ದೇಶ- ವಿದೇಶ

ಲೋಕಸಭಾ ಚುನಾವಣೆ ಫಲಿತಾಂಶ ದಿನದಂದು ಷೇರುಪೇಟೆ ತತ್ತರ

ನವದೆಹಲಿ: ಮಂಗಳವಾರ(ಜೂನ್.‌೪) ಲೋಕಸಭಾ ಚುನಾವಣೆ ಫಲಿತಾಂಶದ ವೇಳೆ ಷೇರು ಮಾರುಕಟ್ಟೆಯಲ್ಲಿ ಅಲ್ಲೋಲ ಕಲ್ಲೋಲ ಉಂಟಾಗಿತ್ತು. ಅಂದು ಬೆಳಿಗ್ಗೆಯಿಂದಲೇ ಷೇರು ಸೂಚ್ಯಂಕದಲ್ಲಿ ಭಾರಿ ಕುಸಿತ ಕಂಡಿದ್ದು, ಹೂಡಿಕೆದಾರರು ಭಾರಿ ನಷ್ಟ ಅನುಭವಿಸಿದ್ದಾರೆ.

ನಿನ್ನೆ(ಜೂನ್.4) ಒಂದೇ ದಿನ 30 ಲಕ್ಷಕೋಟಿ ರೂ ನಷ್ಟಗಳನ್ನು ಹೂಡಿಕೆದಾರರು ಅನುಭವಿಸಿದ್ದಾರೆ. ಇದರಿಂದ ಅಕ್ಷರಶಃ ಷೇರುಮಾರುಕಟ್ಟೆ ಕೆಂಪು ಬಣ್ಣಕ್ಕೆ ತಿರಗಿತ್ತು.  ಚನಾವಣಾ ಎಕ್ಸಿಟ್‌ ಪೋಲ್‌ ಫಲಿತಾಂಶ ಬಂದ ಸೋಮವಾರದವರೆಗೂ ಎದೆಯುಬ್ಬಿಸುತ್ತಿದ್ದ ಅದಾನಿ ಗ್ರೂಪ್‌ ಸ್ಟಾಕ್‌ಗಳಿಗೆ ಹಾಗೂ ಹೊಸ ಆಸೆಯಲ್ಲಿ ಅದಾನಿ ಷೇರು ಕೊಂಡವರಿಗೆ ನಿನ್ನೆ ಆಘಾತ ಉಂಟಾಗಿತ್ತು.

ಸೋಮವಾರ ಷೇರು ಮಾರುಕಟ್ಟೆ ನಾಗಲೋಟ ಕಂಡಿತ್ತು. ಮಂಗಳವಾರದ ವಹಿವಾಟಿನಲ್ಲಿ ಕರಡಿ ಕುಣಿತು ಚೋರಾಯಿತು. ಪರಿಣಾಮ ಸಾರ್ವಜನಿಕ ವಲಯದ ಕಂಪನಿಗಳು, ಬ್ಯಾಂಕ್‌ಗಳು, ವಿದ್ಯುತ್‌, ಯುಟಿಲಿಟಿ, ತೈಲ ಮತ್ತು ಅನಿಲ, ಬಂಡವಾಳ ಸರಕು ಸೂಚ್ಯಂಕದ ಷೇರುಗಳು ಮಾರಾಟದ ಒತ್ತಡಕ್ಕೆ ಸಿಲುಕಿದ್ದವು.

ಎಕ್ಸಿಟ್‌ ಪೋಲ್‌ನಲ್ಲಿ ಎನ್‌ಡಿಎ ಸಂಪೂರ್ಣ ಬಹುಮತ ಬರುತ್ತದೆ ಎಂದು ಹೇಳಿದ ಬಳಿಕ ಷೇರು ಮಾರುಕಟ್ಟೆಯಲ್ಲಿ ಭರ್ಜರಿ ಏರಿಕೆ ಕಂಡಿತ್ತು. ಆದರೆ ಫಲಿತಾಂಧ ಎಕ್ಸಿಟ್‌ ಪೋಲ್‌ ಅಂಕಿ ಅಂಶಗಳಿಗಿಂತ ಭಿನ್ನವಾಗಿದ್ದು ಷೇರು ಮಾರುಕಟ್ಟೆಯಲ್ಲಿ ಕುಸಿತಕ್ಕೆ ಕಾರಣವಾಯಿತು.

ಚೇತರಿಸಿಕೊಂಡ ಷೇರುಪೇಟೆ
ಇಂದು(ಜೂನ್‌ ೫) ಆರಂಭದಲ್ಲಿ ಮಂಕಾಗಿಯೇ ಇದ್ದ ಷೇರುಪೇಟೆ ಮಧ್ಯಾಹ್ನದ ಹೊತ್ತಿಗೆ ಮತ್ತೆ ಸಕಾರಾತ್ಮಕವಾಗಿ ತಿರುಗಿದ್ದು, ಒಂದೊಂದೇ ಷೇರುಗಳು ಹಸಿರು ಬಣ್ಣಕ್ಕೆ ತಿರುಗುತ್ತಿವೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಂಡ್ಯ | ಕೊಬ್ಬರಿ ಶೆಡ್‌ಗೆ ಬೆಂಕಿ : ಲಕ್ಷಾಂತರ ರೂ.ಮೌಲ್ಯದ ಕೊಬ್ಬರಿ ನಾಶ

ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…

2 hours ago

ಹನೂರು | ಅಲಗುಮೂಲೆ ಅರಣ್ಯದಲ್ಲಿ ಬೆಂಕಿ ; ಧಗಧಗಿಸಿದ ಕಾಡು

ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…

2 hours ago

ತಂಬಾಕು ಮುಕ್ತ ಗ್ರಾಮಕ್ಕಾಗಿ ಗುಲಾಬಿ ಚಳುವಳಿ

ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…

3 hours ago

ಆಂಬುಲೆನ್ಸ್‌ ತುರ್ತು ಮೀಸಲು ಮಾರ್ಗಕ್ಕೆ ಜಯಾ ಬಚ್ಚನ್‌ ಒತ್ತಾಯ

ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…

3 hours ago

ಗುಂಡ್ಲುಪೇಟೆ | ದನಗಾಹಿ ಮೇಲೆ ಹುಲಿ ದಾಳಿ ; ಪ್ರಾಣಾಪಾಯದಿಂದ ಪಾರು

ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…

3 hours ago

ಏಕತಾ ಮಾಲ್‌ ನಿರ್ಮಾಣಕ್ಕೆ ಹೈಕೋರ್ಟ್ ತಡೆ‌

ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…

3 hours ago