ದೇಶ- ವಿದೇಶ

ಕೆಂಪು ಕೋಟೆಯ ಕಲಶ ಕದ್ದಿದ್ದ ಕಳ್ಳ ವರ್ಮಾ ಸೆರೆ

ಹೊಸದಿಲ್ಲಿ : ಕೆಂಪು ಕೋಟೆ ಆವರಣದಲ್ಲಿ ನಡೆದಿದ್ದ ಒಂದು ಕೋಟಿ ರೂಪಾಯಿ ಮೌಲ್ಯದ ಎರಡು ಕಲಶಗಳ ಕಳ್ಳತನ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ.

ದೆಹಲಿಯ ಅಪರಾಧ ವಿಭಾಗದ ತಂಡ ಭಾನುವಾರ ತಡರಾತ್ರಿ ಹಾಪುರ್ ಗ್ರಾಮದ ವೈಶಾಲಿ ಕಾಲೋನಿಯಲ್ಲಿ ಆರೋಪಿ ಭೂಷಣ್ ವರ್ಮಾನನ್ನು ಎಂಬಾತನನ್ನು ಬಂಧಿಸಿ, ಚಿನ್ನದ ಕಲಶಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಆರೋಪಿ ಭೂಷಣ್ ದೆಹಲಿಯಲ್ಲಿ ಉದ್ಯಮಿಯೊಬ್ಬರಿಗೆ ಚಾಲಕನಾಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.

ಪೊಲೀಸರು ಬಂಧಿತ ಆರೋಪಿಯನ್ನು ದೆಹಲಿಗೆ ಕರೆತಂದಿದ್ದಾರೆ. ಆರೋಪಿ ಹೇಗೆ ಕಲಶ ಕದ್ದ, ಕಳ್ಳತನಕ್ಕೆ ಯಾರು ಸಹಾಯ ಮಾಡಿದರು, ಕಳ್ಳತನದ ನಂತರ ಆರೋಪಿ ಹಾಪುರಕ್ಕೆ ಹೇಗೆ ಹೋದ ಮತ್ತು ಕಲಶ ಕದ್ದ ನಂತರ ಅವನ ಯೋಜನೆ ಏನಾಗಿತ್ತು ಎಂಬ ಬಗ್ಗೆ ಪೊಲೀಸರು ಆರೋಪಿಯಿಂದ ಮಾಹಿತಿ ಕಲೆ ಹಾಕುತ್ತಿದ್ದಾರೆ.

ಭಾನುವಾರ ರಾತ್ರಿ ದೆಹಲಿ ಪೊಲೀಸರ ಮಾಹಿತಿಯ ಮೇರೆಗೆ ಥಾಣಾ ದೇಹತ್ ಪ್ರದೇಶದ ವೈಶಾಲಿ ಕಾಲೋನಿಯ ನಿವಾಸಿ ಭೂಷಣ್ ಎಂಬಾತನನ್ನು ಬಂಧಿಸಲಾಗಿದೆ. ಅವರ ಬಳಿಯಿಂದ ಒಂದು ಹೂದಾನಿಯನ್ನೂ ಕೂಡ ವಶಪಡಿಸಿಕೊಳ್ಳಲಾಗಿದೆ ಎಂದು ನಗರದ ಸಿಒ ವರುಣ್ ಮಿಶ್ರಾ ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ:  ಚಾ.ನಗರ-ಮೈಸೂರು ನಡುವೆ ಹೆಚ್ಚಿನ ರೈಲು ಸೌಲಭ್ಯ ಕಲ್ಪಿಸಿ

ಮೈಸೂರಿನಿಂದ ಚಾಮರಾಜನಗರಕ್ಕೆ ಪ್ರತಿನಿತ್ಯ ೬ ರೈಲುಗಳು ಸಂಚರಿಸುತ್ತಿವೆ. ಈಗ ಸಂಚರಿಸುವ ರೈಲುಗಳ ಜೊತೆ ಚಾಮರಾಜನಗರದಿಂದ ಮೈಸೂರಿಗೆ ಬೆಳಿಗ್ಗೆ ೪.೪೦ಕ್ಕೆ ,…

