ದೇಶ- ವಿದೇಶ

ಶೌರ್ಯ ಪ್ರಶಸ್ತಿ ಪಡೆದವರಿಗೆ ಗುಡ್‌ನ್ಯೂಸ್‌ ಕೊಟ್ಟ ಕೇಂದ್ರ ಸರ್ಕಾರ: ಏನದು ಗೊತ್ತಾ.?

ನವದೆಹಲಿ: ಕೇಂದ್ರ ಸರ್ಕಾರವು ಭೂಸೇನೆ, ನೌಕಾಪಡೆ ಮತ್ತು ವಾಯುಪಡೆಯಿಂದ ಶೌರ್ಯ ಪ್ರಶಸ್ತಿ ಪಡೆದವರಿಗೆ ಜೀವಿತಾವಧಿಯ ರೈಲು ಪ್ರಯಾಣವನ್ನು ಉಚಿತವಾಗಿ ನೀಡಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿದೆ.

ಶೌರ್ಯ ಪ್ರಶಸ್ತಿ ಪಡೆದ ಸಶಸ್ತ್ರ ಪಡೆಗಳ ಎಲ್ಲಾ ಸಿಬ್ಬಂದಿ, ಪ್ರಶಸ್ತಿ ಪಡೆದವರು ಮೃತಪಟ್ಟಿದ್ದರೆ ಅವರ ಹೆಂಡತಿ ಅಥವಾ ಗಂಡ ಹಾಗೂ ಅವರು ಮರುಮದುವೆಯಾಗುವವರೆಗೂ ಪ್ರಯೋಜನ ಪಡೆಯಬಹುದು. ಒಂದು ವೇಳೆ ಮೃತರಾದ ಬಳಿಕ ಪ್ರಶಸ್ತಿ ಘೋಷಣೆಯಾಗಿದ್ದರೆ ಅಥವಾ ಅವರು ಅವಿವಾಹಿತರಾಗಿದ್ದಲ್ಲಿ ಪೋಷಕರು ಪ್ರಯೋಜನ ಪಡೆಯಲು ಅರ್ಹರಾಗಿರುತ್ತಾರೆ ಎಂದು ತಿಳಿಸಿದೆ.

ಈ ಸೌಲಭ್ಯದ ಅಡಿಯಲ್ಲಿ ಫಲಾನುಭವಿಗಳು ತಮ್ಮ ಓರ್ವ ಸಹಚರನೊಂದಿಗೆ ಭಾರತೀಯ ರೈಲ್ವೆಯಲ್ಲಿ ಉಚಿತ ಪ್ರಯಾಣ ಮಾಡಬಹುದು. ಈ ಸೌಲಭ್ಯ ಪ್ರಥಮ ದರ್ಜೆ, ಎರಡನೇ ಎಸಿ, ಎಸಿ ಚೇರ್‌ ಕಾರ್‌ ವರ್ಗಗಳಿಗೆ ಅನ್ವಯಿಸುತ್ತದೆ.

ದೇಶಕ್ಕೆ ಅಪ್ರತಿಮ ಸೇವೆ ಸಲ್ಲಿಸಿದ ಸೈನಿಕರು ಮತ್ತು ಅವರ ಕುಟುಂಬಗಳಿಗೆ ಗೌರವಾನ್ವಿತ ಮತ್ತು ಆರಾಮದಾಯಕ ಪ್ರಯಾಣವನ್ನು ಒದಗಿಸುವ ಗುರಿಯೊಂದಿಗೆ ಈ ಸೌಲಭ್ಯ ನೀಡಲಾಗಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

10 hours ago

ಕೆಎಸ್‌ಓಯುಗೆ ನೂತನ ಕುಲಪತಿಯಾಗಿ ಡಾ.ಜ್ಞಾನ ಪ್ರಕಾಶ್ ನೇಮಕ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…

11 hours ago

ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಮಹಿಳೆ

ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…

12 hours ago

ಮಾಜಿ ಸಿಎಂ ದೇವರಾಜ ಅರಸು ನೂತನ ಪ್ರತಿಮೆ ಅನಾವರಣ

ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…

13 hours ago

ತುಂಗಭದ್ರಾ ಜಲಾಶಯದ ನೂತನ ಕ್ರಸ್ಟ್ ಗೇಟ್: ಮೂವರು ಸಿಎಂಗಳಿಂದ ಲೋಕಾರ್ಪಣೆ

ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್‌ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.…

13 hours ago

ಮಾವು ಬೆಳೆಗಾರರ ನೆರವಿಗೆ ಬಂದ ಕೇಂದ್ರ ಸರ್ಕಾರ: ತೋತಾಪುರಿಯ ಒಂದು ಕ್ವಿಂಟಲ್‌ಗೆ ₹1,750 ನಿಗದಿ

ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…

14 hours ago