ದೇಶ- ವಿದೇಶ

ಇಂದು ಸಂಜೆ ಬಿಹಾರ ಚುನಾವಣೆಗೆ ದಿನಾಂಕ ಪ್ರಕಟ

ನವದೆಹಲಿ: ಇಂದು ಸಂಜೆ 4 ಗಂಟೆಗೆ ಭಾರತೀಯ ಚುನಾವಣಾ ಆಯೋಗ ಸುದ್ದಿಗೋಷ್ಠಿ ನಡೆಸಿ ಬಿಹಾರ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಪ್ರಕಟಿಸಲಿದೆ.

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್‌ ಈ ಹಿಂದೆ ಬಿಹಾರದ 243 ಸ್ಥಾನಗಳಿಗೆ ಚುನಾವಣೆಯನ್ನು ನವೆಂಬರ್.‌22ರ ಮೊದಲು ಮತ್ತು ಪ್ರಸ್ತು ವಿಧಾನಸಭೆಯ ಅವಧಿ ಮುಗಿಯುವ ಮೊದಲು ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದ್ದರು.

ಬಿಹಾರದಲ್ಲಿ ಸಿಎಂ ನಿತೀಶ್‌ ಕುಮಾರ್‌ ನೇತೃತ್ವದ ಎನ್‌ಡಿಎ ಮತ್ತು ಆರ್‌ಜೆಡಿ ನೇತೃತ್ವದ ಮಹಾಘಟಬಂಧನ್‌ ಮಧ್ಯೆ ನೇರ ಸ್ಪರ್ಧೆಯಿದೆ. ಎನ್‌ಡಿಎ ಪ್ರಸ್ತುತ 131 ಸ್ಥಾನಗಳನ್ನು ಹೊಂದಿದ್ದರೆ ವಿರೋಧ ಪಕ್ಷ 111 ಸ್ಥಾನಗಳನ್ನು ಹೊಂದಿದೆ.

 ಇದನ್ನು ಓದಿ : ಬಿಹಾರ ಚುನಾವಣೆ ಬಳಿಕ ರಾಜ್ಯ ರಾಜಕಾರಣದಲ್ಲಿ ಅಲ್ಲೋಲ, ಕಲ್ಲೋಲ: ಬಿ.ವೈ.ವಿಜಯೇಂದ್ರ ಭವಿಷ್ಯ

ಬಿಜೆಪಿ 80, ಜೆಡಿಯು 45, ಎಚ್‌ಎಎಂ(ಎಸ್)‌ 4 ಮತ್ತು ಇಬ್ಬರು ಸ್ವತಂತ್ರರು ಎನ್‌ಡಿಗೆ ಬಲ ನೀಡಿದರೆ ಆರ್‌ಜೆಡಿ 77, ಕಾಂಗ್ರೆಸ್‌ 19, ಸಿಪಿಐ(ಎಂ) 2, ಸಿಪಿಐ 2 ಸ್ಥಾನ ಹೊಂದಿದೆ.

ಕೊರೊನಾ ಸಾಂಕ್ರಾಮಿಕ ರೋಗದ ನಡುವೆ ಬಿಹಾರದಲ್ಲಿ 2020ರ ವಿಧಾನಸಭಾ ಚುನಾವಣೆಗಳು ಮೂರು ಹಂತಗಳಲ್ಲಿ ನಡೆದಿದ್ದವು. ಎನ್‌ಡಿಎ ಜಯಗಳಿಸಿದ ಬಳಿಕ ನಿತೀಶ್‌ ಕುಮಾರ್‌ ಅವರು ಮುಖ್ಯಮಂತ್ರಿಯಾಗಿದ್ದರು. ಹೀಗಿದ್ದರೂ 2022ರಲ್ಲಿ ನಿತೀಶ್‌ ಕುಮಾರ್‌ ಎನ್‌ಡಿಎ ತೊರೆದು ಆರ್‌ಜೆಡಿ ನೇತೃತ್ವದ ಮಹಾಘಟಬಂಧನ್‌ ಜೊತೆ ಸೇರಿ ಸರ್ಕಾರ ರಚಿಸಿದ್ದರು. ನಿತೀಶ್‌ ಕುಮಾರ್‌ 2024ರಲ್ಲಿ ಮಹಾಘಟಬಂಧನ್‌ ಜೊತೆಗಿನ ಸಂಬಂಧವನ್ನು ಮುರಿದು ಎನ್‌ಡಿಎ ಜೊತೆ ಮತ್ತೆ ಕೈಜೋಡಿಸಿ ಅಧಿಕಾರಕ್ಕೆ ಏರಿದ್ದರು.

ಆಂದೋಲನ ಡೆಸ್ಕ್

Recent Posts

ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪ್ರಕರಣ: ಗಾಯಾಳು ರವಿಗೆ ಮುಂದುವರಿದ ಚಿಕಿತ್ಸೆ

ಪ್ರಶಾಂತ್‌ ಎನ್‌ ಮಲ್ಲಿಕ್‌  ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…

9 hours ago

ಕಾಫಿ ಮಳಿಗೆಯಲ್ಲಿದ್ದ ಹಣ ಕಳವು: ಆರೋಪಿ ಬಂಧನ

ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್‌ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…

10 hours ago

ಕಾಡಾನೆ ದಾಳಿ: ಅಪಾರ ಪ್ರಮಾಣದ ಬೆಳೆ ನಾಶ

ಮಹಾದೇಶ್‌ ಎಂ ಗೌಡ  ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…

10 hours ago

ಬೆಂಗಳೂರಿನಲ್ಲೇ ಐಪಿಎಲ್ ಉದ್ಘಾಟನಾ ಪಂದ್ಯ

ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…

10 hours ago

ಪೌರಾಯುಕ್ತೆಗೆ ಧಮ್ಕಿ ಹಾಕಿದ್ದ ಪ್ರಕರಣ: ರಾಜೀವ್‌ ಗೌಡಗೆ ಹೈಕೋರ್ಟ್‌ ತರಾಟೆ

ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್‌ ತೀವ್ರ…

10 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾಗೌಡಗೆ ವಾರಕ್ಕೊಮ್ಮೆ ಮನೆ ಊಟ ಆದೇಶಕ್ಕೆ ತಡೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…

10 hours ago