ದೇಶ- ವಿದೇಶ

ಲೋಕಸಭಾ ಚುನಾವಣೆ ಫಲಿತಾಂಶ ದಿನದಂದು ಷೇರುಪೇಟೆ ತತ್ತರ

ನವದೆಹಲಿ: ಮಂಗಳವಾರ(ಜೂನ್.‌೪) ಲೋಕಸಭಾ ಚುನಾವಣೆ ಫಲಿತಾಂಶದ ವೇಳೆ ಷೇರು ಮಾರುಕಟ್ಟೆಯಲ್ಲಿ ಅಲ್ಲೋಲ ಕಲ್ಲೋಲ ಉಂಟಾಗಿತ್ತು. ಅಂದು ಬೆಳಿಗ್ಗೆಯಿಂದಲೇ ಷೇರು ಸೂಚ್ಯಂಕದಲ್ಲಿ ಭಾರಿ ಕುಸಿತ ಕಂಡಿದ್ದು, ಹೂಡಿಕೆದಾರರು ಭಾರಿ ನಷ್ಟ ಅನುಭವಿಸಿದ್ದಾರೆ.

ನಿನ್ನೆ(ಜೂನ್.4) ಒಂದೇ ದಿನ 30 ಲಕ್ಷಕೋಟಿ ರೂ ನಷ್ಟಗಳನ್ನು ಹೂಡಿಕೆದಾರರು ಅನುಭವಿಸಿದ್ದಾರೆ. ಇದರಿಂದ ಅಕ್ಷರಶಃ ಷೇರುಮಾರುಕಟ್ಟೆ ಕೆಂಪು ಬಣ್ಣಕ್ಕೆ ತಿರಗಿತ್ತು.  ಚನಾವಣಾ ಎಕ್ಸಿಟ್‌ ಪೋಲ್‌ ಫಲಿತಾಂಶ ಬಂದ ಸೋಮವಾರದವರೆಗೂ ಎದೆಯುಬ್ಬಿಸುತ್ತಿದ್ದ ಅದಾನಿ ಗ್ರೂಪ್‌ ಸ್ಟಾಕ್‌ಗಳಿಗೆ ಹಾಗೂ ಹೊಸ ಆಸೆಯಲ್ಲಿ ಅದಾನಿ ಷೇರು ಕೊಂಡವರಿಗೆ ನಿನ್ನೆ ಆಘಾತ ಉಂಟಾಗಿತ್ತು.

ಸೋಮವಾರ ಷೇರು ಮಾರುಕಟ್ಟೆ ನಾಗಲೋಟ ಕಂಡಿತ್ತು. ಮಂಗಳವಾರದ ವಹಿವಾಟಿನಲ್ಲಿ ಕರಡಿ ಕುಣಿತು ಚೋರಾಯಿತು. ಪರಿಣಾಮ ಸಾರ್ವಜನಿಕ ವಲಯದ ಕಂಪನಿಗಳು, ಬ್ಯಾಂಕ್‌ಗಳು, ವಿದ್ಯುತ್‌, ಯುಟಿಲಿಟಿ, ತೈಲ ಮತ್ತು ಅನಿಲ, ಬಂಡವಾಳ ಸರಕು ಸೂಚ್ಯಂಕದ ಷೇರುಗಳು ಮಾರಾಟದ ಒತ್ತಡಕ್ಕೆ ಸಿಲುಕಿದ್ದವು.

ಎಕ್ಸಿಟ್‌ ಪೋಲ್‌ನಲ್ಲಿ ಎನ್‌ಡಿಎ ಸಂಪೂರ್ಣ ಬಹುಮತ ಬರುತ್ತದೆ ಎಂದು ಹೇಳಿದ ಬಳಿಕ ಷೇರು ಮಾರುಕಟ್ಟೆಯಲ್ಲಿ ಭರ್ಜರಿ ಏರಿಕೆ ಕಂಡಿತ್ತು. ಆದರೆ ಫಲಿತಾಂಧ ಎಕ್ಸಿಟ್‌ ಪೋಲ್‌ ಅಂಕಿ ಅಂಶಗಳಿಗಿಂತ ಭಿನ್ನವಾಗಿದ್ದು ಷೇರು ಮಾರುಕಟ್ಟೆಯಲ್ಲಿ ಕುಸಿತಕ್ಕೆ ಕಾರಣವಾಯಿತು.

ಚೇತರಿಸಿಕೊಂಡ ಷೇರುಪೇಟೆ
ಇಂದು(ಜೂನ್‌ ೫) ಆರಂಭದಲ್ಲಿ ಮಂಕಾಗಿಯೇ ಇದ್ದ ಷೇರುಪೇಟೆ ಮಧ್ಯಾಹ್ನದ ಹೊತ್ತಿಗೆ ಮತ್ತೆ ಸಕಾರಾತ್ಮಕವಾಗಿ ತಿರುಗಿದ್ದು, ಒಂದೊಂದೇ ಷೇರುಗಳು ಹಸಿರು ಬಣ್ಣಕ್ಕೆ ತಿರುಗುತ್ತಿವೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವು

ನವೀನ್‌ ಕುಮಾರ್:‌ ಪಿರಿಯಾಪಟ್ಟಣ ತಾಲ್ಲೂಕು ವರದಿಗಾರರು ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ…

5 mins ago

ಹನೂರು| ಅಮಾವಾಸ್ಯೆ ಪ್ರಯುಕ್ತ ಮಲೆ ಮಹದೇಶ್ವರ ಬೆಟ್ಟಕ್ಕೆ ಹರಿದುಬಂದ ಭಕ್ತಸಾಗರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…

1 hour ago

ಚಾ.ನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ: ಸಚಿವ ಕೆ.ವೆಂಕಟೇಶ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು:‌ ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು‌‌ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ…

1 hour ago

ಒಂದು ರಾಷ್ಟ್ರ ಒಂದು ಚುನಾವಣೆ ಪ್ರಸ್ತಾವನೆಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರೋಧ

ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ…

1 hour ago

ಶಾಸಕ ಜಿಟಿಡಿ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೆ ಅಭ್ಯಂತರವಿಲ್ಲ: ಮಾಜಿ ಸಚಿವ ಸಾ.ರಾ.ಮಹೇಶ್‌

ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್‌…

2 hours ago

ಮಂಡ್ಯ| ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳ ಬಂಧನ

Θಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಪಾಂಡವಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ…

2 hours ago