ದೇಶ- ವಿದೇಶ

ಲೋಕಸಭಾ ಚುನಾವಣೆ ಫಲಿತಾಂಶ ದಿನದಂದು ಷೇರುಪೇಟೆ ತತ್ತರ

ನವದೆಹಲಿ: ಮಂಗಳವಾರ(ಜೂನ್.‌೪) ಲೋಕಸಭಾ ಚುನಾವಣೆ ಫಲಿತಾಂಶದ ವೇಳೆ ಷೇರು ಮಾರುಕಟ್ಟೆಯಲ್ಲಿ ಅಲ್ಲೋಲ ಕಲ್ಲೋಲ ಉಂಟಾಗಿತ್ತು. ಅಂದು ಬೆಳಿಗ್ಗೆಯಿಂದಲೇ ಷೇರು ಸೂಚ್ಯಂಕದಲ್ಲಿ ಭಾರಿ ಕುಸಿತ ಕಂಡಿದ್ದು, ಹೂಡಿಕೆದಾರರು ಭಾರಿ ನಷ್ಟ ಅನುಭವಿಸಿದ್ದಾರೆ.

ನಿನ್ನೆ(ಜೂನ್.4) ಒಂದೇ ದಿನ 30 ಲಕ್ಷಕೋಟಿ ರೂ ನಷ್ಟಗಳನ್ನು ಹೂಡಿಕೆದಾರರು ಅನುಭವಿಸಿದ್ದಾರೆ. ಇದರಿಂದ ಅಕ್ಷರಶಃ ಷೇರುಮಾರುಕಟ್ಟೆ ಕೆಂಪು ಬಣ್ಣಕ್ಕೆ ತಿರಗಿತ್ತು.  ಚನಾವಣಾ ಎಕ್ಸಿಟ್‌ ಪೋಲ್‌ ಫಲಿತಾಂಶ ಬಂದ ಸೋಮವಾರದವರೆಗೂ ಎದೆಯುಬ್ಬಿಸುತ್ತಿದ್ದ ಅದಾನಿ ಗ್ರೂಪ್‌ ಸ್ಟಾಕ್‌ಗಳಿಗೆ ಹಾಗೂ ಹೊಸ ಆಸೆಯಲ್ಲಿ ಅದಾನಿ ಷೇರು ಕೊಂಡವರಿಗೆ ನಿನ್ನೆ ಆಘಾತ ಉಂಟಾಗಿತ್ತು.

ಸೋಮವಾರ ಷೇರು ಮಾರುಕಟ್ಟೆ ನಾಗಲೋಟ ಕಂಡಿತ್ತು. ಮಂಗಳವಾರದ ವಹಿವಾಟಿನಲ್ಲಿ ಕರಡಿ ಕುಣಿತು ಚೋರಾಯಿತು. ಪರಿಣಾಮ ಸಾರ್ವಜನಿಕ ವಲಯದ ಕಂಪನಿಗಳು, ಬ್ಯಾಂಕ್‌ಗಳು, ವಿದ್ಯುತ್‌, ಯುಟಿಲಿಟಿ, ತೈಲ ಮತ್ತು ಅನಿಲ, ಬಂಡವಾಳ ಸರಕು ಸೂಚ್ಯಂಕದ ಷೇರುಗಳು ಮಾರಾಟದ ಒತ್ತಡಕ್ಕೆ ಸಿಲುಕಿದ್ದವು.

ಎಕ್ಸಿಟ್‌ ಪೋಲ್‌ನಲ್ಲಿ ಎನ್‌ಡಿಎ ಸಂಪೂರ್ಣ ಬಹುಮತ ಬರುತ್ತದೆ ಎಂದು ಹೇಳಿದ ಬಳಿಕ ಷೇರು ಮಾರುಕಟ್ಟೆಯಲ್ಲಿ ಭರ್ಜರಿ ಏರಿಕೆ ಕಂಡಿತ್ತು. ಆದರೆ ಫಲಿತಾಂಧ ಎಕ್ಸಿಟ್‌ ಪೋಲ್‌ ಅಂಕಿ ಅಂಶಗಳಿಗಿಂತ ಭಿನ್ನವಾಗಿದ್ದು ಷೇರು ಮಾರುಕಟ್ಟೆಯಲ್ಲಿ ಕುಸಿತಕ್ಕೆ ಕಾರಣವಾಯಿತು.

ಚೇತರಿಸಿಕೊಂಡ ಷೇರುಪೇಟೆ
ಇಂದು(ಜೂನ್‌ ೫) ಆರಂಭದಲ್ಲಿ ಮಂಕಾಗಿಯೇ ಇದ್ದ ಷೇರುಪೇಟೆ ಮಧ್ಯಾಹ್ನದ ಹೊತ್ತಿಗೆ ಮತ್ತೆ ಸಕಾರಾತ್ಮಕವಾಗಿ ತಿರುಗಿದ್ದು, ಒಂದೊಂದೇ ಷೇರುಗಳು ಹಸಿರು ಬಣ್ಣಕ್ಕೆ ತಿರುಗುತ್ತಿವೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಚಿರತೆ ಸೆರೆ | ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ…

2 hours ago

ಮೈಸೂರಲ್ಲಿ ಡ್ರಗ್ಸ್‌ ಉತ್ಪಾದನೆ ಶಂಕೆ : ಓರ್ವನ ಬಂಧನ

ಮೈಸೂರು : ಬುಧವಾರವಷ್ಟೇ ಹೆಬ್ಬಾಳ್‌ನಲ್ಲಿ ಶೆಡ್‌ವೊಂದರ ಮೇಲೆ ದಾಳಿ ನಡೆಸಿದ್ದ ಎನ್‌ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…

3 hours ago

ತೇಗದ ಮರ ಅಕ್ರಮ ಕಟಾವು : ಓರ್ವ ಬಂಧನ

ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…

3 hours ago

ಮೈಸೂರು ವಿ.ವಿ | ಯುಜಿಸಿ ಉದ್ದೇಶಿತ ಹೊಸ ನಿಯಾಮವಳಿ ಜಾರಿಗೆ ಒತ್ತಾಯ

ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್‌ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…

4 hours ago

ಸರ್ಕಾರಿ ನೌಕರರಿಗೆ ತಿಂಗಳಿಗೊಮ್ಮೆ ಖಾದಿ ಧಿರಿಸು ಕಡ್ಡಾಯ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…

5 hours ago

ಕ್ಯಾಂಪಸ್‌ಗಳಲ್ಲಿ ಜಾತಿ ತಾರತಮ್ಯ : ಯುಜಿಸಿ ನಿಯಮಾವಳಿಗೆ ʻಸುಪ್ರೀಂʼ ತಡೆ

ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…

5 hours ago