ದೇಶ- ವಿದೇಶ

ವೈದ್ಯೆ ಪ್ರಕರಣಕ್ಕೆ ತಲೆತಂಡ? ರಾಜೀನಾಮೆಗೆ ಸಿಎಂ ಮಮತ ಇಂಗಿತ

ಕೋಲ್ಕತ್ತ: ಆರ್‌ಜಿಕರ್‌ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ವೈದ್ಯೆಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ದೊಡ್ಡ ಹೇಳಿಕೆಯನ್ನು ನೀಡಿದ್ದಾರೆ. ನಾನು ಪಶ್ಚಿಮ ಬಂಗಾಳದ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧನಿದ್ದೇನೆ. ನನಗೆ ಹುದ್ದೆಯ ಬಗ್ಗೆ ಕಾಳಜಿ ಇಲ್ಲ. ನನಗೆ ನ್ಯಾಯ ಬೇಕು. ನ್ಯಾಯ ಸಿಗುವ ಬಗ್ಗೆ ಮಾತ್ರ ಕಾಳಜಿ ಇದೆ ಎಂದು ಹೇಳಿದ್ದಾರೆ.

ವೈದ್ಯೆ ಮೇಲಿನ ಅತ್ಯಾಚಾರ ಹಾಗೂ ಹತ್ಯೆ ಖಂಡಿಸಿ ಕಿರಿಯ ವೈದ್ಯರಯ ನಡೆಸುತ್ತಿರುವ ಮುಷ್ಕರವನ್ನು ಹಿಂಪಡೆಯುವಂತೆ ಮನವೊಲಿಸುವ ಭಾಗವಾಗಿ ಕರೆದಿದ್ದ ಸಭೆಯಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ.

ಸಭೆಯ ನೇರ ಪ್ರಸಾರ ಮಾಡದ ಹೊರತು ಚರ್ಚೆಗೆ ಸಿದ್ಧರಿಲ್ಲ ಎಂದು ಮುಷ್ಕರ ನಿರತ ಕಿರಿಯ ವೈದ್ಯರು ಪಟ್ಟು ಹಿಡಿದರು. ಇದರಿಂದಾಗಿ ಮಮತ ಬ್ಯಾನರ್ಜಿ ಅವರು ಸುಮಾರು ಎರಡು ಗಂಟೆಗಳ ಕಾಲ ಸಭಾಂಗಣದಲ್ಲಿ ಕಾದರು.

ನನಗೆ ಸಿಎಂ ಕುರ್ಜಿ ಬೇಡ
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2ಗಂಟೆ ಕಾಲ ಕಾದರೂ ವೈದ್ಯರು ಬರಲಿಲ್ಲ. ಜನರು ನ್ಯಾಯಾವನ್ನು ಬಯಸಿದರೆ, ಜನರ ಹಿತಾಸಕ್ತಿಗಾಗಿ ನಾನು ರಾಜೀನಾಮೆ ನೀಡಲು ಸಿದ್ಧನಿದ್ದೇನೆ. ನನಗೆ ಸಿಎಂ ಕುರ್ಚಿ ಬೇಡ ಎಂದರು.

ಎಲ್ಲರೂ ಇಲ್ಲಿದ್ದರು… ಅವರೇ ಬರಲಿಲ್ಲ
ವೈದ್ಯರನ್ನು ಭೇಟಿ ಮಾಡಲು ನಾವು ಎರಡು ಗಂಟೆಗಳ ಕಾಲ ಕಾಯುತ್ತಿದ್ದೇವೆ. ನಾವು ಅವರಿಗೆ ಪತ್ರ ಬರೆದಿದ್ದೇವೆ. ಅವರು ಕೂಡ ಬರುತ್ತೇವೆ ಎಂದಿದ್ದರು. ಅದಕ್ಕಾಗಿಯೇ ನಾವು ಈ ವ್ಯವಸ್ಥೆ ಮಾಡಿದೆವು. ನಾವು ಮುಕ್ತ ಮನಸ್ಸಿನಿಂದ ಚರ್ಚೆ ನಡೆಸಲು ಬಯಸಿದ್ದೇವೆ. ಸರ್ಕಾರದ ಚೀಫ್‌ ಸೆಕ್ರಟರಿ, ಪೊಲೀಸ್‌ ಮಹಾ ನಿರ್ದೇಶಕರು, ಗೃಹ ಕಾರ್ಯದರ್ಶಿ ಎಲ್ಲರೂ ಇಲ್ಲಿದ್ದರು…. ಆದರೆ, ಅವರೇ ಬರಲಿಲ್ಲ ಎಂದು ಹೇಳಿದರು.

ಪ್ರಕರಣ ʻಸುಪ್ರೀಂʼನಲ್ಲಿರುವುದರಿಂದ ಸಭೆಯ ನೇರ ಪ್ರಸಾರ ಅಸಾಧ್ಯ
ನಾಟಕೀಯ ಬೆಳವಣಿಗೆಯಲ್ಲಿ ಕಿರಿಯ ವೈದ್ಯರು ಸಚಿವಾಲಯದ ಗೇಟ್‌ ಬಳಿ ಬಂದರು. ರಾಜ್ಯ ಸರ್ಕಾರದೊಂದಿಗೆ ಸಭೆಯ ನೇರ ಪ್ರಸಾರಕ್ಕೆ ಅವಕಾಶ ನೀಡಬೇಕು ಎಂದು ಪಟ್ಟು ಹಿಡಿದರು. ಆದರೆ, ಈ ಪ್ರಕರಣ ಸುಪ್ರೀಂ ಕೋರ್ಟ್‌ನಲ್ಲಿರುವುದರಿಂದ ಸಭೆಯಲ್ಲಿ ನಡೆಯುವ ಚರ್ಚೆರ ನೇರ ಪ್ರಸಾರ ಅಸಾಧ್ಯ ಎಂದು ದೀದಿ ಹೇಳಿದರು.

