ತಿರುವನಂತಪುರ: 23 ವರ್ಷದ ಮಹಿಳೆ ತನ್ನ ಬಾಯ್ಫ್ರೆಂಡ್ಗೆ ಪಾನೀಯದಲ್ಲಿ ವಿಷ ಬೆರೆಸಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಮರಣದಂಡನೆ ಶಿಕ್ಷೆ ವಿಧಿಸಿದೆ.
ಗ್ರೀಷ್ಮಾ ಎಂಬ ಮಹಿಳೆ ತನ್ನ ಗೆಳೆಯ ಶರೋನ್ ರಾಜ್ಗೆ ಪ್ಯಾರಾಕ್ವಾಟ್ ಎಂಬ ಕಳೆನಾಶಕ ನೀಡಿ ಕೊಲೆ ಮಾಡಿದ್ದಳು.
ತಮಿಳುನಾಡಿನ ಸೇನಾ ಸಿಬ್ಬಂದಿಯೊಂದಿಗೆ ಗ್ರೀಷ್ಮಾಳ ವಿವಾಹ ನಿಶ್ಚಯವಾಗಿತ್ತು. ಆದರೆ ಆಕೆಯ ಬಾಯ್ಫ್ರೆಂಡ್ ಶರೋನ್ ರಾಜ್ ಮದುವೆಗೆ ಅಡ್ಡಿ ಪಡಿಸುವುದಾಗಿ ಹೇಳುತ್ತಿದ್ದ. ಈ ಹಿನ್ನೆಲೆಯಲ್ಲಿ ಪಾನೀಯದಲ್ಲಿ ವಿಷ ಬೆರೆಸಿ ಪ್ರಿಯಕರ ಶರೋನ್ ರಾಜ್ ಕೊಲೆ ಮಾಡಿದ್ದಳು. ವಿಷ ಕುಡಿದ 11 ದಿನಗಳ ನಂತರ ಬಹು ಅಂಗಾಂಗಗಳ ವೈಫಲ್ಯದಿಂದ ಆತ ಸಾವನ್ನಪ್ಪಿದ್ದನು.
ಘಟನೆ ನಡೆದು ಎರಡು ವರ್ಷಗಳ ನಂತರ ಗ್ರೀಷ್ಮಾ ಮತ್ತು ಆಕೆಯ ಚಿಕ್ಕಪ್ಪ ದೋಷಿಗಳೆಂದು ಸ್ಥಳೀಯ ನ್ಯಾಯಾಲಯ ತೀರ್ಪು ನೀಡಿದೆ. ಈ ಮೂಲಕ ಕೇರಳದಲ್ಲಿ ಮರಣದಂಡನೆ ಶಿಕ್ಷೆಗೆ ಒಳಗಾದ ಅತ್ಯಂತ ಕಿರಿಯ ಮಹಿಳೆ ಇವಳಾಗಿದ್ದಾಳೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…