ಹೊಸದಿಲ್ಲಿ : ಕೆಂಪು ಕೋಟೆ ಆವರಣದಲ್ಲಿ ನಡೆದಿದ್ದ ಒಂದು ಕೋಟಿ ರೂಪಾಯಿ ಮೌಲ್ಯದ ಎರಡು ಕಲಶಗಳ ಕಳ್ಳತನ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ.
ದೆಹಲಿಯ ಅಪರಾಧ ವಿಭಾಗದ ತಂಡ ಭಾನುವಾರ ತಡರಾತ್ರಿ ಹಾಪುರ್ ಗ್ರಾಮದ ವೈಶಾಲಿ ಕಾಲೋನಿಯಲ್ಲಿ ಆರೋಪಿ ಭೂಷಣ್ ವರ್ಮಾನನ್ನು ಎಂಬಾತನನ್ನು ಬಂಧಿಸಿ, ಚಿನ್ನದ ಕಲಶಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಆರೋಪಿ ಭೂಷಣ್ ದೆಹಲಿಯಲ್ಲಿ ಉದ್ಯಮಿಯೊಬ್ಬರಿಗೆ ಚಾಲಕನಾಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.
ಪೊಲೀಸರು ಬಂಧಿತ ಆರೋಪಿಯನ್ನು ದೆಹಲಿಗೆ ಕರೆತಂದಿದ್ದಾರೆ. ಆರೋಪಿ ಹೇಗೆ ಕಲಶ ಕದ್ದ, ಕಳ್ಳತನಕ್ಕೆ ಯಾರು ಸಹಾಯ ಮಾಡಿದರು, ಕಳ್ಳತನದ ನಂತರ ಆರೋಪಿ ಹಾಪುರಕ್ಕೆ ಹೇಗೆ ಹೋದ ಮತ್ತು ಕಲಶ ಕದ್ದ ನಂತರ ಅವನ ಯೋಜನೆ ಏನಾಗಿತ್ತು ಎಂಬ ಬಗ್ಗೆ ಪೊಲೀಸರು ಆರೋಪಿಯಿಂದ ಮಾಹಿತಿ ಕಲೆ ಹಾಕುತ್ತಿದ್ದಾರೆ.
ಭಾನುವಾರ ರಾತ್ರಿ ದೆಹಲಿ ಪೊಲೀಸರ ಮಾಹಿತಿಯ ಮೇರೆಗೆ ಥಾಣಾ ದೇಹತ್ ಪ್ರದೇಶದ ವೈಶಾಲಿ ಕಾಲೋನಿಯ ನಿವಾಸಿ ಭೂಷಣ್ ಎಂಬಾತನನ್ನು ಬಂಧಿಸಲಾಗಿದೆ. ಅವರ ಬಳಿಯಿಂದ ಒಂದು ಹೂದಾನಿಯನ್ನೂ ಕೂಡ ವಶಪಡಿಸಿಕೊಳ್ಳಲಾಗಿದೆ ಎಂದು ನಗರದ ಸಿಒ ವರುಣ್ ಮಿಶ್ರಾ ತಿಳಿಸಿದ್ದಾರೆ.
ಪಿರಿಯಾಪಟ್ಟಣ : ಪಿರಿಯಾಪಟ್ಟಣದಲ್ಲಿ ಸರ್ವರ್ ಸಮಸ್ಯೆಯಿಂದಾಗಿ ಜನರು ಪಡಿತರ ಪಡೆಯಲು ಪರದಾಟ ನಡೆಸುವ ಪರಿಸ್ಥಿತಿ ಎದುರಾಗಿದೆ. ಜನಸಾಮಾನ್ಯರು ಎಂದಿನಂತೆ ಪ್ರತಿ…
ಮೈಸೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯನವರ ಮುಂದಿನ ಜೀವನ ಚೆನ್ನಾಗಿರಲಿ. ನೂತನ ಸಿಎಂ ಆಗಲಿರುವ ಡಿ.ಕೆ.ಶಿವಕುಮಾರ್ ಉತ್ತಮ…
ಹೊಸದಿಲ್ಲಿ : ಕಳೆದ ಎರಡ್ಮೂರು ದಿನಗಳಿಂದ ಮೌನಕ್ಕೆ ಶರಣಾಗಿದ್ದ ಡಿಕೆ ಶಿವಕುಮಾರ್ ಕೊನೆಗೂ ತುಟಿ ಬಿಚ್ಚಿ ಮಾತನಾಡಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ…
ಮೈಸೂರು: ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಈ…
ಬೆಂಗಳೂರು: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ನೀಡಿದ್ದ ರಾಜೀನಾಮೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅಂಗೀಕರಿಸಿದ್ದಾರೆ. ರಾಜೀನಾಮೆ ಅಂಗೀಕಾರವಾದ ಬೆನ್ನಲ್ಲೇ…
ಬೆಂಗಳೂರು: ದೇವರು ವರನೂ ಕೊಡಲ್ಲ. ಶಾಪನೂ ಕೊಡಲ್ಲ. ಅವಕಾಶ ಮಾತ್ರ ಕೊಡುತ್ತಾನೆ. ಆ ಕೊಟ್ಟಿರುವ ಅವಕಾಶದಲ್ಲಿ ನಾವು ಏನು ಸಾಧನೆ…