ದೇಶ- ವಿದೇಶ

ರಾಜ್ಯಗಳ ನಡುವೆ ಯಾವುದೇ ತಾರತಮ್ಯ ಇಲ್ಲ : ಪ್ರಧಾನಿ ಮೋದಿ ಅಭಯ

ನವದೆಹಲಿ : ಉತ್ತರ, ದಕ್ಷಿಣ, ದೊಡ್ಡ ಅಥವಾ ಸಣ್ಣ ರಾಜ್ಯಗಳಾವುದೇ ಇರಲಿ ಕ್ಷೇತ್ರ ಪುನರ್ ವಿಂಗಡಣೆಯ ವಿಷಯಕ್ಕೆ ಬಂದಾಗ ರಾಜ್ಯಗಳ ನಡುವೆ ಯಾವುದೇ ತಾರತಮ್ಯ ಉಂಟಾಗುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಗ್ಯಾರಂಟಿ ನೀಡಿದ್ದಾರೆ.

ಈ ಮೂಲಕ ಕ್ಷೇತ್ರ ಪುನರ್ ವಿಂಗಡಣೆಯ ಬಗ್ಗೆ ಎದ್ದಿರುವ ವಿವಾದ, ಗೊಂದಲಗಳಿಗೆ ತೆರೆ ಎಳೆದಿದ್ದಾರೆ. ಇಂದು ಸಂಸತ್ ಅಧಿವೇಶನದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಪೂರ್ವದಿಂದ ಪಶ್ಚಿಮಕ್ಕೆ, ಉತ್ತರದಿಂದ ದಕ್ಷಿಣಕ್ಕೆ ಯಾವುದೇ ರಾಜ್ಯಕ್ಕೆ ಯಾವುದೇ ಅನ್ಯಾಯವಾಗುವುದಿಲ್ಲ ಎಂದು ನಾನು ಗ್ಯಾರಂಟಿ ನೀಡುತ್ತೇನೆ ಎಂದು ಹೇಳಿದ್ದಾರೆ.

ಲೋಕಸಭೆಯಲ್ಲಿ ಪರಿಚಯಿಸಲಾದ ಮೂರು ಮಸೂದೆಗಳ ಕುರಿತು ಚರ್ಚೆ ನಡೆಸಲು ವಿಶೇಷ ಸಂಸತ್ತಿನ ಅಧಿವೇಶನವು ಇಂದು ಪ್ರಾರಂಭವಾಯಿತು. ಈ ಅಧಿವೇಶನವು ಎನ್‌ಡಿಎ ಮತ್ತು ವಿರೋಧ ಪಕ್ಷದ ನಡುವೆ 40 ನಿಮಿಷಗಳ ಕಾಲ ನಡೆದ ಬಿಸಿ ಬಿಸಿ ಚರ್ಚೆಯೊಂದಿಗೆ ಪ್ರಾರಂಭವಾಯಿತು. ನಂತರ ಎನ್‌ಡಿಎ ಮತ್ತು ವಿರೋಧ ಪಕ್ಷದವರು ಸಾಂವಿಧಾನಿಕ (131 ನೇ ತಿದ್ದುಪಡಿ) ಮಸೂದೆಯನ್ನು ಪರಿಚಯಿಸುವ ಮೊದಲು ಮತಗಳ ವಿಭಜನೆಗೆ ಒತ್ತಾಯಿಸಿದರು. ಕೊನೆಗೆ ಈ ಮಸೂದೆಯನ್ನು 251 ಸದಸ್ಯರು ಬೆಂಬಲಿಸಿದರು ಮತ್ತು 185 ಸಂಸದರು ಅದರ ವಿರುದ್ಧ ಮತ ಚಲಾಯಿಸಿದರು.

ದಕ್ಷಿಣ ಭಾರತದ ಮುಖ್ಯಮಂತ್ರಿಗಳಾದ ತಮಿಳುನಾಡಿನ ಎಂ.ಕೆ. ಸ್ಟಾಲಿನ್, ಕೇರಳದ ಪಿಣರಾಯಿ ವಿಜಯನ್, ತೆಲಂಗಾಣದ ರೇವಂತ್ ರೆಡ್ಡಿ ಮತ್ತು ಕರ್ನಾಟಕದ ಸಿದ್ದರಾಮಯ್ಯ ಜನಸಂಖ್ಯಾ ನಿಯಂತ್ರಣ ಕ್ರಮಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತಂದ ತಮ್ಮ ರಾಜ್ಯಗಳಿಗೆ ಈ ಸೀಮಾ ನಿರ್ಣಯದಿಂದ ಅನ್ಯಾಯವಾಗುತ್ತದೆ. ಜನಸಂಖ್ಯೆ ಹೆಚ್ಚಿರುವ ಉತ್ತರ ಭಾರತದ ರಾಜ್ಯಗಳಿಗೆ ಇದರಿಂದ ಹೆಚ್ಚು ಅನುಕೂಲವಾಗುತ್ತದೆ ಎಂದು ಅಸಮಾಧಾನ ಹೊರಹಾಕಿದ್ದರು. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿದ ಪ್ರಧಾನಿ ಮೋದಿ, ಕ್ಷೇತ್ರ ಪುನರ್ವಿಂಗಡಣೆ ಮಸೂದೆ ಪ್ರಕ್ರಿಯೆಯನ್ನು ವಿರೋಧಿಸುವ ಧ್ವನಿಗಳು ಕೇವಲ ರಾಜಕೀಯ ಲಾಭಕ್ಕಾಗಿ ಹಾಗೆ ಮಾಡುತ್ತಿವೆ. ಇದರಿಂದ ಯಾವ ರಾಜ್ಯಕ್ಕೂ ಯಾವುದೇ ತಾರತಮ್ಯ, ಅನ್ಯಾಯ ಆಗುವುದಿಲ್ಲ ಎಂಬುದು ನನ್ನ ಗ್ಯಾರಂಟಿ ಎಂದು ಭರವಸೆ ನೀಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಕಾಕ್ರೋಚ್‌ ಪ್ರತಿಭಟನೆ ; ವಿದ್ಯಾರ್ಥಿಗಳ ರಕ್ಷಣೆಗೆ ಪೊಲೀಸ್‌ ವ್ಯಾನ್‌ ತಡೆದ ಜೇನ್‌-ಝಿ ಕಿಡ್‌

ಮುಂಬೈ : ನೀಟ್‌ ಅಕ್ರಮ ವಿರೋಧಿಸಿ ದೇಶಾದ್ಯಂತ ಕಾಕ್ರೋಚ್‌ ಜನತಾ ಪಾರ್ಟಿ (ಸಿಜೆಪಿ) ನಡೆಸುತ್ತಿರುವ ಪ್ರತಿಭಟನೆಯು ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ.…

3 hours ago

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

16 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

16 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

16 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

16 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

16 hours ago