Stock market chart on virtual screen with woman’s hand digital remix
ನವದೆಹಲಿ: ಮಂಗಳವಾರ(ಜೂನ್.೪) ಲೋಕಸಭಾ ಚುನಾವಣೆ ಫಲಿತಾಂಶದ ವೇಳೆ ಷೇರು ಮಾರುಕಟ್ಟೆಯಲ್ಲಿ ಅಲ್ಲೋಲ ಕಲ್ಲೋಲ ಉಂಟಾಗಿತ್ತು. ಅಂದು ಬೆಳಿಗ್ಗೆಯಿಂದಲೇ ಷೇರು ಸೂಚ್ಯಂಕದಲ್ಲಿ ಭಾರಿ ಕುಸಿತ ಕಂಡಿದ್ದು, ಹೂಡಿಕೆದಾರರು ಭಾರಿ ನಷ್ಟ ಅನುಭವಿಸಿದ್ದಾರೆ.
ನಿನ್ನೆ(ಜೂನ್.4) ಒಂದೇ ದಿನ 30 ಲಕ್ಷಕೋಟಿ ರೂ ನಷ್ಟಗಳನ್ನು ಹೂಡಿಕೆದಾರರು ಅನುಭವಿಸಿದ್ದಾರೆ. ಇದರಿಂದ ಅಕ್ಷರಶಃ ಷೇರುಮಾರುಕಟ್ಟೆ ಕೆಂಪು ಬಣ್ಣಕ್ಕೆ ತಿರಗಿತ್ತು. ಚನಾವಣಾ ಎಕ್ಸಿಟ್ ಪೋಲ್ ಫಲಿತಾಂಶ ಬಂದ ಸೋಮವಾರದವರೆಗೂ ಎದೆಯುಬ್ಬಿಸುತ್ತಿದ್ದ ಅದಾನಿ ಗ್ರೂಪ್ ಸ್ಟಾಕ್ಗಳಿಗೆ ಹಾಗೂ ಹೊಸ ಆಸೆಯಲ್ಲಿ ಅದಾನಿ ಷೇರು ಕೊಂಡವರಿಗೆ ನಿನ್ನೆ ಆಘಾತ ಉಂಟಾಗಿತ್ತು.
ಸೋಮವಾರ ಷೇರು ಮಾರುಕಟ್ಟೆ ನಾಗಲೋಟ ಕಂಡಿತ್ತು. ಮಂಗಳವಾರದ ವಹಿವಾಟಿನಲ್ಲಿ ಕರಡಿ ಕುಣಿತು ಚೋರಾಯಿತು. ಪರಿಣಾಮ ಸಾರ್ವಜನಿಕ ವಲಯದ ಕಂಪನಿಗಳು, ಬ್ಯಾಂಕ್ಗಳು, ವಿದ್ಯುತ್, ಯುಟಿಲಿಟಿ, ತೈಲ ಮತ್ತು ಅನಿಲ, ಬಂಡವಾಳ ಸರಕು ಸೂಚ್ಯಂಕದ ಷೇರುಗಳು ಮಾರಾಟದ ಒತ್ತಡಕ್ಕೆ ಸಿಲುಕಿದ್ದವು.
ಎಕ್ಸಿಟ್ ಪೋಲ್ನಲ್ಲಿ ಎನ್ಡಿಎ ಸಂಪೂರ್ಣ ಬಹುಮತ ಬರುತ್ತದೆ ಎಂದು ಹೇಳಿದ ಬಳಿಕ ಷೇರು ಮಾರುಕಟ್ಟೆಯಲ್ಲಿ ಭರ್ಜರಿ ಏರಿಕೆ ಕಂಡಿತ್ತು. ಆದರೆ ಫಲಿತಾಂಧ ಎಕ್ಸಿಟ್ ಪೋಲ್ ಅಂಕಿ ಅಂಶಗಳಿಗಿಂತ ಭಿನ್ನವಾಗಿದ್ದು ಷೇರು ಮಾರುಕಟ್ಟೆಯಲ್ಲಿ ಕುಸಿತಕ್ಕೆ ಕಾರಣವಾಯಿತು.
ಚೇತರಿಸಿಕೊಂಡ ಷೇರುಪೇಟೆ
ಇಂದು(ಜೂನ್ ೫) ಆರಂಭದಲ್ಲಿ ಮಂಕಾಗಿಯೇ ಇದ್ದ ಷೇರುಪೇಟೆ ಮಧ್ಯಾಹ್ನದ ಹೊತ್ತಿಗೆ ಮತ್ತೆ ಸಕಾರಾತ್ಮಕವಾಗಿ ತಿರುಗಿದ್ದು, ಒಂದೊಂದೇ ಷೇರುಗಳು ಹಸಿರು ಬಣ್ಣಕ್ಕೆ ತಿರುಗುತ್ತಿವೆ.
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…