ದೆಹಲಿ: ವಿಜಯೇಂದ್ರ ನಕಲಿ ನೊಟೀಸ್ ಮಾಡಿಸಿದ್ದಾನೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ.
ಸ್ವಪಕ್ಷದವರ ವಿರುದ್ಧ ಪದೇ ಪದೇ ವಾಗ್ದಾಳಿ ನಡೆಸುತ್ತಾ ಬಂದಿರುವ ಶಾಸಕ ಯತ್ನಾಳ್ ಅವರು, ತಮಗೆ ಶಿಸ್ತು ಸಮಿತಿ ನೋಟಿಸ್ ಬಂದಿರುವ ಬಗ್ಗೆ ಹೊಸ ವರಸೆ ತೆಗೆದಿದ್ದಾರೆ.
ಈ ಬಗ್ಗೆ ದೆಹಲಿಯಲ್ಲಿಂದು ಮಾತನಾಡಿದ ಅವರು, ವಿಜಯೇಂದ್ರನೇ ನಕಲಿ ನೊಟೀಸ್ ತಯಾರಿ ಮಾಡಿಸಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
ನನಗೆ ಈವರೆಗೂ ಅಧಿಕೃತವಾಗಿ ಪಕ್ಷದ ಕೇಂದ್ರ ಸಮಿತಿಯಿಂದ ನೊಟೀಸ್ ಬಂದಿಲ್ಲ. ವಾಟ್ಸ್ಆಪ್ನಲ್ಲಿ ನೊಟೀಸ್ ಬಂದಿದೆ. ಅಲ್ಲಿ ಬಂದಿರುವುದನ್ನು ಹೇಗೆ ನಂಬಲಿ? ನನಗೆ ಯಾಕೋ ವಿಜಯೇಂದ್ರನೇ ನಕಲಿ ನೊಟೀಸ್ ಮಾಡಿಸಿದ್ದಾನೆ ಎನಿಸುತ್ತಿದೆ. ನನಗೆ ಅಧಿಕೃತವಾಗಿ ನೊಟೀಸ್ ಬಂದ ಬಳಿಕ ಸರಿಯಾದ ಉತ್ತರ ನೀಡುತ್ತೇನೆ ಎಂದರು.
ಇನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಯತ್ನಾಳ್ ಅವರು, ನಾನು ಸ್ವಂತ ಸಾಮರ್ಥ್ಯದ ಮೇಲೆ ನಾಯಕನಾಗಿದ್ದೀನಿ. ಬಿಎಸ್ವೈ ಭಯದಿಂದ ವಿಜಯೇಂದ್ರನನ್ನು ರಾಜ್ಯಾಧ್ಯಕ್ಷನನ್ನಾಗಿ ಮಾಡಿದ್ದಾರೆ. ವಿಜಯೇಂದ್ರಗೆ ಏನೂ ಗೊತ್ತಿಲ್ಲ. ಅವನು ಇನ್ನೂ ಸಣ್ಣ ಹುಡುಗ ಎಂದು ಕಿಡಿಕಾರಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ನೊಟೀಸ್ ಸಂಬಂಧ ಯಾವ ನಾಯಕರನ್ನು ನಾನು ಭೇಟಿ ಮಾಡಲ್ಲ. ನನಗೆ ಬಂದಿರುವ ನೊಟೀಸ್ ನಕಲಿ ಎನಿಸುತ್ತಿದೆ ಎಂದು ಆರೋಪಿಸಿದರು.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…