ನವದೆಹಲಿ: ಯುದ್ಧ ಇಂದು ಮುಗಿಯದೇ ಇರಬಹುದು. ಆದರೆ ನಮ್ಮ ಶಕ್ತಿ ಏನೆಂದು ಇಡೀ ಪ್ರಪಂಚಕ್ಕೆ ಗೊತ್ತಾಗಿದೆ ಎಂದು ಬಾಲಿವುಡ್ ನಟ ಸಂಜಯ್ ದತ್ ಭಾರತೀಯ ಸೇನೆ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಆಪರೇಷನ್ ಸಿಂಧೂರಗೆ ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ನಮ್ಮ ಜನರ ಮೇಲಿನ ನಿರಂತರ ದಾಳಿಗಳನ್ನು ಇನ್ನು ಮುಂದೆ ಸಹಿಸಲ್ಲ. ನಾವು ಹಿಂಜರಿಯದೇ ಪೂರ್ಣ ಬಲದಿಂದ ಮತ್ತು ಅಚಲ ದೃಢಸಂಕಲ್ಪದಿಂದ ಪ್ರತಿಕ್ರಿಯಿಸುತ್ತೇವೆ. ನಮ್ಮ ಯುದ್ಧ ಜನರು ಅಥವಾ ರಾಷ್ಟ್ರದ ವಿರುದ್ಧವಲ್ಲ. ಭಯ, ಅವ್ಯವಸ್ಥೆ ಮತ್ತು ವಿನಾಶದ ವಿರುದ್ಧ ಎಂಬುದನ್ನು ಜಗತ್ತು ಅರ್ಥಮಾಡಿಕೊಳ್ಳಬೇಕು. ಈ ಬಾರಿ ಯಾವುದೇ ಕಾರಣಕ್ಕೂ ನಾವು ಹಿಂದೆ ಸರಿಯುವುದಿಲ್ಲ ಎಂದಿದ್ದಾರೆ.
ನಮ್ಮ ಯೋಧರು ಕೇವಲ ಗಡಿಗಳನ್ನು ರಕ್ಷಿಸುತ್ತಿಲ್ಲ ಅವರು ಪ್ರತಿ ಮಗುವಿನ ಕನಸು, ಪ್ರತಿ ಕುಟುಂಬದ ಶಾಂತಿ ಹಾಗೂ ಈ ರಾಷ್ಟ್ರವನ್ನು ರಕ್ಷಿಸುತ್ತಿದ್ದಾರೆ. ಅವರು ನಿಜವಾದ ವೀರರು. ಇವರಿಗೆ ನಾನು ಸಲ್ಯೂಟ್ ಹೊಡೆಯುತ್ತೇನೆ ಎಂದು ಹೇಳಿದ್ದಾರೆ.
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…
ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…
ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…