ನವದೆಹಲಿ: ಜಮ್ಮು-ಕಾಶ್ಮೀರದ ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಮೇ.7ರಂದು ಆಪರೇಷನ್ ಸಿಂಧೂರ ಹೆಸರಿನಡಿಯಲ್ಲಿ ಭಾರತ ಮಾಡಿದ್ದ ದಾಳಿಗೆ ಭಾರತಕ್ಕೆ ಬೇಕಾಗಿದ್ದ 5 ಉಗ್ರರು ಮೃತಪಟ್ಟಿದ್ದಾರೆ.
ಜಮ್ಮು-ಕಾಶ್ಮೀರದ ಪಹಲ್ಗಾಮ್ನಲ್ಲಿ ಏಪ್ರಿಲ್.22ರಂದು ಭಯೋತ್ಪಾದಕರು ಪ್ರವಾಸಿಗರನ್ನೇ ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಿದ್ದರು. ಪರಿಣಾಮ 26 ಮಂದಿ ಸಾವನ್ನಪ್ಪಿದ್ದರು. ಇದಕ್ಕೆ ಪ್ರತೀದಾಳಿಯಾಗಿ ಮೇ.7ರಂದು ಪಾಕ್ನ 9 ಸ್ಥಳಗಳಲ್ಲಿ ಉಗ್ರರ ಅಡಗು ತಾಣಗಳ ಮೇಲೆ ದಾಳಿ ಮಾಡಿತ್ತು. ಈ ದಾಳಿಯಲ್ಲಿ ಭಾರತಕ್ಕೆ ಬೇಕಿದ್ದ ಐವರು ಉಗ್ರರು ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ:- ಸೂಕ್ಷ್ಮ ಪ್ರದೇಶದಲ್ಲಿ ಸಿಬ್ಬಂದಿ ನಿಯೋಜನೆ ; ಗೃಹ ಸಚಿವ ಪರಮೇಶ್ವರ್
ಮುದಸ್ಸರ್ ಖಾದಿಯಾನ್ ಅಲಿಯಾಸ್ ಮುದಸ್ಸರ್ ಅಬು, ಜೈಶ್ ಎ ಮೊಹಮ್ಮದ್ ಸಂಘಟನೆಯಲ್ಲಿ ಸಕ್ರಿಯನಾಗಿದ್ದ ಹಫೀಜ್ ಮುಹಮ್ಮದ್ ಜಮೀಲ್, ಜೈಶ್ ಎ ಮೊಹಮ್ಮದ್ನಲ್ಲಿ ಸಕ್ರಿಯನಾಗಿದ್ದ ಮತ್ತೊಬ್ಬ ಉಗ್ರ ಮೊಹಮ್ಮದ್ ಯೂಸುಫ್ ಅಜರ್, ಉಗ್ರ ಸಂಘಟನೆಯಾದ ಲಷ್ಕರ್ ಎ ತೈಬಾದ ಉಗ್ರ ಅಬು ಆಕಾಶಾ, ಜೈಶ್ ಎ ಮೊಹಮ್ಮದ್ನಲ್ಲಿ ಸಕ್ರಿಯನಾಗಿದ್ದ ಮೊಹಮ್ಮದ್ ಹಸನ್ ಎಂಬ ಉಗ್ರರು ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಇದೀಗ ಭಾರತ ಹಾಗೂ ಪಾಕ್ ನಡುವೆ ಉದ್ವಿಗ್ನ ಪರಿಸ್ಥಿತಿ ಏರ್ಪಟ್ಟಿದೆ.
ಮಂಡ್ಯ: ಕೆಆರ್ಎಸ್ ಜಲಾಶಯದಿಂದ ತಮಿಳುನಾಡಿಗೆ ಒಳಹರಿವಿಗಿಂತ ಮೂರು ಪಟ್ಟು ಅಧಿಕ ಪ್ರಮಾಣದಲ್ಲಿ ನೀರು ಹೊರಬಿಡಲಾಗುತ್ತಿದೆ. ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಮಳೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದ ಹೊಳೆಮುರಿದಟ್ಟಿ ಕರಿಕಲ್ಲುಗುಡ್ಡದಲ್ಲಿ ಅರಣ್ಯಾಧಿಕಾರಿಗಳ ಮೇಲೆ ಗುಂಡಿನ ದಾಳಿ…
ಮೈಸೂರಿನ ಕುವೆಂಪುನಗರದ ನೃಪತುಂಗ ರಸ್ತೆಯಲ್ಲಿ ಚರಂಡಿ, ಪಾದಚಾರಿಮಾರ್ಗ ಮತ್ತು ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ. ಸಿದ್ದಲಿಂಗೇಶ್ವರ ಅಂಗಡಿ ಬಳಿ ವಿದ್ಯುತ್…
ಮೈಸೂರು ನಗರದ ಪ್ರತಿಷ್ಠಿತ ಸಹಕಾರ ಬ್ಯಾಂಕ್ ಒಂದರಲ್ಲಿ ಸಾಲ ನೀಡುವಿಕೆಯಲ್ಲಿ ಕೊಟ್ಯಂತರ ರೂ. ಅವ್ಯವಹಾರ ನಡೆದಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ.…
ಕರ್ನಾಟಕ ಲೋಕಸೇವಾ ಆಯೋಗವು ರಾಜ್ಯದ ಅತ್ಯುನ್ನತ ನಾಗರಿಕ ಸೇವೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಜವಾಬ್ದಾರಿಯುತ ಸಂಸ್ಥೆಯಾಗಿದೆ. ಆದರೆ ಇತ್ತೀಚಿನ…
ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಮಾವುತ - ಆನೆ ನಡುವೆ ಹೃದಯಸ್ಪರ್ಶಿ ಸಂಬಂಧ ಮೈಸೂರು ದಸರಾ ಎಂದಾಕ್ಷಣ ನಮ್ಮ ಕಣ್ಣ…