Stock market chart on virtual screen with woman’s hand digital remix
ನವದೆಹಲಿ: ಮಂಗಳವಾರ(ಜೂನ್.೪) ಲೋಕಸಭಾ ಚುನಾವಣೆ ಫಲಿತಾಂಶದ ವೇಳೆ ಷೇರು ಮಾರುಕಟ್ಟೆಯಲ್ಲಿ ಅಲ್ಲೋಲ ಕಲ್ಲೋಲ ಉಂಟಾಗಿತ್ತು. ಅಂದು ಬೆಳಿಗ್ಗೆಯಿಂದಲೇ ಷೇರು ಸೂಚ್ಯಂಕದಲ್ಲಿ ಭಾರಿ ಕುಸಿತ ಕಂಡಿದ್ದು, ಹೂಡಿಕೆದಾರರು ಭಾರಿ ನಷ್ಟ ಅನುಭವಿಸಿದ್ದಾರೆ.
ನಿನ್ನೆ(ಜೂನ್.4) ಒಂದೇ ದಿನ 30 ಲಕ್ಷಕೋಟಿ ರೂ ನಷ್ಟಗಳನ್ನು ಹೂಡಿಕೆದಾರರು ಅನುಭವಿಸಿದ್ದಾರೆ. ಇದರಿಂದ ಅಕ್ಷರಶಃ ಷೇರುಮಾರುಕಟ್ಟೆ ಕೆಂಪು ಬಣ್ಣಕ್ಕೆ ತಿರಗಿತ್ತು. ಚನಾವಣಾ ಎಕ್ಸಿಟ್ ಪೋಲ್ ಫಲಿತಾಂಶ ಬಂದ ಸೋಮವಾರದವರೆಗೂ ಎದೆಯುಬ್ಬಿಸುತ್ತಿದ್ದ ಅದಾನಿ ಗ್ರೂಪ್ ಸ್ಟಾಕ್ಗಳಿಗೆ ಹಾಗೂ ಹೊಸ ಆಸೆಯಲ್ಲಿ ಅದಾನಿ ಷೇರು ಕೊಂಡವರಿಗೆ ನಿನ್ನೆ ಆಘಾತ ಉಂಟಾಗಿತ್ತು.
ಸೋಮವಾರ ಷೇರು ಮಾರುಕಟ್ಟೆ ನಾಗಲೋಟ ಕಂಡಿತ್ತು. ಮಂಗಳವಾರದ ವಹಿವಾಟಿನಲ್ಲಿ ಕರಡಿ ಕುಣಿತು ಚೋರಾಯಿತು. ಪರಿಣಾಮ ಸಾರ್ವಜನಿಕ ವಲಯದ ಕಂಪನಿಗಳು, ಬ್ಯಾಂಕ್ಗಳು, ವಿದ್ಯುತ್, ಯುಟಿಲಿಟಿ, ತೈಲ ಮತ್ತು ಅನಿಲ, ಬಂಡವಾಳ ಸರಕು ಸೂಚ್ಯಂಕದ ಷೇರುಗಳು ಮಾರಾಟದ ಒತ್ತಡಕ್ಕೆ ಸಿಲುಕಿದ್ದವು.
ಎಕ್ಸಿಟ್ ಪೋಲ್ನಲ್ಲಿ ಎನ್ಡಿಎ ಸಂಪೂರ್ಣ ಬಹುಮತ ಬರುತ್ತದೆ ಎಂದು ಹೇಳಿದ ಬಳಿಕ ಷೇರು ಮಾರುಕಟ್ಟೆಯಲ್ಲಿ ಭರ್ಜರಿ ಏರಿಕೆ ಕಂಡಿತ್ತು. ಆದರೆ ಫಲಿತಾಂಧ ಎಕ್ಸಿಟ್ ಪೋಲ್ ಅಂಕಿ ಅಂಶಗಳಿಗಿಂತ ಭಿನ್ನವಾಗಿದ್ದು ಷೇರು ಮಾರುಕಟ್ಟೆಯಲ್ಲಿ ಕುಸಿತಕ್ಕೆ ಕಾರಣವಾಯಿತು.
ಚೇತರಿಸಿಕೊಂಡ ಷೇರುಪೇಟೆ
ಇಂದು(ಜೂನ್ ೫) ಆರಂಭದಲ್ಲಿ ಮಂಕಾಗಿಯೇ ಇದ್ದ ಷೇರುಪೇಟೆ ಮಧ್ಯಾಹ್ನದ ಹೊತ್ತಿಗೆ ಮತ್ತೆ ಸಕಾರಾತ್ಮಕವಾಗಿ ತಿರುಗಿದ್ದು, ಒಂದೊಂದೇ ಷೇರುಗಳು ಹಸಿರು ಬಣ್ಣಕ್ಕೆ ತಿರುಗುತ್ತಿವೆ.
ನವದೆಹಲಿ: ಸೆಪ್ಟೆಂಬರ್ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್ಗೆ…
ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಅನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ. ಜುಲೈನಲ್ಲಿ…
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…
ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…
ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…