ದೇಶ- ವಿದೇಶ

ರಾಜ್ಯಗಳ ನಡುವೆ ಯಾವುದೇ ತಾರತಮ್ಯ ಇಲ್ಲ : ಪ್ರಧಾನಿ ಮೋದಿ ಅಭಯ

ನವದೆಹಲಿ : ಉತ್ತರ, ದಕ್ಷಿಣ, ದೊಡ್ಡ ಅಥವಾ ಸಣ್ಣ ರಾಜ್ಯಗಳಾವುದೇ ಇರಲಿ ಕ್ಷೇತ್ರ ಪುನರ್ ವಿಂಗಡಣೆಯ ವಿಷಯಕ್ಕೆ ಬಂದಾಗ ರಾಜ್ಯಗಳ ನಡುವೆ ಯಾವುದೇ ತಾರತಮ್ಯ ಉಂಟಾಗುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಗ್ಯಾರಂಟಿ ನೀಡಿದ್ದಾರೆ.

ಈ ಮೂಲಕ ಕ್ಷೇತ್ರ ಪುನರ್ ವಿಂಗಡಣೆಯ ಬಗ್ಗೆ ಎದ್ದಿರುವ ವಿವಾದ, ಗೊಂದಲಗಳಿಗೆ ತೆರೆ ಎಳೆದಿದ್ದಾರೆ. ಇಂದು ಸಂಸತ್ ಅಧಿವೇಶನದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಪೂರ್ವದಿಂದ ಪಶ್ಚಿಮಕ್ಕೆ, ಉತ್ತರದಿಂದ ದಕ್ಷಿಣಕ್ಕೆ ಯಾವುದೇ ರಾಜ್ಯಕ್ಕೆ ಯಾವುದೇ ಅನ್ಯಾಯವಾಗುವುದಿಲ್ಲ ಎಂದು ನಾನು ಗ್ಯಾರಂಟಿ ನೀಡುತ್ತೇನೆ ಎಂದು ಹೇಳಿದ್ದಾರೆ.

ಲೋಕಸಭೆಯಲ್ಲಿ ಪರಿಚಯಿಸಲಾದ ಮೂರು ಮಸೂದೆಗಳ ಕುರಿತು ಚರ್ಚೆ ನಡೆಸಲು ವಿಶೇಷ ಸಂಸತ್ತಿನ ಅಧಿವೇಶನವು ಇಂದು ಪ್ರಾರಂಭವಾಯಿತು. ಈ ಅಧಿವೇಶನವು ಎನ್‌ಡಿಎ ಮತ್ತು ವಿರೋಧ ಪಕ್ಷದ ನಡುವೆ 40 ನಿಮಿಷಗಳ ಕಾಲ ನಡೆದ ಬಿಸಿ ಬಿಸಿ ಚರ್ಚೆಯೊಂದಿಗೆ ಪ್ರಾರಂಭವಾಯಿತು. ನಂತರ ಎನ್‌ಡಿಎ ಮತ್ತು ವಿರೋಧ ಪಕ್ಷದವರು ಸಾಂವಿಧಾನಿಕ (131 ನೇ ತಿದ್ದುಪಡಿ) ಮಸೂದೆಯನ್ನು ಪರಿಚಯಿಸುವ ಮೊದಲು ಮತಗಳ ವಿಭಜನೆಗೆ ಒತ್ತಾಯಿಸಿದರು. ಕೊನೆಗೆ ಈ ಮಸೂದೆಯನ್ನು 251 ಸದಸ್ಯರು ಬೆಂಬಲಿಸಿದರು ಮತ್ತು 185 ಸಂಸದರು ಅದರ ವಿರುದ್ಧ ಮತ ಚಲಾಯಿಸಿದರು.

