ದೇಶ- ವಿದೇಶ

ಪ್ರತಿಯೊಂದು ಸಮುದಾಯದ ಕಲ್ಯಾಣಕ್ಕೆ ಸರ್ಕಾರ ಬದ್ಧ: ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ದಲಿತರು, ಹಿಂದುಳಿದವರು, ಆದಿವಾಸಿಗಳು ಸೇರಿದಂತೆ ಪ್ರತಿಯೊಂದು ಸಮುದಾಯದ ಕಲ್ಯಾಣಕ್ಕೆ ಸರ್ಕಾರ ಬದ್ಧವಾಗಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಹೇಳಿದ್ದಾರೆ.

ಸಂಸತ್‍ನ ಜಂಟಿ ಅಧಿವೇಶನ ಉದ್ದೇಶಿಸಿ ಸುಮಾರು 1 ಗಂಟೆ ಮಾತನಾಡಿದ ಅವರು, ದೇಶದಲ್ಲಿ ಭ್ರಷ್ಟಾಚಾರ ನಿಯಂತ್ರಣದ ಕುರಿತು ಹಾಗೂ ನಕಲಿ ಸುದ್ದಿ ಹಬ್ಬಿಸಿ ಸಮಾಜದಲ್ಲಿ ಸಾಮರಸ್ಯ ಹಾಳು ಮಾಡುತ್ತಿರುವುದಕ್ಕೆ ವಿಷಾದ ವ್ಯಕ್ತಪಡಿಸಿದ್ದಾರೆ.

ಸಬ್ ಕಾ ಸಾತ್ ಸಬ್ ಕಾ ವಿಕಾಸ್ ಎಂಬುದು ಕೇವಲ ಘೋಷಣೆಯಾಗಿ ಉಳಿದಿಲ್ಲ. 2014ರಲ್ಲಿ ದೇಶದ 25 ಕೋಟಿ ಜನರಿಗೆ ಸಾಮಾಜಿಕ ಭದ್ರತೆಯನ್ನು ಕೇಂದ್ರ ಸರ್ಕಾರದ ಯೋಜನೆಗಳ ಮೂಲಕ ಒದಗಿಸಲಾಗಿತ್ತು. ಇದರ ಸಂಖ್ಯೆ ಈಗ 95 ಕೋಟಿಗೆ ಏರಿದೆ. ವಿಬಿ-ಜಿ ರಾಮ್ ಜಿ ಕಾನೂನಿನ ಮೂಲಕ ಗ್ರಾಮೀಣ ಭಾರತದ ಸವಾರ್ಂಗೀಣ ಅಭಿವೃದ್ಧಿಗೆ ಮುನ್ನುಡಿ ಬರೆಯಲಾಗಿದೆ. ವರ್ಷದಲ್ಲಿ 125 ದಿನಗಳು ಉದ್ಯೋಗ ಸೃಜನೆಯಾಗಲಿವೆ ಎಂದು ಹೇಳಿದರು.

ಕಳೆದ ಹತ್ತು ವರ್ಷಗಳ ಆಡಳಿತಾವಧಿಯಲ್ಲಿ ದೇಶವು ಸಾಧಿಸಿರುವ ಪ್ರಗತಿಯನ್ನು ಅಂಕಿ-ಅಂಶಗಳೊಂದಿಗೆ ವಿವರಿಸಿದ ರಾಷ್ಟ್ರಪತಿಗಳು, ಸರ್ಕಾರ ಜಾರಿಗೆ ತಂದ ಜನಪರ ಯೋಜನೆಗಳ ಪರಿಣಾಮವಾಗಿ ಸುಮಾರು 25 ಕೋಟಿ ಜನರು ಬಡತನದ ರೇಖೆಯಿಂದ ಮೇಲೆ ಬಂದಿದ್ದಾರೆ ಎಂಬ ಮಹತ್ವದ ಮಾಹಿತಿಯನ್ನು ಹಂಚಿಕೊಂಡರು. ಇದು ದೇಶದ ಆರ್ಥಿಕ ಸಬಲೀಕರಣದ ವೇಗಕ್ಕೆ ಸಾಕ್ಷಿಯಾಗಿದೆ ಎಂದ ಅವರು, ಮೂಲಸೌಕರ್ಯ, ಡಿಜಿಟಲೀಕರಣ, ಬ್ಯಾಂಕಿಂಗ್ ಸುಧಾರಣೆಗಳು ಹಾಗೂ ನೇರ ಲಾಭ ವರ್ಗಾವಣೆ ವ್ಯವಸ್ಥೆಗಳ ಮೂಲಕ ಸಾಮಾನ್ಯ ನಾಗರಿಕರ ಬದುಕಿನಲ್ಲಿ ಸಕಾರಾತಕ ಬದಲಾವಣೆಗಳು ಸಂಭವಿಸಿವೆ ಎಂದು ಅಭಿಪ್ರಾಯಪಟ್ಟರು.

