ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದಿಂದಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯ ಆತಂಕ ಸೃಷ್ಠಿಯಾಗಿರುವ ನಡುವೆ ಕೇಂದ್ರ ಸರ್ಕಾರ ಜನರಿಗೆ ಗುಡ್ ನ್ಯೂಸ್ ನೀಡಿದೆ. ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಗಣನೀಯವಾಗಿ ಕಡಿತಗೊಳಿಸಲಾಗಿದೆ.
ಪೆಟ್ರೋಲ್ನ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್ಗೆ 13ರಿಂದ 3ಕ್ಕೆ ಇಳಿಸಲಾಗಿದೆ. ಡೀಸೆಲ್ನ ಮೇಲಿನ ಸುಂಕವನ್ನು ಪ್ರತಿ ಲೀಟರ್ಗೆ 10ರಿಂದ ಶೂನ್ಯಕ್ಕೆ (ಸಂಪೂರ್ಣ ರದ್ದು) ಇಳಿಸಿ ಪ್ರಕಟಣೆ ಹೊರಡಿಸಿದೆ. ಹೀಗಾಗಿ, ಬೆಲೆ ಏರಿಕೆ ಹೊರೆಯಿಂದ ಜನರಿಗೆ ನಿರಾಳ ನೀಡುವ ಸಾಧ್ಯತೆ ಇದೆ.
ಹೊರ್ಮುಜ್ ಜಲಸಂಧಿ ನಿರ್ಬಂಧದಿಂದ ಜಾಗತಿಕ ತೈಲ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಹೀಗಾಗಿ ಖಾಸಗಿ ಕಂಪನಿ ನಯಾರಾ ಎನರ್ಜಿ ಇತ್ತೀಚೆಗೆ ಪೆಟ್ರೋಲ್ ಬೆಲೆಯನ್ನು 5ರೂ. ಮತ್ತು ಡೀಸೆಲ್ ಬೆಲೆಯನ್ನು 3ರೂ. ಹೆಚ್ಚಿಸಿತ್ತು.
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…
ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…