ನವದೆಹಲಿ: ಮಾಜಿ ಪಿಎಂ ಮನಮೋಹನ್ ಸಿಂಗ್ ನಿಧನರಾದ ಹಿನ್ನೆಲೆಯಲ್ಲಿ ಅವರ ಸ್ಮಾರಕವನ್ನು ನಿರ್ಮಿಸುವಂತೆ ಎಐಸಿಸಿ ಅಧ್ಯಕ್ಷ ಪತ್ರದ ಮೂಲಕ ಕೋರಿದ್ದರು. ಇದೀಗ ಆ ಪತ್ರಕ್ಕೆ ಸಮ್ಮತಿಸಿ ಸಿಂಗ್ ಅವರ ಸ್ಮಾರಕ್ಕೆ ಭೂಮಿ ನೀಡಲಾಗುವುದು ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಇಂದು(ಡಿಸೆಂಬರ್.28) ಮನಮೊಹನ್ ಸಿಂಗ್ ಅವರ ಅಂತ್ಯಕ್ರಿಯೆ ಪೂರ್ಣಗೊಂಡ ನಂತರ ಈ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪ್ರತಿಕ್ರಿಯೆ ನೀಡಿದ್ದು, ಸಿಂಗ್ ಅವರ ಸ್ಮಾರಕ್ಕೆ ಭೂಮಿಯನ್ನು ನೀಡಲು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಸೂಚಿಲಾಗುತ್ತದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ತಿಳಿಸಿದ್ದಾರೆ.
ಇನ್ನು ಕೇಂದ್ರ ವ್ಯವಹಾರಗಳ ಸಚಿವಾಲಯ ಈ ಬಗ್ಗೆ ಹೇಳಿಕೆ ನೀಡಿ, ಅಂತ್ಯಕ್ರಿಯೆ ಹಾಗೂ ವಿಧಿವಿಧಾನಗಳು ಮುಂದುವರಿಸಬಹುದು. ಏಕೆಂದರೆ ಟ್ರಸ್ಟ್ ರಚನೆ ಮತ್ತು ಜಾಗ ಹಂಚಿಕೆಯಾಗಬೇಕಿದೆ ಎಂದು ಸ್ಪಷ್ಟಪಡಿಸಿದೆ.
ಮನಮೋಹನ್ ಸಿಂಗ್ ಅವರು ಗುರುವಾರ ತಡರಾತ್ರಿ ನಿಧನರಾದ ಹಿನ್ನೆಲೆಯಲ್ಲಿ ಅವರ ಅಂತ್ಯಕ್ರಿಯೆ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರಕ್ಕೆ ಸ್ಮಾರಕ ನಿರ್ಮಾಣ ಮಾಡುವಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪತ್ರ ಬರೆದಿದ್ದರು. ಈ ಪತ್ರಕ್ಕೆ ಕೇಂದ್ರ ಸರ್ಕಾರ ಸಕರಾತ್ಮವಾಗಿ ಸ್ಪಂದಿಸಿ ಸ್ಮಾರಕ ನಿರ್ಮಾಣಕ್ಕೆ ಭೂಮಿಯನ್ನು ನೀಡಲಾಗುವುದು ಎಂದು ಒಪ್ಪಿಗೆ ಸೂಚಿಸಿದೆ.
ಕಠ್ಮಂಡು : ನೇಪಾಳದ ರಾಷ್ಟ್ರೀಯ ಸ್ವತಂತ್ರ ಪಕ್ಷದ ಹಿರಿಯ ನಾಯಕ ಬಾಲೇಂದ್ರ ಶಾ ಅವರು ದೇಶದ ನೂತನ ಪ್ರಧಾನಿಯಾಗಿ ಇಂದು(ಮಾರ್ಚ್.27)…
ಮಂಡ್ಯ : ವೈರಮುಡಿ ಬ್ರಹ್ಮೋತ್ಸವಕ್ಕೆ ಆಗಮಿಸುವ ಭಕ್ತಾದಿಗಳ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಪಾಲನೆ ಹಾಗೂ ಭದ್ರತೆಗಾಗಿ ಸೂಕ್ತ ಕ್ರಮಗಳನ್ನು…
ಬೆಂಗಳೂರು : ಬೆಂಗಳೂರು ಉತ್ತರ ತಾಲ್ಲೂಕು ಜಾರಕಬಂಡೆ ಶ್ರೀಗಂಧದ ಕಾವಲ್ನಲ್ಲಿ ವಾಯುಪಡೆಯ ವಶದಲ್ಲಿರುವ 444 ಎಕರೆ ಅರಣ್ಯಭೂಮಿಯ ಮರು ವಶಕ್ಕೆ…
ಬೆಂಗಳೂರು : ವಿದ್ಯಾರ್ಥಿಗಳಿಗೆ ಹಿಂದಿ ಪಾಸ್ ಕಡ್ಡಾಯ ಮಾಡದಂತೆ ಕನ್ನಡಪರ ಸಂಘಟನೆಗಳಿಂದ ಒತ್ತಾಯ ಕೇಳಿಬಂದ ಬೆನ್ನಲ್ಲೇ ರಾಜ್ಯದಲ್ಲಿ ದ್ವಿಭಾಷಾ ಸೂತ್ರ…
ಬೆಂಗಳೂರು : ಬೆಂಗಳೂರು ಉತ್ತರ ತಾಲ್ಲೂಕು ಜಾರಕಬಂಡೆ ಶ್ರೀಗಂಧದ ಕಾವಲ್ನಲ್ಲಿ ವಾಯುಪಡೆಯ ವಶದಲ್ಲಿರುವ 444 ಎಕರೆ ಅರಣ್ಯಭೂಮಿಯ ಮರು ವಶಕ್ಕೆ…
ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದಿಂದಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯ ಆತಂಕ ಸೃಷ್ಠಿಯಾಗಿರುವ ನಡುವೆ ಕೇಂದ್ರ…