ದೇಶ- ವಿದೇಶ

ಮೋದಿ ಅನಾವರಣಗೊಳಿಸಿದ್ದ ಛತ್ರಪತಿ ಮಹಾರಾಜರ ಪ್ರತಿಮೆ ಕುಸಿತ

ಮಹಾರಾಷ್ಟ್ರ: ಕಳೆದ ಡಿಸೆಂಬರ್‌ನಲ್ಲಿ ಮಹಾರಾಷ್ಟ್ರದ ಸಿಂಧುದುರ್ಗದ ಕೋಟೆ ಒಂದರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಂದ ಅನಾವರಣಗೊಳಿಸಿದ್ದ ಛತ್ರಪತಿ ಶಿವಾಜಿ ಪ್ರತಿಮೆಯು ಮುರಿದು ಬಿದ್ದಿದೆ.

ಮಲ್ವಾನ್‌ ರಾಜ್‌ ಕೋಟ್‌ನಲ್ಲಿರುವ 35 ಅಡಿ ಉದ್ದದ ಪ್ರತಿಮೆಯೂ ಸೋಮವಾರ ಮದ್ಯಾಹ್ನ ಒಂದು ಗಂಟೆ ವೇಳೆಗೆ ಮುರಿದು ಬಿದ್ದಿದೆ ಎಂದು ಖಾಸಗಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಮುರಿದುಬಿದ್ದಿರುವ ಬಗ್ಗೆ ಮಹಾರಾಷ್ಟ್ರ ಕಾಂಗ್ರೆಸ್‌ ತೀವ್ರ ಅಕ್ರೋಶ ಹೊರಹಾಕಿದೆ. ಈ ಸಂಬಂಧ ಟ್ವೀಟ್‌ ಮಾಡಿರುವ ಅವರು, “ಬಿಜೆಪಿಯ ಭ್ರಷ್ಟ ಆಡಳಿತವು ಛತ್ರಪತಿ ಶಿವಾಜಿ ಮಹಾರಾಜರಿಗೆ ಮತ್ತು ಮಹಾರಾಷ್ಟ್ರಕ್ಕೆ ಅವಮಾನ ಮಾಡಿದೆ.

2023 ರ ಡಿಸೆಂಬರ್ 4 ರಂದು ನೌಕಾಪಡೆಯ ದಿನದಂದು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿದ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಇಂದು ಮಧ್ಯಾಹ್ನ ಕುಸಿದಿದೆ. ಕಳಪೆ ನಿರ್ಮಾಣದಿಂದ ಪ್ರತಿಮೆ ಕುಸಿದಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ” ಎಂದು ಕಿಡಿಕಾರಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಪುರುಷರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ ; ಪುರುಷರ ಹಿತರಕ್ಷಣಾ ಸಮಿತಿ ಅಸ್ತಿತ್ವಕ್ಕೆ

ಮಂಡ್ಯ : ಆಧುನಿಕ ಜಗತ್ತಿನಲ್ಲಿ ಪುರುಷರ ಮೇಲಿನ ದೌರ್ಜನ್ಯ ಮತ್ತು ದಬ್ಬಾಳಿಗೆ ಹತ್ತಿಕ್ಕಲು ರಾಜ್ಯ ಮಾನವ ಹಕ್ಕುಗಳ ಪುರುಷರ ಹಿತರಕ್ಷಣಾ…

33 mins ago

ಸಂವಿಧಾನದಿಂದಲೇ ನಾನಿಂದು ಮುಖ್ಯಮಂತ್ರಿ ಆಗಿದ್ದೇನೆ : ಸಿದ್ದರಾಮಯ್ಯ

ಬೆಂಗಳೂರು : ಬಾಬಾಸಾಹೇಬ್ ಅಂಬೇಡ್ಕರ್ ಅವರು ನೀಡಿದ ಸಂವಿಧಾನದ ಶಕ್ತಿಯಿಂದಲೇ ನಾನಿಂದು ಮುಖ್ಯಮಂತ್ರಿಯಾಗಿ ಜನಸೇವೆ ಸಲ್ಲಿಸಲು ಸಾಧ್ಯವಾಗಿದೆ ಎಂದು ಮುಖ್ಯಮಂತ್ರಿ…

47 mins ago

ಐಪಿಎಲ್‌ ಪಂದ್ಯ : ಏಪ್ರಿಲ್‌ 15, 24ರಂದು ಮೆಟ್ರೋ ಸಂಚಾರ ಅವಧಿ ವಿಸ್ತರಣೆ

ಬೆಂಗಳೂರು : ಟಾಟಾ ಐಪಿಎಲ್‌ನ ಕ್ರಿಕೆಟ್‌ ಪಂದ್ಯಗಳು ಏಪ್ರಿಲ್ ‌15 ಹಾಗೂ ಏಪ್ರಿಲ್ ‌24ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ.…

56 mins ago

ನಿತೀಶ್ ಕುಮಾರ್ ರಾಜೀನಾಮೆ; ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಸಾಮ್ರಾಟ್ ಚೌಧರಿ ಆಯ್ಕೆ

ಪಾಟ್ನಾ : ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ತಮ್ಮ ಪದವಿಗೆ ರಾಜೀನಾಮೆ ನೀಡಿದ್ದಾರೆ. ಅದರ ಬೆನ್ನಲ್ಲೇ ಬಿಹಾರದ ಹೊಸ…

1 hour ago

ಟಿಪ್ಪರ್-ಕಾರು ನಡುವೆ ಅಪಘಾತ : ತಾಯಿ ಮಗಳು ಸ್ಥಳದಲ್ಲೇ ಸಾವು

ಗುಂಡ್ಲುಪೇಟೆ : ಕೇರಳ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಟಿಪ್ಪರ್‌ಗೆ ಕಾರುವೊಂದು ಡಿಕ್ಕಿ ಹೊಡೆದು ತಾಯಿ-ಮಗಳು ಸ್ಥಳದಲ್ಲೇ ಮೃತಪಟ್ಟ ದುರಂತ ಘಟನೆ ಮಂಗಳವಾರ…

1 hour ago

ಸಿಎಂ ರಾಜಕೀಯ ಕಾರ್ಯದರ್ಶಿ ವಜಾ : ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದೇನು?

ಬೆಳಗಾವಿ : ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಜೀರ್‌ ಅಹಮ್ಮದ್‌ ಬಿಡುಗಡೆಗೊಳಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಸತೀಶ್‌ ಜಾರಕಿಹೊಳಿ ಪ್ರತಿಕ್ರಿಯೆ…

2 hours ago