17 mins ago

ಉಪದ್ರವಕಾರಿ ಶ್ವಾನಗಳ ನಿಯಂತ್ರಣಕ್ಕೆ ಪರಿಹಾರ ಕ್ರಮ ಅಗತ್ಯ

ವಸಂತಕುಮಾರ ಮೈಸೂರಮಠ, ಸಾಮಾಜಿಕ ಕಾರ್ಯಕರ್ತರು ಶ್ವಾನ ಮನುಷ್ಯನ ಅತ್ಯತ್ತಮ ಸ್ನೇಹಿತ ಎಂಬುದರಲ್ಲಿ ಸಂದೇಹವಿಲ್ಲ! ಆದರೆ ಅವು ಉಪದ್ರವಕಾರಿ ಯಾದಾಗ ಏನಾದರೂ…

33 mins ago

ಶಿವಾಜಿ ಗಣೇಶನ್‌ ವಾರದ ಅಂಕಣ: ಹೆಸರಿನಲ್ಲೇನಿದೆ; ಆಡಳಿತದಲ್ಲಿ ಬದಲಾಗಬೇಕು

ದೆಹಲಿ ಕಣ್ಣೋಟ  ಶಿವಾಜಿ ಗಣೇಶನ್‌ ಬ್ರಿಟಿಷ್ ವಸಾಹತುಶಾಹಿ ಆಡಳಿತದ ಕಾಲದಲ್ಲಿ ಹೆಸರಿಸಲಾಗಿದ್ದ ಸರ್ಕಾರಿ ಕಾರ್ಯಾಲಯಗಳು ಮತ್ತು ರಸ್ತೆಗಳ ಹೆಸರುಗಳನ್ನು ಕೇಂದ್ರದಲ್ಲಿ…

1 hour ago

ಇದ್ದೆರಡು ಇಂಡಿಗೋ ರದ್ದು

ಕೆ.ಬಿ.ರಮೇಶನಾಯಕ ಮೈಸೂರು: ದೇಶದಲ್ಲಿ ಇಂಡಿಗೋ ಏರ್ ಲೈನ್ಸ್ ಸಂಸ್ಥೆಯ ವಿಮಾನಗಳ ಸೇವೆ ವ್ಯತ್ಯಯಗೊಂಡಿದ್ದು, ಮೈಸೂರು ವಿಮಾನ ನಿಲ್ದಾಣದಿಂದ ಹೊರ ರಾಜ್ಯಗಳಿಗೆ…

2 hours ago

ಸಿಎಂಗೆ ವಿದ್ಯಾರ್ಥಿಗಳ ಪತ್ರ

ಮಹಾದೇಶ್ ಎಂ ಗೌಡ ಹನೂರು: ತಮ್ಮ ಊರಿನಿಂದ ದೂರದಲ್ಲಿರುವ ಶಾಲಾ ಕಾಲೇಜುಗಳಿಗೆ ಹೋಗುವುದಕ್ಕೆ ಸಮರ್ಪಕವಾಗಿ ಬಸ್ ಸೌಲಭ್ಯ ಕಲ್ಪಿಸಲು ಕೋರಿ…

4 hours ago

ದಿವ್ಯ ಎಂಬ ಅಂದಿನ ಕಾಲದ ಪಣ ಪರೀಕ್ಷೆ

ಬಿ.ಎಸ್.ವಿನಯ್ ಮೊನ್ನೆ ಯಳಂದೂರಿನ ಬೀದಿಯಲ್ಲಿ ಸಾಗುತ್ತಿದ್ದಾಗ ಬಳೆಮಂಟಪದ ಮುಂದೆ ಪರಿಚಿತ ಹಿರಿಯರೊಬ್ಬರು ಎದುರಾದರು. ‘ಯಜಮಾನರೇ, ಕಾರ್ಯಕ್ರಮಕ್ಕೆ ಯಾಕೆ ಬರಲಿಲ್ಲ?’ ಕೇಳಿದರೆ…

4 hours ago