ದೇಶ- ವಿದೇಶ

ಹಿಂದಿಯಲ್ಲೂ ಬಿಡುಗಡೆಗೊಳ್ಳಲಿದೆ‌ ಚಿನ್ನದ ಕಥೆ ʻತಂಗಳಾನ್ʼ

ಮೈಸೂರು: ಇತ್ತೀಚೆಗಷ್ಟೆ ಬಿಡುಗಡೆಗೊಂಡ ತಮಿಳು ಸಿನಿಮಾ ತಂಗಳಾನ್‌ ಉತ್ತಮ ವಿಮರ್ಶೆಗೆ ಒಳಪಟ್ಟಿದೆ. ಅಷ್ಟೆ ಅಲ್ಲದೇ, ಬಾಕ್ಸ್‌ ಆಫೀಸ್‌ನಲ್ಲಿ ತನ್ನ ಗಳಿಕೆಯನ್ನು ಸಹ ಹೆಚ್ಚಿಸಿಕೊಂಡಿದೆ.

ತಮಿಳಿನ ಜನಪ್ರಿಯ ನಿರ್ದೇಶಕ ಹಾಗೂ ಅಂಬೇಡ್ಕರ್‌ವಾದಿ ಪಾ.ರಂಜಿತ್‌ ನಿರ್ದೇಶನದ ಸಿನಿಮಾವಾದ ತಂಗಳಾನ್‌ನಲ್ಲಿ ಚಿಯಾನ್‌ ವಿಕ್ರಂ, ಪಾರ್ವತಿ ಮೆನನ್‌ ಸೇರಿದಂತೆ ಹಲವು ಪ್ರತಿಭಾವಂತ ಕಲಾವಿದರು ನಟಿಸಿದ್ದಾರೆ. ಚಿನ್ನದ ಗಣಿಯ ಕತೆಯನ್ನು ಒಳಗೊಂಡಿರುವ ಈ ಸಿನಿಮಾ ಬಾಕ್ಸ್‌ ಆಫೀಸ್‌ನಲ್ಲಿ ಉತ್ತಮ ಪ್ರದರ್ಶನ ಕಾಣುತ್ತಿದೆ. ಈ ಹೊತ್ತಿನಲ್ಲಿ ಸಿನಿಮಾಕ್ಕೆ ಉತ್ತರ ಭಾರತದಿಂದಲೂ ಬೇಡಿಕೆ ಬಂದಿದ್ದು, ಸಿನಿಮಾ ಇದೀಗ ಹಿಂದಿಯಲ್ಲಿ ಬಿಡುಗಡೆ ಆಗುತ್ತಿದೆ.

ತಂಗಳಾನ್‌ ಆಗಸ್ಟ್‌ 15 ರಂದು ತಮಿಳು, ಮಲಯಾಳಂ ಹಾಗೂ ತೆಲುಗು ಭಾಷೆಯಲ್ಲಿ ಬಿಡುಗಡೆ ಆಗಿತ್ತು. ಇದೀಗ ದಕ್ಷಿಣ ಭಾರತದಲ್ಲಿ ಉತ್ತಮ ಪ್ರದರ್ಶನ ಕಂಡ ತಂಗಲಾನ್‌ ಸಿನಿಮಾಕ್ಕೆ ಉತ್ತರ ಭಾರತದಲ್ಲೂ ಬಹು ಬೇಡಿಕೆ ಹುಟ್ಟಿಕೊಂಡಿದೆ. ಈ ಕಾರಣ ಸಿನಿಮಾವನ್ನು ಹಿಂದಿಗೆ ಡಬ್‌ ಮಾಡಿ ಉತ್ತರ ಭಾರತದಲ್ಲಿ ಬಿಡುಗಡೆ ಮಾಡಲು ಚಿತ್ರತಂಡ ಮುಂದಾಗಿದೆ. ಇದೇ ತಿಂಗಳೂ ಆಗಸ್ಟ್‌ 30 ರಂದು ತಂಗಲಾನ್‌ ಸಿನಿಮಾದ ಹಿಂದಿ ಆವೃತ್ತಿ ಉತ್ತರ ಭಾರತದ ಪ್ರಮುಖ ನಗರಗಳಲ್ಲಿ ಬಿಡುಗಡೆಯಾಗಲಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

15 mins ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

18 mins ago

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

24 mins ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

28 mins ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

36 mins ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

1 day ago