ಭಾರತವು ಶೀಘ್ರದಲ್ಲೇ ಜಗತ್ತಿನ ಮೂರನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಿ ಹೊರಹೊಮಲು ಸಜ್ಜಾಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ರಾಷ್ಟ್ರಪತಿ, ಮಹಿಳಾ ಸಬಲೀಕರಣದ ಕುರಿತಾಗಿ ಸರ್ಕಾರ ಕೈಗೊಂಡಿರುವ ಕ್ರಮಗಳನ್ನು ವಿಶೇಷವಾಗಿ ಶ್ಲಾಘಿಸಿದರು. ದೇಶದ ಒಟ್ಟಾರೆ ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ಇನ್ನಷ್ಟು ಬಲವಾಗಲಿದೆ ಎಂಬ ನಂಬಿಕೆಯನ್ನು ಅವರು ವ್ಯಕ್ತಪಡಿಸಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಹೆಚ್ಚುತ್ತಿರುವ ಯುವತಿಯರ ಆತ್ಮಹತ್ಯೆ ; ಯುವತಿಯರಿಗೆ ಕಂಗನಾ ರಣಾವತ್ ಕಿವಿಮಾತು

ದೆಹಲಿ : ಮದುವೆಯಾದ ಯುವತಿಯರು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಯುವತಿಯರಿಗೆ…

3 hours ago

ಆ.31ರೊಳಗೆ ಜಿಬಿಎ ಚುನಾವಣೆ ನಡೆಸಿ ; ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಅಂತಿಮ ಗಡುವು

ಹೊಸದಿಲ್ಲಿ : ಆಗಸ್ಟ್ ೩೧ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನಗರಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸರ್ವೋಚ್ಚ ನ್ಯಾಯಾಲಯ…

5 hours ago

ಸಫಾರಿಗಳಲ್ಲಿ ಇನ್ಮುಂದೆ ತೆರೆದ ವಾಹನಕ್ಕೆ ಅವಕಾಶವಿಲ್ಲ : ಈಶ್ವರ ಖಂಡ್ರೆ

ಸಫಾರಿ ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಅಳವಡಿಸಲು ಖಂಡ್ರೆ ಸೂಚನೆ ಬೆಂಗಳೂರು :  ರಾಜ್ಯದ ಐದು ಹುಲಿ…

6 hours ago

ಮ.ಬೆಟ್ಟ | ಮರದ ಕೊಂಬೆ ಬಿದ್ದು ಮೂವರಿಗೆ ಗಾಯ

ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬಂದಿದ್ದ ಭಕ್ತರ ಮೇಲೆ ಮರದ ಕೊಂಬೆ ಬಿದ್ದು ಮೂವರು ಗಾಯಗೊಂಡಿರುವ…

8 hours ago

ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಬಂದ್‍ಗೆ ಮಿಶ್ರ ಪ್ರತಿಕ್ರಿಯೆ

ಬೆಂಗಳೂರು: ಆನ್‍ಲೈನ್‍ನಲ್ಲಿ ಔಷಧಿಗಳ ಮಾರಾಟ ವಿರೋಧಿಸಿ ಅಖಿಲ ಭಾರತ ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಕರ್ನಾಟಕ ಬಂದ್‍ಗೆ ಮಿಶ್ರ…

11 hours ago

ಯಳಂದೂರು: ಬೋನಿಗೆ ಬಿದ್ದ ಚಿರತೆ

ಯಳಂದೂರು: ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆಯೊಂದು ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಸೆರೆಯಾಗಿದೆ. ತಾಲ್ಲೂಕಿನ ಗುಂಬಳ್ಳಿ ಗ್ರಾಮದಲ್ಲಿ…

12 hours ago