ದಕ್ಷಿಣ ಭಾರತದ ಮುಖ್ಯಮಂತ್ರಿಗಳಾದ ತಮಿಳುನಾಡಿನ ಎಂ.ಕೆ. ಸ್ಟಾಲಿನ್, ಕೇರಳದ ಪಿಣರಾಯಿ ವಿಜಯನ್, ತೆಲಂಗಾಣದ ರೇವಂತ್ ರೆಡ್ಡಿ ಮತ್ತು ಕರ್ನಾಟಕದ ಸಿದ್ದರಾಮಯ್ಯ ಜನಸಂಖ್ಯಾ ನಿಯಂತ್ರಣ ಕ್ರಮಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತಂದ ತಮ್ಮ ರಾಜ್ಯಗಳಿಗೆ ಈ ಸೀಮಾ ನಿರ್ಣಯದಿಂದ ಅನ್ಯಾಯವಾಗುತ್ತದೆ. ಜನಸಂಖ್ಯೆ ಹೆಚ್ಚಿರುವ ಉತ್ತರ ಭಾರತದ ರಾಜ್ಯಗಳಿಗೆ ಇದರಿಂದ ಹೆಚ್ಚು ಅನುಕೂಲವಾಗುತ್ತದೆ ಎಂದು ಅಸಮಾಧಾನ ಹೊರಹಾಕಿದ್ದರು. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿದ ಪ್ರಧಾನಿ ಮೋದಿ, ಕ್ಷೇತ್ರ ಪುನರ್ವಿಂಗಡಣೆ ಮಸೂದೆ ಪ್ರಕ್ರಿಯೆಯನ್ನು ವಿರೋಧಿಸುವ ಧ್ವನಿಗಳು ಕೇವಲ ರಾಜಕೀಯ ಲಾಭಕ್ಕಾಗಿ ಹಾಗೆ ಮಾಡುತ್ತಿವೆ. ಇದರಿಂದ ಯಾವ ರಾಜ್ಯಕ್ಕೂ ಯಾವುದೇ ತಾರತಮ್ಯ, ಅನ್ಯಾಯ ಆಗುವುದಿಲ್ಲ ಎಂಬುದು ನನ್ನ ಗ್ಯಾರಂಟಿ ಎಂದು ಭರವಸೆ ನೀಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಹನೂರು | ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬೃಹತ್‌ ಪ್ರತಿಭಟನೆ

ಹನೂರು : ಕುಡಿಯುವ ನೀರು, ಇ-ಸ್ವತ್ತು, ಪೋಡಿ ಹಾಗೂ ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಸೇರಿ ಹಲವು ಬೇಡಿಕೆಗಳನ್ನು ಈಡೇರಿಸುವಂತೆ…

7 mins ago

ಮೈಸೂರಿನ ರೈಲ್ವೆ ಗೂಡ್ಸ್‌ ಶೆಡ್‌ ಸ್ಥಾಳಾಂತಕ್ಕೆ ಹುನ್ನಾರ : ಎಂ.ಲಕ್ಷ್ಮಣ್‌ ಆರೋಪ

ಮೈಸೂರು : ನಗರದಲ್ಲಿರುವ ರೈಲ್ವೇ ಗೂಡ್ಸ್‌ ಶೆಡನ್ನು ಪಾಂಡವಪುರಕ್ಕೆ ಸ್ಥಳಾಂತರಿಸಲು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ವಿ.ಸೋಮಣ್ಣ ಅವರು ಹುನ್ನಾರ…

19 mins ago

ಮಹಿಳಾ ಮೀಸಲಾತಿ ಕಾಯ್ದೆ ಏ.16 ರಿಂದಲೇ ಜಾರಿ

ಕಾನೂನು ಸಚಿವಾಲಯದಿಂದ ಅಧಿಸೂಚನೆ ಪ್ರಕಟ ನವದೆಹಲಿ: ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಸ್ಥಾನ ಒದಗಿಸುವ ಮಹಿಳಾ ಮೀಸಲಾತಿ…

31 mins ago

ಮೈಸೂರು | ಚಿರತೆ ಸೆರೆ ; ನಿಟ್ಟುಸಿರುಬಿಟ್ಟ ಕುಟುಂಬಸ್ಥರು

ಮೈಸೂರು : ನಗರದ ಹೃದಯ ಭಾಗವಾದ ಸಿದ್ದಾರ್ಥ ನಗರದ ಸುರೇಶ್‌ ಎಂಬುವವರ ಮನೆಗೆ ಏಕಾಏಕಿ ನುಗ್ಗಿದ ಚಿರತೆಯನ್ನು ಅರಣ್ಯ ಇಲಾಖೆ…

40 mins ago

ಕ್ಷೇತ್ರ ಪುನರ್ವಿಂಗಡಣೆಯಿಂದ ದಕ್ಷಿಣ ರಾಜ್ಯಗಳಿಗೆ ಅನ್ಯಾಯ ; ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಆಕ್ಷೇಪ

ಮೈಸೂರು : ಡಿಲಿಮಿಟೇಶನ್ ಕಾಯ್ದೆ (ಕ್ಷೇತ್ರ ಪುನರ್ವಿಂಗಡಣೆ ಕಾಯ್ದೆ)ಯಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯವಾಗಲಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್…

50 mins ago

ಸಮೃದ್ಧೀಕರಿಸಿದ ಯುರೇನಿಯಂ ಹಸ್ತಾಂತರಿಸಲು ಇರಾನ್ ಒಪ್ಪಿದೆ : ಟ್ರಂಪ್

ವಾಷಿಂಗ್ಟನ್ : ಇರಾನ್ ತನ್ನ ಬಳಿಯಿರುವ ಸಮೃದ್ಧೀಕರಿಸಿದ ಯುರೇನಿಯಂ ಸಂಗ್ರಹವನ್ನು ಅಮೆರಿಕಕ್ಕೆ ಹಸ್ತಾಂತರಿಸಲು ಒಪ್ಪಿದೆ ಎಂದು ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.…

60 mins ago