ತೆಲಂಗಾಣ: ನಟ ಅಲ್ಲು ಅರ್ಜುನ್ಗೆ ತೆಲಂಗಾಣ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿ ಬಿಗ್ ರಿಲೀಫ್ ನೀಡಿದೆ.
ಕಾಲ್ತುಳಿತದಿಂದ ಮಹಿಳೆ ಸಾವು ಪ್ರಕರಣದಲ್ಲಿ ಇಂದು(ಡಿ.13) ನಟ ಅಲ್ಲು ಅರ್ಜುನ್ ಅವರನ್ನು ಪೊಲೀಸರು ಬಂಧಿಸಿ ನಾಂಪಲ್ಲಿ ಹೈಕೋರ್ಟ್ಗೆ ಹಾಜರುಪಡಿಸಿದ್ದರು. ಆ ವೇಳೆ ಅಲ್ಲು ಅರ್ಜುನ್ಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನದಲ್ಲಿರಿಸುವಂತೆ ಆದೇಶ ನೀಡಿತ್ತು.
ನಾಂಪಲ್ಲಿ ಕೋರ್ಟ್ನ ನ್ಯಾಯಾಂಗ ಬಂಧನ ಆದೇಶವನ್ನು ಪ್ರಶ್ನಿಸಿ ಅಲ್ಲು ಅರ್ಜುನ್ ಪರ ವಕೀಲ ಅರ್ನಬ್ ಗೋಸ್ವಾಮಿ ಅವರು ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿ ವಾದ-ವಿವಾದಗಳನ್ನು ಆಲಿಸಿದ ಬಳಿಕ ತೆಲಂಗಾಣ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ಈಗಾಗಲೇ ಅಲ್ಲು ಅರ್ಜುನ್ ನ್ಯಾಯಾಂಗ ಬಂಧನದಲ್ಲಿರುವ ಕಾರಣ ಜೈಲು ಸೂಪರಿಂಡೆಂಟ್ಗೆ ಬಾಂಡ್ಗಳನ್ನು ನೀಡಿ ಬಿಡುಗಡೆ ಆಗಬಹುದು ಎಂದು ಆದೇಶವನ್ನು ಹೊರಡಿಸಿದೆ.
ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…
ಲಕ್ನೋ: ಜೂನ್.21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…
ಮುಂಬೈ: ದೇಶದಲ್ಲಿ ಮುಂಗಾರು ಪ್ರವೇಶಿದರೂ ಮುಂಬೈನಲ್ಲಿ ಮಳೆಯ ಕೊರತೆ ಎದುರಾಗಿದೆ. ಮಳೆ ಕೊರತೆ ಎದುರಾದ ಪರಿಣಾಮ ಜಲಾಶಯಗಳಲ್ಲಿ ನೀರಿನ ಮಟ್ಟ…
ಎಚ್.ಎಸ್.ದಿನೇಶ್ಕುಮಾರ್ ಲಿಕ್ಕರ್ ಗ್ಯಾರೇಜ್, ಫಾಕ್ಸ್ ಡೆನ್ಗೆ ಮಾತ್ರ ಅನುಮತಿ; ನೋಟಿಸ್ ಜಾರಿ ಮಾಡಿ ಸುಮ್ಮನಾಗಿದ್ದ ಅಧಿಕಾರಿಗಳು?; ಅಬಕಾರಿ ಡಿಸಿ ಅಮಾನತ್ತಿಗೆ…
ಚಾಮರಾಜನಗರ ತಾಲ್ಲೂಕಿನ ಮಸಾಣಪುರ ಗ್ರಾಮದಲ್ಲಿ ಬಾಬಾ ಸಾಹೇಬ ಡಾ.ಅಂಬೇಡ್ಕರ್ರವರ ಭಾವಚಿತ್ರಕ್ಕೆ ಅಪಮಾನ ಮಾಡಿರುವ ಘಟನೆ ನಿಜಕ್ಕೂ ತಲೆತಗ್ಗಿಸುವಂಥ ಹೇಯ ಕೃತ್ಯವಾಗಿದೆ.ಈ…
‘ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ’ ಎಂಬ ಗಾದೆಯ ಮಾತು ನಿಜಕ್ಕೂ ಇಂದಿನ ಕಾಲಘಟ್ಟಕ್ಕೆ ಹೆಚ್ಚಾಗಿ ಅನ್ವಯಿಸುತ್ತದೆ. ಏಕೆಂದರೆ ಸಮಯ ಪಾಲನೆ…