ಜಮ್ಮು-ಕಾಶ್ಮೀರ: ಭಾರತ-ಪಾಕ್ ನಡುವಿನ ಕದನ ವಿರಾಮ ಒಪ್ಪಂದವನ್ನು ಜಮ್ಮು-ಕಾಶ್ಮೀರ ಸಿಎಂ ಓಮರ್ ಅಬ್ದುಲ್ಲಾ ಸ್ವಾಗತಿಸಿದ್ದಾರೆ.
ಈ ಕುರಿತು ಮಾತನಾಡಿರುವ ಅವರು, ಎರಡ್ಮೂರು ದಿನಗಳ ಹಿಂದೆಯೇ ಈ ಕದನ ವಿರಾಮ ಬಂದಿದ್ದರೆ, ಬಹುಶಃ ನಾವು ನೋಡಿದ ರಕ್ತಪಾತ ನಡೆಯುತ್ತಿರಲಿಲ್ಲ. ಕೆಲವರ ಅಮೂಲ್ಯ ಜೀವ ಸುರಕ್ಷಿತವಾಗಿರುತ್ತಿತ್ತು ಎಂದರು.
ಭಾರತ-ಪಾಕ್ ಉದ್ವಿಗ್ನತೆ ನಡುವೆ ಹಾನಿಗೊಳಗಾದವರಿಗೆ ಪರಿಹಾರ ನೀಡುವುದು ನಮ್ಮ ಕರ್ತವ್ಯವಾಗಿದೆ. ಅಮೂಲ್ಯ ಜೀವಗಳ ನಷ್ಟಕ್ಕೆ ಪರಿಹಾರ ಘೋಷಣೆ ಮಾಡಿದ್ದೇವೆ. ಈಗ ಗಾಯಗೊಂಡವರಿಗೆ ಪರಿಹಾರ ನೀಡಬೇಕಿದೆ ಎಂದರು.
ಭಾರತ ಹಾಗೂ ಪಾಕಿಸ್ತಾನದ ನಡುವಿನ ಶಾಶ್ವತ ಸ್ನೇಹಕ್ಕಾಗಿ ತಮ್ಮ ಪಕ್ಷವೂ ಯಾವಾಗಲೂ ಪ್ರತಿಪಾದಿಸುತ್ತದೆ. ಆದರೆ. ನಂಬಿಕೆಯ ಕೊರತೆಯನ್ನು ನಿವಾರಿಸುವ ಪ್ರಾಥಮಿಕ ಜವಾಬ್ದಾರಿಯು ಪಾಕಿಸ್ತಾನದ ಮೇಲಿದೆ ಎಂದು ಹೇಳಿದರು.
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…
ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಸಾರ್ವಜನಿಕ ಸಂಸ್ಥೆಗಳಿಗೆ ಅತ್ಯಂತ ಮುಖ್ಯವಾದ ಪಾಠ ಯಾವುದೇ ನಾಗರಿಕನು ತನ್ನ…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ದೈಹಿಕ ನ್ಯೂನತೆ ನಡುವೆ ಆರ್ಥಿಕ ಪ್ರಗತಿಯ ಮೆಟ್ಟಿಲೇರಿದ ಮಹಿಳೆ ಹರ್ಯಾಣದ ಅಂಬಾಲಾದ ಹಿಮಾಂಶಿಕಾ ಶರ್ಮಾರಿಗೆ…
ಕೆ.ಬಿ.ರಮೇಶನಾಯಕ ರಾಜ್ಯ ಸರ್ಕಾರದ ಗಡುವಿನೊಳಗೆ ಪ್ರಕ್ರಿಯೆ ಮುಗಿಸಲು ಇಲಾಖೆ ಕಸರತ್ತು. ಮೈಸೂರು: ನಕಲಿ ಫಲಾನುಭವಿಗಳನ್ನು ಕೈಬಿಟ್ಟು ಪಾರದರ್ಶಕತೆ ಕಾಯ್ದುಕೊಳ್ಳಲು ಹಾಗೂ…