ಮೈಸೂರು: ಇತ್ತೀಚೆಗಷ್ಟೆ ಬಿಡುಗಡೆಗೊಂಡ ತಮಿಳು ಸಿನಿಮಾ ತಂಗಳಾನ್ ಉತ್ತಮ ವಿಮರ್ಶೆಗೆ ಒಳಪಟ್ಟಿದೆ. ಅಷ್ಟೆ ಅಲ್ಲದೇ, ಬಾಕ್ಸ್ ಆಫೀಸ್ನಲ್ಲಿ ತನ್ನ ಗಳಿಕೆಯನ್ನು ಸಹ ಹೆಚ್ಚಿಸಿಕೊಂಡಿದೆ.
ತಮಿಳಿನ ಜನಪ್ರಿಯ ನಿರ್ದೇಶಕ ಹಾಗೂ ಅಂಬೇಡ್ಕರ್ವಾದಿ ಪಾ.ರಂಜಿತ್ ನಿರ್ದೇಶನದ ಸಿನಿಮಾವಾದ ತಂಗಳಾನ್ನಲ್ಲಿ ಚಿಯಾನ್ ವಿಕ್ರಂ, ಪಾರ್ವತಿ ಮೆನನ್ ಸೇರಿದಂತೆ ಹಲವು ಪ್ರತಿಭಾವಂತ ಕಲಾವಿದರು ನಟಿಸಿದ್ದಾರೆ. ಚಿನ್ನದ ಗಣಿಯ ಕತೆಯನ್ನು ಒಳಗೊಂಡಿರುವ ಈ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಉತ್ತಮ ಪ್ರದರ್ಶನ ಕಾಣುತ್ತಿದೆ. ಈ ಹೊತ್ತಿನಲ್ಲಿ ಸಿನಿಮಾಕ್ಕೆ ಉತ್ತರ ಭಾರತದಿಂದಲೂ ಬೇಡಿಕೆ ಬಂದಿದ್ದು, ಸಿನಿಮಾ ಇದೀಗ ಹಿಂದಿಯಲ್ಲಿ ಬಿಡುಗಡೆ ಆಗುತ್ತಿದೆ.
ತಂಗಳಾನ್ ಆಗಸ್ಟ್ 15 ರಂದು ತಮಿಳು, ಮಲಯಾಳಂ ಹಾಗೂ ತೆಲುಗು ಭಾಷೆಯಲ್ಲಿ ಬಿಡುಗಡೆ ಆಗಿತ್ತು. ಇದೀಗ ದಕ್ಷಿಣ ಭಾರತದಲ್ಲಿ ಉತ್ತಮ ಪ್ರದರ್ಶನ ಕಂಡ ತಂಗಲಾನ್ ಸಿನಿಮಾಕ್ಕೆ ಉತ್ತರ ಭಾರತದಲ್ಲೂ ಬಹು ಬೇಡಿಕೆ ಹುಟ್ಟಿಕೊಂಡಿದೆ. ಈ ಕಾರಣ ಸಿನಿಮಾವನ್ನು ಹಿಂದಿಗೆ ಡಬ್ ಮಾಡಿ ಉತ್ತರ ಭಾರತದಲ್ಲಿ ಬಿಡುಗಡೆ ಮಾಡಲು ಚಿತ್ರತಂಡ ಮುಂದಾಗಿದೆ. ಇದೇ ತಿಂಗಳೂ ಆಗಸ್ಟ್ 30 ರಂದು ತಂಗಲಾನ್ ಸಿನಿಮಾದ ಹಿಂದಿ ಆವೃತ್ತಿ ಉತ್ತರ ಭಾರತದ ಪ್ರಮುಖ ನಗರಗಳಲ್ಲಿ ಬಿಡುಗಡೆಯಾಗಲಿದೆ.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…