ದೇಶ- ವಿದೇಶ

ಕೆಂಪು ಕೋಟೆಯ ಕಲಶ ಕದ್ದಿದ್ದ ಕಳ್ಳ ವರ್ಮಾ ಸೆರೆ

ಹೊಸದಿಲ್ಲಿ : ಕೆಂಪು ಕೋಟೆ ಆವರಣದಲ್ಲಿ ನಡೆದಿದ್ದ ಒಂದು ಕೋಟಿ ರೂಪಾಯಿ ಮೌಲ್ಯದ ಎರಡು ಕಲಶಗಳ ಕಳ್ಳತನ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ.

ದೆಹಲಿಯ ಅಪರಾಧ ವಿಭಾಗದ ತಂಡ ಭಾನುವಾರ ತಡರಾತ್ರಿ ಹಾಪುರ್ ಗ್ರಾಮದ ವೈಶಾಲಿ ಕಾಲೋನಿಯಲ್ಲಿ ಆರೋಪಿ ಭೂಷಣ್ ವರ್ಮಾನನ್ನು ಎಂಬಾತನನ್ನು ಬಂಧಿಸಿ, ಚಿನ್ನದ ಕಲಶಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಆರೋಪಿ ಭೂಷಣ್ ದೆಹಲಿಯಲ್ಲಿ ಉದ್ಯಮಿಯೊಬ್ಬರಿಗೆ ಚಾಲಕನಾಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.

ಪೊಲೀಸರು ಬಂಧಿತ ಆರೋಪಿಯನ್ನು ದೆಹಲಿಗೆ ಕರೆತಂದಿದ್ದಾರೆ. ಆರೋಪಿ ಹೇಗೆ ಕಲಶ ಕದ್ದ, ಕಳ್ಳತನಕ್ಕೆ ಯಾರು ಸಹಾಯ ಮಾಡಿದರು, ಕಳ್ಳತನದ ನಂತರ ಆರೋಪಿ ಹಾಪುರಕ್ಕೆ ಹೇಗೆ ಹೋದ ಮತ್ತು ಕಲಶ ಕದ್ದ ನಂತರ ಅವನ ಯೋಜನೆ ಏನಾಗಿತ್ತು ಎಂಬ ಬಗ್ಗೆ ಪೊಲೀಸರು ಆರೋಪಿಯಿಂದ ಮಾಹಿತಿ ಕಲೆ ಹಾಕುತ್ತಿದ್ದಾರೆ.

ಭಾನುವಾರ ರಾತ್ರಿ ದೆಹಲಿ ಪೊಲೀಸರ ಮಾಹಿತಿಯ ಮೇರೆಗೆ ಥಾಣಾ ದೇಹತ್ ಪ್ರದೇಶದ ವೈಶಾಲಿ ಕಾಲೋನಿಯ ನಿವಾಸಿ ಭೂಷಣ್ ಎಂಬಾತನನ್ನು ಬಂಧಿಸಲಾಗಿದೆ. ಅವರ ಬಳಿಯಿಂದ ಒಂದು ಹೂದಾನಿಯನ್ನೂ ಕೂಡ ವಶಪಡಿಸಿಕೊಳ್ಳಲಾಗಿದೆ ಎಂದು ನಗರದ ಸಿಒ ವರುಣ್ ಮಿಶ್ರಾ ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

30 mins ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

32 mins ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

34 mins ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

4 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

4 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

4 hours ago