ಮೈಸೂರು: ಇತ್ತೀಚೆಗಷ್ಟೆ ಬಿಡುಗಡೆಗೊಂಡ ತಮಿಳು ಸಿನಿಮಾ ತಂಗಳಾನ್ ಉತ್ತಮ ವಿಮರ್ಶೆಗೆ ಒಳಪಟ್ಟಿದೆ. ಅಷ್ಟೆ ಅಲ್ಲದೇ, ಬಾಕ್ಸ್ ಆಫೀಸ್ನಲ್ಲಿ ತನ್ನ ಗಳಿಕೆಯನ್ನು ಸಹ ಹೆಚ್ಚಿಸಿಕೊಂಡಿದೆ.
ತಮಿಳಿನ ಜನಪ್ರಿಯ ನಿರ್ದೇಶಕ ಹಾಗೂ ಅಂಬೇಡ್ಕರ್ವಾದಿ ಪಾ.ರಂಜಿತ್ ನಿರ್ದೇಶನದ ಸಿನಿಮಾವಾದ ತಂಗಳಾನ್ನಲ್ಲಿ ಚಿಯಾನ್ ವಿಕ್ರಂ, ಪಾರ್ವತಿ ಮೆನನ್ ಸೇರಿದಂತೆ ಹಲವು ಪ್ರತಿಭಾವಂತ ಕಲಾವಿದರು ನಟಿಸಿದ್ದಾರೆ. ಚಿನ್ನದ ಗಣಿಯ ಕತೆಯನ್ನು ಒಳಗೊಂಡಿರುವ ಈ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಉತ್ತಮ ಪ್ರದರ್ಶನ ಕಾಣುತ್ತಿದೆ. ಈ ಹೊತ್ತಿನಲ್ಲಿ ಸಿನಿಮಾಕ್ಕೆ ಉತ್ತರ ಭಾರತದಿಂದಲೂ ಬೇಡಿಕೆ ಬಂದಿದ್ದು, ಸಿನಿಮಾ ಇದೀಗ ಹಿಂದಿಯಲ್ಲಿ ಬಿಡುಗಡೆ ಆಗುತ್ತಿದೆ.
ತಂಗಳಾನ್ ಆಗಸ್ಟ್ 15 ರಂದು ತಮಿಳು, ಮಲಯಾಳಂ ಹಾಗೂ ತೆಲುಗು ಭಾಷೆಯಲ್ಲಿ ಬಿಡುಗಡೆ ಆಗಿತ್ತು. ಇದೀಗ ದಕ್ಷಿಣ ಭಾರತದಲ್ಲಿ ಉತ್ತಮ ಪ್ರದರ್ಶನ ಕಂಡ ತಂಗಲಾನ್ ಸಿನಿಮಾಕ್ಕೆ ಉತ್ತರ ಭಾರತದಲ್ಲೂ ಬಹು ಬೇಡಿಕೆ ಹುಟ್ಟಿಕೊಂಡಿದೆ. ಈ ಕಾರಣ ಸಿನಿಮಾವನ್ನು ಹಿಂದಿಗೆ ಡಬ್ ಮಾಡಿ ಉತ್ತರ ಭಾರತದಲ್ಲಿ ಬಿಡುಗಡೆ ಮಾಡಲು ಚಿತ್ರತಂಡ ಮುಂದಾಗಿದೆ. ಇದೇ ತಿಂಗಳೂ ಆಗಸ್ಟ್ 30 ರಂದು ತಂಗಲಾನ್ ಸಿನಿಮಾದ ಹಿಂದಿ ಆವೃತ್ತಿ ಉತ್ತರ ಭಾರತದ ಪ್ರಮುಖ ನಗರಗಳಲ್ಲಿ ಬಿಡುಗಡೆಯಾಗಲಿದೆ.
ಮೈಸೂರು: ರಾಜ್ಯ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಕೇಂದ್ರ ಬಜೆಟ್ ಬಗ್ಗೆ ಟೀಕೆ ಮಾಡಲಾಗುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ…
ಮಡಿಕೇರಿ: ಎಸ್ಡಿಪಿಐ ರಾಜ್ಯಾಧ್ಯಕ್ಷ ಮಜಿದ್ ಪ್ರಯಾಣಿಸುತ್ತಿದ್ದ ಕಾರ್ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಅದೃಷ್ಟವಶಾತ್ ಪಾರಾಗಿದ್ದಾರೆ. ಕೊಡಗು ಜಿಲ್ಲೆ ಕುಶಾಲನಗರ ತಾಲ್ಲೂಕಿನ…
ಮೈಸೂರಿನ ಜಲಪುರಿ ಬಡಾವಣೆಯ ಪೊಲೀಸ್ ಆಸ್ಪತ್ರೆ ಮುಂಭಾಗದ ರಸ್ತೆ ತೀರಾ ಹದಗೆಟ್ಟಿದೆ. ಕಾಳಿಕಾಂಬ ರಸ್ತೆ ದುರಸ್ತಿ ಕಾಮಗಾರಿ ನಡೆಯುತ್ತಿರುವುದರಿಂದ ಕೆಲವು…
೨೦೦೮ರಲ್ಲಿ ಭಾರತದಲ್ಲಿ ಶುರುವಾದ ‘ಇಂಡಿಯನ್ ಪ್ರೀಮಿಯರ್ ಲೀಗ್’ (ಐಪಿಎಲ್) ಕ್ರಿಕೆಟ್ ಆಟವು ಇಡೀ ದೇಶದ ಗಮನ ಸೆಳೆದಿದೆ. ಐಪಿಎಲ್ ತಂಡಗಳಲ್ಲಿ …
ಬೆಂಗಳೂರಿನ ಜೀವನಾಡಿಯಾಗಿರುವ ಮೆಟ್ರೋ ರೈಲು ಪ್ರಯಾಣ ದರವನ್ನು ಹತ್ತು ತಿಂಗಳ ಅಲ್ಪಾವಽಯಲ್ಲಿ ಎರಡನೇ ಬಾರಿಗೆ ಏರಿಸಲು ಮುಂದಾಗಿರುವುದು ಅತ್ಯಂತ ಖಂಡನೀಯ. …
ಮೈಸೂರಿನ ರಾಮಕೃಷ್ಣ ನಗರದ ಒಳಚರಂಡಿಗೆ ಹೊಸದಾಗಿ ಪೈಪ್ಗಳನ್ನು ಅಳವಡಿಸಲು ರಸ್ತೆಯನ್ನು ಅಗೆಯಲಾಗಿತ್ತು. ಪೈಪ್ಗಳನ್ನು ಅಳವಡಿಸಿ ತಿಂಗಳುಗಳೇ ಕಳೆದರೂ ರಸ್ತೆಗೆ ಡಾಂಬರ್…