ದೇಶ- ವಿದೇಶ

ʼದಿ ಕೇರಳ ಸ್ಟೋರಿʼ ಮುಸ್ಲೀಮರನ್ನು ಬಿಜೆಪಿಯಿಂದ ಬೇರ್ಪಡಿಸಿದೆ: ಅಬ್ದುಲ್ ಸಲಾಂ

ಕೇರಳ: ರಾಜ್ಯದ ಲೋಕಸಭಾ ಚುನಾವಣೆಗೆ ಬಿಜೆಪಿಯ ಏಕೈಕ ಮುಸ್ಲಿಮ್ ಅಭ್ಯರ್ಥಿಯಾಗಿರುವ ಎಂ. ಅಬ್ದುಲ್ ಸಲಾಂ ಅವರು ಪಕ್ಷದ ಚುನಾವಣಾ ಕಾರ್ಯತಂತ್ರದಿಂದ ಹತಾಶಗೊಂಡಿದ್ದಾರೆ. ಚುನಾವಣಾ ಸಮಯದಲ್ಲಿ ವಿವಾದಾತ್ಮಕ ಚಿತ್ರ ‘ದಿ ಕೇರಳ ಸ್ಟೋರಿ’ಯ ಪ್ರದರ್ಶನ ಮತ್ತು ಪೌರತ್ವ ತಿದ್ದುಪಡಿ ಕಾಯ್ದೆ ಯಂತಹ ವಿಷಯಗಳ ಕುರಿತು ತನ್ನ ನಿಲುವನ್ನು ಸೂಕ್ತವಾಗಿ ಜನರಿಗೆ ತಿಳಿಸುವಲ್ಲಿ ಪಕ್ಷದ ಅಸಾಮರ್ಥ್ಯವು ಮುಸ್ಲಿಮರು ಬಿಜೆಪಿಯಿಂದ ದೂರವಿರುವಂತೆ ಮಾಡಿವೆ ಎಂದು ಅವರು ಹೇಳಿದ್ದಾರೆ.

ಚುನಾವಣಾ ಸಮಯದಲ್ಲಿ ‘ದಿ ಕೇರಳ ಸ್ಟೋರಿ’ಪ್ರದರ್ಶನವು ಮುಸ್ಲಿಮರು ಬಿಜೆಪಿಯಿಂದ ಇನ್ನಷ್ಟು ದೂರ ಸರಿಯುವಂತೆ ಮಾಡುತ್ತದೆ, ಭಾರತದಲ್ಲಿ 20 ಕೋಟಿ ಗೂ.ಅಧಿಕ ಮುಸ್ಲಿಮರಿದ್ದಾರೆ. ನಾವು ಅವರನ್ನು ಮುಖ್ಯವಾಹಿನಿಯಿಂದ ದೂರವಿರಿಸಬಾರದು. ಆಡಳಿತವನ್ನು ಹಂಚಿಕೊಳ್ಳಲು ಅವರು ಮುಖ್ಯವಾಹಿನಿಯಲ್ಲಿರುವುದು ಅಗತ್ಯವಾಗಿದೆ ಎಂದು ಮಲಪ್ಪುರಮ್ನಲ್ಲಿ, ತನ್ನ ಚುನಾವಣಾ ಪ್ರಚಾರದ ನೇಪಥ್ಯದಲ್ಲಿ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿ ಅಬ್ದುಲ್‌ ಸಲಾಂ ಹೇಳಿದರು.

ಪಾಲಕ್ಕಾಡ್ ನಲ್ಲಿ ನಡೆದಿದ್ದ ಪ್ರಧಾನಿ ಮೋದಿಯವರ ರೋಡ್ ಶೋದಲ್ಲಿ ಅವರೊಂದಿಗಿರಲು ತನಗೆ ಅನುಮತಿ ನಿರಾಕರಿಸಲ್ಪಟ್ಟ ಬಳಿಕ ಉಂಟಾಗಿರುವ ವಿವಾದದ ಕುರಿತು ಮಾತನಾಡಿದ ಅವರು, ಈ ಘಟನೆಯು ಪಕ್ಷಕ್ಕೆ ಬಹಳಷ್ಟು ಹಾನಿಯನ್ನುಂಟು ಮಾಡಿದೆ ಎಂದರು. ಬಿಜೆಪಿಯ ರಾಜ್ಯ ನಾಯಕತ್ವವು ಇಂತಹ ಘಟನೆಯನ್ನು ತಪ್ಪಿಸಬಹುದಿತ್ತು. ಆದಾಗ್ಯೂ, ಈಗಲೂ ನಾನು ನನ್ನ ಪಕ್ಷವನ್ನು ಸಮರ್ಥಿಸುತ್ತೇನೆ’ ಎಂದರು.

ಮುಸ್ಲಿಮ್ ಪ್ರಾಬಲ್ಯವಿರುವ ಮಲಪ್ಪುರಂ ಕ್ಷೇತ್ರದಲ್ಲಿ ಮತಗಳನ್ನು ಗಳಿಸಲು ಈಗಿನ ಪ್ರಚಾರ ಸಾಲುವುದಿಲ್ಲ. ನಾನು ಈಗಾಗಲೇ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ 2-3 ಸುತ್ತುಗಳ ಪ್ರಚಾರವನ್ನು ಪೂರ್ಣಗೊಳಿಸಿದ್ದೇನೆ. ಆದರೆ ಇತರ ಪಕ್ಷಗಳಿಗೆ ಹೋಲಿಸಿದರೆ ನಮ್ಮ ಪ್ರಚಾರವು ದುರ್ಬಲವಾಗಿದೆ ಎಂದರು.

ಈದ್ ಹಬ್ಬದ ಸಂದರ್ಭದಲ್ಲಿ ಮುಸ್ಲಿಮರ ಮನೆಗಳಿಗೆ ಏಕೆ ಭೇಟಿ ನೀಡಲಿಲ್ಲ ಎಂದು ವ್ಯಕ್ತಿಯೋರ್ವರು ನನ್ನನ್ನು ಪ್ರಶ್ನಿಸಿದ್ದರು. ಕ್ರಿಸ್ಮಸ್ ಸಂದರ್ಭದಲ್ಲಿ ಕ್ರಿಶ್ಚಿಯನ್ನರ ಮನೆಗಳಿಗೆ ನಾವು ಭೇಟಿ ನೀಡಿದ್ದೆವು. ಇದು ಏನನ್ನು ಸೂಚಿಸುತ್ತದೆ ಎಂದೂ ಜನರು ನನ್ನನ್ನು ಪ್ರಶ್ನಿಸಿದ್ದಾರೆ’ ಎಂದು ಹೇಳಿದ ಸಲಾಂ, ಬಿಜೆಪಿ ಏಕೆ ಒಬ್ಬನೇ ಮುಸ್ಲಿಮ್ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ ಎಂಬ ಪ್ರಶ್ನೆಯೂ ತನಗೆ ಎದುರಾಗುತ್ತಿದೆ ಎಂದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

8 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

8 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

8 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

8 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

8 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

8 hours ago