ನವದೆಹಲಿ: ಯುದ್ಧ ಇಂದು ಮುಗಿಯದೇ ಇರಬಹುದು. ಆದರೆ ನಮ್ಮ ಶಕ್ತಿ ಏನೆಂದು ಇಡೀ ಪ್ರಪಂಚಕ್ಕೆ ಗೊತ್ತಾಗಿದೆ ಎಂದು ಬಾಲಿವುಡ್ ನಟ ಸಂಜಯ್ ದತ್ ಭಾರತೀಯ ಸೇನೆ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಆಪರೇಷನ್ ಸಿಂಧೂರಗೆ ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ನಮ್ಮ ಜನರ ಮೇಲಿನ ನಿರಂತರ ದಾಳಿಗಳನ್ನು ಇನ್ನು ಮುಂದೆ ಸಹಿಸಲ್ಲ. ನಾವು ಹಿಂಜರಿಯದೇ ಪೂರ್ಣ ಬಲದಿಂದ ಮತ್ತು ಅಚಲ ದೃಢಸಂಕಲ್ಪದಿಂದ ಪ್ರತಿಕ್ರಿಯಿಸುತ್ತೇವೆ. ನಮ್ಮ ಯುದ್ಧ ಜನರು ಅಥವಾ ರಾಷ್ಟ್ರದ ವಿರುದ್ಧವಲ್ಲ. ಭಯ, ಅವ್ಯವಸ್ಥೆ ಮತ್ತು ವಿನಾಶದ ವಿರುದ್ಧ ಎಂಬುದನ್ನು ಜಗತ್ತು ಅರ್ಥಮಾಡಿಕೊಳ್ಳಬೇಕು. ಈ ಬಾರಿ ಯಾವುದೇ ಕಾರಣಕ್ಕೂ ನಾವು ಹಿಂದೆ ಸರಿಯುವುದಿಲ್ಲ ಎಂದಿದ್ದಾರೆ.
ನಮ್ಮ ಯೋಧರು ಕೇವಲ ಗಡಿಗಳನ್ನು ರಕ್ಷಿಸುತ್ತಿಲ್ಲ ಅವರು ಪ್ರತಿ ಮಗುವಿನ ಕನಸು, ಪ್ರತಿ ಕುಟುಂಬದ ಶಾಂತಿ ಹಾಗೂ ಈ ರಾಷ್ಟ್ರವನ್ನು ರಕ್ಷಿಸುತ್ತಿದ್ದಾರೆ. ಅವರು ನಿಜವಾದ ವೀರರು. ಇವರಿಗೆ ನಾನು ಸಲ್ಯೂಟ್ ಹೊಡೆಯುತ್ತೇನೆ ಎಂದು ಹೇಳಿದ್ದಾರೆ.
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…