ಸದು ರಾಜ್ಯದಲ್ಲಿ ನಡೆಯುತ್ತಿರುವ ವೈದ್ಯರ ಮಷ್ಕರದಿಂದಾಗಿ 27ಮಂದಿ ಮೃತಪಟ್ಟು,7 ಲಕ್ಷಕ್ಕೂ ಹೆಚ್ಚು ಮಂದಿ ಅನಾರೋಗ್ಯದಿಂದ ಪರದಾಡುತ್ತಿದ್ದಾರೆ ಎಂದು ವರದಿಯಾಗಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಜಗಕೆ ಮಾದರಿ!

ಜಗಕೆ ಮಾದರಿ! ಭಲೆ ಭಲೇ ಅಂಕೇಗೌಡರೆ ಜಗಕೆ ಮಾದರಿ ನಿಮ್ಮ ಪುಸ್ತಕಪ್ರೀತಿ ಅರಿವಿನ ಆಕರಗಳು ಪುಸ್ತಕಗಳು! ದುಡಿದ ಲಕ್ಷಾಂತರ ಹಣವನು…

2 hours ago

ಓದುಗರ ಪತ್ರ: ವಿವೇಕಾನಂದ ಪ್ರತಿಮೆ ಅನಾವರಣಗೊಳಿಸಿ

ಮೈಸೂರಿನ ವಿವೇಕಾನಂದ ನಗರದ ವೃತ್ತದಲ್ಲಿ ಸ್ವಾಮಿ ವಿವೇಕಾನಂದರ ಪ್ರತಿಮೆಯನ್ನು ಸ್ಥಾಪಿಸಲಾಗಿದ್ದು, ಪ್ರತಿಮೆಯನ್ನು ಪ್ಲಾಸ್ಟಿಕ್ ಕವರ್‌ನಿಂದ ಮುಚ್ಚಲಾಗಿದೆ. ಜ.೧೨ರಂದು ಸ್ವಾಮಿ ವಿವೇಕಾನಂದರ…

2 hours ago

ಓದುಗರ ಪತ್ರ: ಮಲ್ಲಯ್ಯನ ಬೆಟ್ಟ ಅಭಿವೃದ್ಧಿಗೊಳಿಸಿ

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರದಲ್ಲಿರುವ ಶಿಡ್ಲು ಮಲ್ಲಿಕಾರ್ಜುನ ಸ್ವಾಮಿ ಬೆಟ್ಟ (ಮಲ್ಲಯ್ಯನ ಬೆಟ್ಟ) ಪ್ರಸಿದ್ಧ ಪ್ರವಾಸಿ ಮತ್ತು ಧಾರ್ಮಿಕ…

2 hours ago

ಓದುಗರ ಪತ್ರ: ಬಸ್ ತಂಗುದಾಣ ನಿರ್ಮಿಸಿ

ಚಾಮರಾಜನಗರದ, ಸಿಂಹ ಚಲನಚಿತ್ರಮಂದಿರದ ಎದುರಿರುವ ಎಲ್‌ಐಸಿ ಕಚೇರಿಯ ಮುಂಭಾಗದಲ್ಲಿ ನಂಜನಗೂಡು-ಮೈಸೂರು ಸೇರಿದಂತೆ ವಿವಿಧ ಮಾರ್ಗಗಳ ಬಸ್‌ಗಳು ಸಂಚರಿಸುತ್ತವೆ. ಈ ಸ್ಥಳದಲ್ಲಿ…

2 hours ago

ಓದುಗರ ಪತ್ರ: ರಥೋತ್ಸವ: ಮುನ್ನೆಚ್ಚರಿಕೆ ಅಗತ್ಯ

ಚಾಮರಾಜನಗರ ಜಿಲ್ಲೆ ಮುಕ್ಕಡಹಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದ ಮಾಯಮ್ಮ ದೇವಿ ರಥೋತ್ಸವದ ವೇಳೆ ರಥದ ಚಕ್ರದ ದಂಡ ಮುರಿದ ಪರಿಣಾಮ…

2 hours ago

ಅಕಾಲಿಕ ಮಳೆಯಿಂದ ಕಾಫಿ ಬೆಳೆಗಾರರಿಗೆ ಸಂಕಷ್ಟ

ಲಕ್ಷ್ಮಿಕಾಂತ್ ಕೊಮಾರಪ್ಪ ಹೂವು ಅರಳುತ್ತಿರುವುದರಿಂದ ಕಾಫಿ ಕೊಯ್ಲಿಗೆ ಅಡ್ಡಿ; ಹೆಚ್ಚುವರಿ ಕಾರ್ಮಿಕ ವೆಚ್ಚವನ್ನು ಭರಿಸಬೇಕಾದ ಅನಿವಾರ್ಯತೆ ಸೋಮವಾರಪೇಟೆ: ತಾಲ್ಲೂಕಿನ ಗ್ರಾಮೀಣ,…

2 hours ago