ದೇಶ- ವಿದೇಶ

ವೈದ್ಯೆ ಪ್ರಕರಣಕ್ಕೆ ತಲೆತಂಡ? ರಾಜೀನಾಮೆಗೆ ಸಿಎಂ ಮಮತ ಇಂಗಿತ

ಕೋಲ್ಕತ್ತ: ಆರ್‌ಜಿಕರ್‌ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ವೈದ್ಯೆಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ದೊಡ್ಡ ಹೇಳಿಕೆಯನ್ನು ನೀಡಿದ್ದಾರೆ. ನಾನು ಪಶ್ಚಿಮ ಬಂಗಾಳದ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧನಿದ್ದೇನೆ. ನನಗೆ ಹುದ್ದೆಯ ಬಗ್ಗೆ ಕಾಳಜಿ ಇಲ್ಲ. ನನಗೆ ನ್ಯಾಯ ಬೇಕು. ನ್ಯಾಯ ಸಿಗುವ ಬಗ್ಗೆ ಮಾತ್ರ ಕಾಳಜಿ ಇದೆ ಎಂದು ಹೇಳಿದ್ದಾರೆ.

ವೈದ್ಯೆ ಮೇಲಿನ ಅತ್ಯಾಚಾರ ಹಾಗೂ ಹತ್ಯೆ ಖಂಡಿಸಿ ಕಿರಿಯ ವೈದ್ಯರಯ ನಡೆಸುತ್ತಿರುವ ಮುಷ್ಕರವನ್ನು ಹಿಂಪಡೆಯುವಂತೆ ಮನವೊಲಿಸುವ ಭಾಗವಾಗಿ ಕರೆದಿದ್ದ ಸಭೆಯಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ.

ಸಭೆಯ ನೇರ ಪ್ರಸಾರ ಮಾಡದ ಹೊರತು ಚರ್ಚೆಗೆ ಸಿದ್ಧರಿಲ್ಲ ಎಂದು ಮುಷ್ಕರ ನಿರತ ಕಿರಿಯ ವೈದ್ಯರು ಪಟ್ಟು ಹಿಡಿದರು. ಇದರಿಂದಾಗಿ ಮಮತ ಬ್ಯಾನರ್ಜಿ ಅವರು ಸುಮಾರು ಎರಡು ಗಂಟೆಗಳ ಕಾಲ ಸಭಾಂಗಣದಲ್ಲಿ ಕಾದರು.

ನನಗೆ ಸಿಎಂ ಕುರ್ಜಿ ಬೇಡ
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2ಗಂಟೆ ಕಾಲ ಕಾದರೂ ವೈದ್ಯರು ಬರಲಿಲ್ಲ. ಜನರು ನ್ಯಾಯಾವನ್ನು ಬಯಸಿದರೆ, ಜನರ ಹಿತಾಸಕ್ತಿಗಾಗಿ ನಾನು ರಾಜೀನಾಮೆ ನೀಡಲು ಸಿದ್ಧನಿದ್ದೇನೆ. ನನಗೆ ಸಿಎಂ ಕುರ್ಚಿ ಬೇಡ ಎಂದರು.

ಎಲ್ಲರೂ ಇಲ್ಲಿದ್ದರು… ಅವರೇ ಬರಲಿಲ್ಲ
ವೈದ್ಯರನ್ನು ಭೇಟಿ ಮಾಡಲು ನಾವು ಎರಡು ಗಂಟೆಗಳ ಕಾಲ ಕಾಯುತ್ತಿದ್ದೇವೆ. ನಾವು ಅವರಿಗೆ ಪತ್ರ ಬರೆದಿದ್ದೇವೆ. ಅವರು ಕೂಡ ಬರುತ್ತೇವೆ ಎಂದಿದ್ದರು. ಅದಕ್ಕಾಗಿಯೇ ನಾವು ಈ ವ್ಯವಸ್ಥೆ ಮಾಡಿದೆವು. ನಾವು ಮುಕ್ತ ಮನಸ್ಸಿನಿಂದ ಚರ್ಚೆ ನಡೆಸಲು ಬಯಸಿದ್ದೇವೆ. ಸರ್ಕಾರದ ಚೀಫ್‌ ಸೆಕ್ರಟರಿ, ಪೊಲೀಸ್‌ ಮಹಾ ನಿರ್ದೇಶಕರು, ಗೃಹ ಕಾರ್ಯದರ್ಶಿ ಎಲ್ಲರೂ ಇಲ್ಲಿದ್ದರು…. ಆದರೆ, ಅವರೇ ಬರಲಿಲ್ಲ ಎಂದು ಹೇಳಿದರು.

