ದೇಶ- ವಿದೇಶ

ಶೌರ್ಯ ಪ್ರಶಸ್ತಿ ಪಡೆದವರಿಗೆ ಗುಡ್‌ನ್ಯೂಸ್‌ ಕೊಟ್ಟ ಕೇಂದ್ರ ಸರ್ಕಾರ: ಏನದು ಗೊತ್ತಾ.?

ನವದೆಹಲಿ: ಕೇಂದ್ರ ಸರ್ಕಾರವು ಭೂಸೇನೆ, ನೌಕಾಪಡೆ ಮತ್ತು ವಾಯುಪಡೆಯಿಂದ ಶೌರ್ಯ ಪ್ರಶಸ್ತಿ ಪಡೆದವರಿಗೆ ಜೀವಿತಾವಧಿಯ ರೈಲು ಪ್ರಯಾಣವನ್ನು ಉಚಿತವಾಗಿ ನೀಡಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿದೆ.

ಶೌರ್ಯ ಪ್ರಶಸ್ತಿ ಪಡೆದ ಸಶಸ್ತ್ರ ಪಡೆಗಳ ಎಲ್ಲಾ ಸಿಬ್ಬಂದಿ, ಪ್ರಶಸ್ತಿ ಪಡೆದವರು ಮೃತಪಟ್ಟಿದ್ದರೆ ಅವರ ಹೆಂಡತಿ ಅಥವಾ ಗಂಡ ಹಾಗೂ ಅವರು ಮರುಮದುವೆಯಾಗುವವರೆಗೂ ಪ್ರಯೋಜನ ಪಡೆಯಬಹುದು. ಒಂದು ವೇಳೆ ಮೃತರಾದ ಬಳಿಕ ಪ್ರಶಸ್ತಿ ಘೋಷಣೆಯಾಗಿದ್ದರೆ ಅಥವಾ ಅವರು ಅವಿವಾಹಿತರಾಗಿದ್ದಲ್ಲಿ ಪೋಷಕರು ಪ್ರಯೋಜನ ಪಡೆಯಲು ಅರ್ಹರಾಗಿರುತ್ತಾರೆ ಎಂದು ತಿಳಿಸಿದೆ.

ಈ ಸೌಲಭ್ಯದ ಅಡಿಯಲ್ಲಿ ಫಲಾನುಭವಿಗಳು ತಮ್ಮ ಓರ್ವ ಸಹಚರನೊಂದಿಗೆ ಭಾರತೀಯ ರೈಲ್ವೆಯಲ್ಲಿ ಉಚಿತ ಪ್ರಯಾಣ ಮಾಡಬಹುದು. ಈ ಸೌಲಭ್ಯ ಪ್ರಥಮ ದರ್ಜೆ, ಎರಡನೇ ಎಸಿ, ಎಸಿ ಚೇರ್‌ ಕಾರ್‌ ವರ್ಗಗಳಿಗೆ ಅನ್ವಯಿಸುತ್ತದೆ.

ದೇಶಕ್ಕೆ ಅಪ್ರತಿಮ ಸೇವೆ ಸಲ್ಲಿಸಿದ ಸೈನಿಕರು ಮತ್ತು ಅವರ ಕುಟುಂಬಗಳಿಗೆ ಗೌರವಾನ್ವಿತ ಮತ್ತು ಆರಾಮದಾಯಕ ಪ್ರಯಾಣವನ್ನು ಒದಗಿಸುವ ಗುರಿಯೊಂದಿಗೆ ಈ ಸೌಲಭ್ಯ ನೀಡಲಾಗಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

5 hours ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

5 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

16 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

16 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

16 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

16 hours ago