆಪ್ತ ಸಹಾಯಕನಾಗಿ ನೇಮಕಗೊಳ್ಳುವುದಕ್ಕೆ ಮುನ್ನ ಹಲವು ವರ್ಷಗಳ ಕಾಲ ಕಾರು ಚಾಲಕನಾಗಿ ಕೆಲಸ ಮಾಡಿದ್ದ ರಾಜೇಂದ್ರನ್ ಅವರ ಪುತ್ರ ಶಬರಿನಾಥನ್ ಶಾಸಕರಾಗಿ ವಿಧಾನಸಭೆ ಪ್ರವೇಶಿಸುವ ಉತ್ಸಾಹದಲ್ಲಿದ್ದಾರೆ.
ವಿರುಗಂಬಕ್ಕಂ ಕ್ಷೇತ್ರದಲ್ಲಿ ಡಿಎಂಕೆ ಅಭ್ಯರ್ಥಿ ಪ್ರಭಾಕರನ್ ರಾಜ್ ವಿರುದ್ಧ ಶಬರಿನಾಥನ್ ಅವರು ಭಾರೀ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ.
ಕಣ್ಣೀರಿಟ್ಟಿದ್ದ ಶಬರಿನಾಥನ್
ದಳಪತಿ ವಿಜಯ್ ಎಲ್ಲಾ 234 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನ ಘೋಷಿಸಿದಾಗಲೇ ವಿರುಗಂಬಕ್ಕಂ ಕ್ಷೇತ್ರಕ್ಕೆ ಶಬರಿನಾಥನ್ ಹೆಸರು ಘೋಷಿಸಿದ್ದರು. ಈ ವೇಳೆ ಅಪ್ಪ – ಮಕ್ಕಳಿಬ್ಬರೂ ವೇದಿಕೆಯಲ್ಲೇ ವಿಜಯ್ ಅವರನ್ನ ಅಪ್ಪಿಕೊಂಡು ಕಣ್ಣೀರಿಟ್ಟಿದ್ದರು. ವಿಜಯ್ ಪಾದಗಳನ್ನ ಮುಟ್ಟಿ ಶಬರಿನಾಥನ್ ಭಾವುಕರಾಗಿದ್ದರು.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…