ಪ್ರಕರಣ ʻಸುಪ್ರೀಂʼನಲ್ಲಿರುವುದರಿಂದ ಸಭೆಯ ನೇರ ಪ್ರಸಾರ ಅಸಾಧ್ಯ
ನಾಟಕೀಯ ಬೆಳವಣಿಗೆಯಲ್ಲಿ ಕಿರಿಯ ವೈದ್ಯರು ಸಚಿವಾಲಯದ ಗೇಟ್‌ ಬಳಿ ಬಂದರು. ರಾಜ್ಯ ಸರ್ಕಾರದೊಂದಿಗೆ ಸಭೆಯ ನೇರ ಪ್ರಸಾರಕ್ಕೆ ಅವಕಾಶ ನೀಡಬೇಕು ಎಂದು ಪಟ್ಟು ಹಿಡಿದರು. ಆದರೆ, ಈ ಪ್ರಕರಣ ಸುಪ್ರೀಂ ಕೋರ್ಟ್‌ನಲ್ಲಿರುವುದರಿಂದ ಸಭೆಯಲ್ಲಿ ನಡೆಯುವ ಚರ್ಚೆರ ನೇರ ಪ್ರಸಾರ ಅಸಾಧ್ಯ ಎಂದು ದೀದಿ ಹೇಳಿದರು.

ಸದು ರಾಜ್ಯದಲ್ಲಿ ನಡೆಯುತ್ತಿರುವ ವೈದ್ಯರ ಮಷ್ಕರದಿಂದಾಗಿ 27ಮಂದಿ ಮೃತಪಟ್ಟು,7 ಲಕ್ಷಕ್ಕೂ ಹೆಚ್ಚು ಮಂದಿ ಅನಾರೋಗ್ಯದಿಂದ ಪರದಾಡುತ್ತಿದ್ದಾರೆ ಎಂದು ವರದಿಯಾಗಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹೆಚ್ಚುತ್ತಿರುವ ಯುವತಿಯರ ಆತ್ಮಹತ್ಯೆ ; ಯುವತಿಯರಿಗೆ ಕಂಗನಾ ರಣಾವತ್ ಕಿವಿಮಾತು

ದೆಹಲಿ : ಮದುವೆಯಾದ ಯುವತಿಯರು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಯುವತಿಯರಿಗೆ…

2 hours ago

ಆ.31ರೊಳಗೆ ಜಿಬಿಎ ಚುನಾವಣೆ ನಡೆಸಿ ; ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಅಂತಿಮ ಗಡುವು

ಹೊಸದಿಲ್ಲಿ : ಆಗಸ್ಟ್ ೩೧ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನಗರಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸರ್ವೋಚ್ಚ ನ್ಯಾಯಾಲಯ…

4 hours ago

ಸಫಾರಿಗಳಲ್ಲಿ ಇನ್ಮುಂದೆ ತೆರೆದ ವಾಹನಕ್ಕೆ ಅವಕಾಶವಿಲ್ಲ : ಈಶ್ವರ ಖಂಡ್ರೆ

ಸಫಾರಿ ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಅಳವಡಿಸಲು ಖಂಡ್ರೆ ಸೂಚನೆ ಬೆಂಗಳೂರು :  ರಾಜ್ಯದ ಐದು ಹುಲಿ…

6 hours ago

ಮ.ಬೆಟ್ಟ | ಮರದ ಕೊಂಬೆ ಬಿದ್ದು ಮೂವರಿಗೆ ಗಾಯ

ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬಂದಿದ್ದ ಭಕ್ತರ ಮೇಲೆ ಮರದ ಕೊಂಬೆ ಬಿದ್ದು ಮೂವರು ಗಾಯಗೊಂಡಿರುವ…

8 hours ago

ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಬಂದ್‍ಗೆ ಮಿಶ್ರ ಪ್ರತಿಕ್ರಿಯೆ

ಬೆಂಗಳೂರು: ಆನ್‍ಲೈನ್‍ನಲ್ಲಿ ಔಷಧಿಗಳ ಮಾರಾಟ ವಿರೋಧಿಸಿ ಅಖಿಲ ಭಾರತ ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಕರ್ನಾಟಕ ಬಂದ್‍ಗೆ ಮಿಶ್ರ…

11 hours ago

ಯಳಂದೂರು: ಬೋನಿಗೆ ಬಿದ್ದ ಚಿರತೆ

ಯಳಂದೂರು: ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆಯೊಂದು ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಸೆರೆಯಾಗಿದೆ. ತಾಲ್ಲೂಕಿನ ಗುಂಬಳ್ಳಿ ಗ್ರಾಮದಲ್ಲಿ…

11 hours ago