ನವದೆಹಲಿ: ಮಾಜಿ ಪಿಎಂ ಮನಮೋಹನ್ ಸಿಂಗ್ ನಿಧನರಾದ ಹಿನ್ನೆಲೆಯಲ್ಲಿ ಅವರ ಸ್ಮಾರಕವನ್ನು ನಿರ್ಮಿಸುವಂತೆ ಎಐಸಿಸಿ ಅಧ್ಯಕ್ಷ ಪತ್ರದ ಮೂಲಕ ಕೋರಿದ್ದರು. ಇದೀಗ ಆ ಪತ್ರಕ್ಕೆ ಸಮ್ಮತಿಸಿ ಸಿಂಗ್ ಅವರ ಸ್ಮಾರಕ್ಕೆ ಭೂಮಿ ನೀಡಲಾಗುವುದು ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಇಂದು(ಡಿಸೆಂಬರ್.28) ಮನಮೊಹನ್ ಸಿಂಗ್ ಅವರ ಅಂತ್ಯಕ್ರಿಯೆ ಪೂರ್ಣಗೊಂಡ ನಂತರ ಈ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪ್ರತಿಕ್ರಿಯೆ ನೀಡಿದ್ದು, ಸಿಂಗ್ ಅವರ ಸ್ಮಾರಕ್ಕೆ ಭೂಮಿಯನ್ನು ನೀಡಲು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಸೂಚಿಲಾಗುತ್ತದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ತಿಳಿಸಿದ್ದಾರೆ.
ಇನ್ನು ಕೇಂದ್ರ ವ್ಯವಹಾರಗಳ ಸಚಿವಾಲಯ ಈ ಬಗ್ಗೆ ಹೇಳಿಕೆ ನೀಡಿ, ಅಂತ್ಯಕ್ರಿಯೆ ಹಾಗೂ ವಿಧಿವಿಧಾನಗಳು ಮುಂದುವರಿಸಬಹುದು. ಏಕೆಂದರೆ ಟ್ರಸ್ಟ್ ರಚನೆ ಮತ್ತು ಜಾಗ ಹಂಚಿಕೆಯಾಗಬೇಕಿದೆ ಎಂದು ಸ್ಪಷ್ಟಪಡಿಸಿದೆ.
ಮನಮೋಹನ್ ಸಿಂಗ್ ಅವರು ಗುರುವಾರ ತಡರಾತ್ರಿ ನಿಧನರಾದ ಹಿನ್ನೆಲೆಯಲ್ಲಿ ಅವರ ಅಂತ್ಯಕ್ರಿಯೆ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರಕ್ಕೆ ಸ್ಮಾರಕ ನಿರ್ಮಾಣ ಮಾಡುವಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪತ್ರ ಬರೆದಿದ್ದರು. ಈ ಪತ್ರಕ್ಕೆ ಕೇಂದ್ರ ಸರ್ಕಾರ ಸಕರಾತ್ಮವಾಗಿ ಸ್ಪಂದಿಸಿ ಸ್ಮಾರಕ ನಿರ್ಮಾಣಕ್ಕೆ ಭೂಮಿಯನ್ನು ನೀಡಲಾಗುವುದು ಎಂದು ಒಪ್ಪಿಗೆ ಸೂಚಿಸಿದೆ.
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…
ಮಂಡ್ಯ: ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…