ಹೊಸದಿಲ್ಲಿ : ಜಿಎಸ್ಟಿ ಬಗ್ಗೆ ನಮ್ಮ ಸರ್ಕಾರ ಕೈಗೊಂಡಿರುವ ನಿರ್ಣಯ ಭಾರತಕ್ಕೆ ಸ್ವಾತಂತ್ರ್ಯ ಬಂದ ಮೇಲೆ ನಡೆದ ಅತಿದೊಡ್ಡ ಕ್ರಾಂತಿಕಾರ ತೆರಿಗೆ ಸುಧಾರಣೆ ಆಗಿದೆ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಹೇಳಿದ್ದಾರೆ.
ಗುರುವಾರ ದಿಲ್ಲಿಯಲ್ಲಿ ಮಾತನಾಡಿದ ಅವರು, ಜಿಎಸ್ಟಿ ಕಡಿತದಿಂದ ಉಳಿತಾಯವಾಗುವ ಪ್ರತಿ ರೂಪಾಯಿಯನ್ನು ಗ್ರಾಹಕರಿಗೆ ವರ್ಗಾಯಿಸಬೇಕು. ಇಲ್ಲದೇ ಹೋದರೆ ಜಿಎಸ್ಟಿ ಸುಧಾರಣೆಗೆ ಅರ್ಥವೆ ಇರುವುದಿಲ್ಲ ಎಂದು ಕೈಗಾರಿಕೆಗಳ ಕಿವಿ ಹಿಂಡಿದ್ದಾರೆ.
ಭಾರತೀಯರ ಶ್ರಮ ಮತ್ತು ಶ್ರಮದಿಂದ ತಯಾರಿಸಿದ ಉತ್ಪನ್ನಗಳು, ಭಾರತದ ಮಣ್ಣಿನಲ್ಲಿ ಪೋಷಿಸಲ್ಪಟ್ಟ ಉತ್ಪನ್ನಗಳನ್ನು ಬೆಂಬಲಿಸುವ ಅಗತ್ಯವನ್ನು ಒತ್ತಿ ಹೇಳಿದ ಅವರು, ಅಂತಹ ಉತ್ಪನ್ನಗಳು ದೇಶದ ಮೂಲೆ ಮೂಲೆಗಳನ್ನು ತಲುಪಿದಾಗ, ಅವು ಆರ್ಥಿಕ ಮೌಲ್ಯವನ್ನು ಮಾತ್ರವಲ್ಲದೆ ರಾಷ್ಟ್ರೀಯ ಹೆಮ್ಮೆ ಮತ್ತು ಸ್ವಾವಲಂಬನೆಯನ್ನು ಸಹ ಒಳಗೊಂಡಿರುತ್ತವೆ ಎಂದು ಹೇಳಿದರು.
ಸೆಪ್ಟೆಂಬರ್ 22 ರಿಂದ ಹೆಚ್ಚಿನ ವಸ್ತುಗಳಿಗೆ ಈ ನಿರ್ಧಾರಗಳು ಜಾರಿಗೆ ಬರಲಿವೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬುಧವಾರ ತಿಳಿಸಿದ್ದಾರೆ.
5% ಮತ್ತು 18% ಎಂಬ ಎರಡು ದರಗಳ ಹೊರತಾಗಿ, ಹೊಸ GST ವ್ಯವಸ್ಥೆಯು ತಂಬಾಕಿನಂತಹ ಸರಕುಗಳು ಮತ್ತು ದೊಡ್ಡ ಕಾರುಗಳು, ವಿಹಾರ ನೌಕೆಗಳು ಮತ್ತು ಹೆಲಿಕಾಪ್ಟರ್ಗಳಂತಹ ಐಷಾರಾಮಿ ವಸ್ತುಗಳ ಮೇಲೆ 40% “ವಿಶೇಷ ದರ” ವನ್ನು ಸಹ ಒಳಗೊಂಡಿರುತ್ತದೆ.
ಬೆಂಗಳೂರು: ನಾವು ಮುಂದಿನ ದಿನಗಳಲ್ಲಿ ಅಧಿಕಾರಕ್ಕೆ ಬಂದರೆ ಎಚ್.ಡಿ.ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡುತ್ತೇವೆ ಎಂದು ವಿಜಯೇಂದ್ರ ಹಾಗೂ ಆರ್.ಅಶೋಕ್ ಹೇಳಲಿ…
ಬೆಂಗಳೂರು: ಮನರೇಗಾ ಯೋಜನೆಯ ಹೆಸರನ್ನು ವಿಬಿ ಜೀ ರಾಮ್ ಜೀ ಎಂದು ಬದಲಾವಣೆ ಮಾಡಿದ ಕೇಂದ್ರ ಸರ್ಕಾರದ ನಡೆ ವಿರುದ್ಧ…
ಮೈಸೂರು: ವಿಧಾನಮಂಡಲ ಜಂಟಿ ಅಧಿವೇಶನದ ದಿನದಂದು ರಾಜ್ಯಪಾಲರ ವಿರುದ್ಧ ರಾಜ್ಯ ಕಾಂಗ್ರೆಸ್ ಸರ್ಕಾರ ನಡೆದುಕೊಂಡ ಕ್ರಮ ಕರ್ನಾಟಕದ ಇತಿಹಾಸದಲ್ಲೇ ನಡೆದ…
ಮ್ಯಾನ್ಮಾರ್ ಗಡಿಯಲ್ಲಿ ಭಾರತೀಯ ಸೇನೆ ನಡೆಸಿದ ಅತ್ಯಂತ ಸಾಹಸಮಯ ಕೋವರ್ಟ್ ಆಪರೇಷನ್ ವಿವರಗಳು ಈಗ ಬೆಳಕಿಗೆ ಬಂದಿವೆ. ಕಳೆದ ವರ್ಷ…
ಡಾಕಾ: ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ವ್ಯಕ್ತಿಯನ್ನು ಜೀವಂತವಾಗಿ ಸುಟ್ಟು ಹಾಕಲಾಗಿದೆ. ಕುಟುಂಬವು ಇದನ್ನು ಯೋಜಿತ ಕೊಲೆ ಎಂದು ಆರೋಪಿಸಿದೆ. ಬಾಂಗ್ಲಾದೇಶದ…
ಮೈಸೂರು: ಕೌಟುಂಬಿಕ ಕಲಹದಿಂದ ಬೇಸತ್ತು ಇಬ್ಬರು ಮಕ್ಕಳನ್ನು ತಾಯಿ ಹತ್ಯೆ ಮಾಡಿ, ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು…