ನವದೆಹಲಿ: ಮಾಜಿ ಪಿಎಂ ಮನಮೋಹನ್ ಸಿಂಗ್ ನಿಧನರಾದ ಹಿನ್ನೆಲೆಯಲ್ಲಿ ಅವರ ಸ್ಮಾರಕವನ್ನು ನಿರ್ಮಿಸುವಂತೆ ಎಐಸಿಸಿ ಅಧ್ಯಕ್ಷ ಪತ್ರದ ಮೂಲಕ ಕೋರಿದ್ದರು. ಇದೀಗ ಆ ಪತ್ರಕ್ಕೆ ಸಮ್ಮತಿಸಿ ಸಿಂಗ್ ಅವರ ಸ್ಮಾರಕ್ಕೆ ಭೂಮಿ ನೀಡಲಾಗುವುದು ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಇಂದು(ಡಿಸೆಂಬರ್.28) ಮನಮೊಹನ್ ಸಿಂಗ್ ಅವರ ಅಂತ್ಯಕ್ರಿಯೆ ಪೂರ್ಣಗೊಂಡ ನಂತರ ಈ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪ್ರತಿಕ್ರಿಯೆ ನೀಡಿದ್ದು, ಸಿಂಗ್ ಅವರ ಸ್ಮಾರಕ್ಕೆ ಭೂಮಿಯನ್ನು ನೀಡಲು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಸೂಚಿಲಾಗುತ್ತದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ತಿಳಿಸಿದ್ದಾರೆ.
ಇನ್ನು ಕೇಂದ್ರ ವ್ಯವಹಾರಗಳ ಸಚಿವಾಲಯ ಈ ಬಗ್ಗೆ ಹೇಳಿಕೆ ನೀಡಿ, ಅಂತ್ಯಕ್ರಿಯೆ ಹಾಗೂ ವಿಧಿವಿಧಾನಗಳು ಮುಂದುವರಿಸಬಹುದು. ಏಕೆಂದರೆ ಟ್ರಸ್ಟ್ ರಚನೆ ಮತ್ತು ಜಾಗ ಹಂಚಿಕೆಯಾಗಬೇಕಿದೆ ಎಂದು ಸ್ಪಷ್ಟಪಡಿಸಿದೆ.
ಮನಮೋಹನ್ ಸಿಂಗ್ ಅವರು ಗುರುವಾರ ತಡರಾತ್ರಿ ನಿಧನರಾದ ಹಿನ್ನೆಲೆಯಲ್ಲಿ ಅವರ ಅಂತ್ಯಕ್ರಿಯೆ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರಕ್ಕೆ ಸ್ಮಾರಕ ನಿರ್ಮಾಣ ಮಾಡುವಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪತ್ರ ಬರೆದಿದ್ದರು. ಈ ಪತ್ರಕ್ಕೆ ಕೇಂದ್ರ ಸರ್ಕಾರ ಸಕರಾತ್ಮವಾಗಿ ಸ್ಪಂದಿಸಿ ಸ್ಮಾರಕ ನಿರ್ಮಾಣಕ್ಕೆ ಭೂಮಿಯನ್ನು ನೀಡಲಾಗುವುದು ಎಂದು ಒಪ್ಪಿಗೆ ಸೂಚಿಸಿದೆ.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…