ದೇಶ- ವಿದೇಶ

ಇಂದು ಸಂಜೆ ಬಿಹಾರ ಚುನಾವಣೆಗೆ ದಿನಾಂಕ ಪ್ರಕಟ

ನವದೆಹಲಿ: ಇಂದು ಸಂಜೆ 4 ಗಂಟೆಗೆ ಭಾರತೀಯ ಚುನಾವಣಾ ಆಯೋಗ ಸುದ್ದಿಗೋಷ್ಠಿ ನಡೆಸಿ ಬಿಹಾರ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಪ್ರಕಟಿಸಲಿದೆ.

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್‌ ಈ ಹಿಂದೆ ಬಿಹಾರದ 243 ಸ್ಥಾನಗಳಿಗೆ ಚುನಾವಣೆಯನ್ನು ನವೆಂಬರ್.‌22ರ ಮೊದಲು ಮತ್ತು ಪ್ರಸ್ತು ವಿಧಾನಸಭೆಯ ಅವಧಿ ಮುಗಿಯುವ ಮೊದಲು ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದ್ದರು.

ಬಿಹಾರದಲ್ಲಿ ಸಿಎಂ ನಿತೀಶ್‌ ಕುಮಾರ್‌ ನೇತೃತ್ವದ ಎನ್‌ಡಿಎ ಮತ್ತು ಆರ್‌ಜೆಡಿ ನೇತೃತ್ವದ ಮಹಾಘಟಬಂಧನ್‌ ಮಧ್ಯೆ ನೇರ ಸ್ಪರ್ಧೆಯಿದೆ. ಎನ್‌ಡಿಎ ಪ್ರಸ್ತುತ 131 ಸ್ಥಾನಗಳನ್ನು ಹೊಂದಿದ್ದರೆ ವಿರೋಧ ಪಕ್ಷ 111 ಸ್ಥಾನಗಳನ್ನು ಹೊಂದಿದೆ.

 ಇದನ್ನು ಓದಿ : ಬಿಹಾರ ಚುನಾವಣೆ ಬಳಿಕ ರಾಜ್ಯ ರಾಜಕಾರಣದಲ್ಲಿ ಅಲ್ಲೋಲ, ಕಲ್ಲೋಲ: ಬಿ.ವೈ.ವಿಜಯೇಂದ್ರ ಭವಿಷ್ಯ

ಬಿಜೆಪಿ 80, ಜೆಡಿಯು 45, ಎಚ್‌ಎಎಂ(ಎಸ್)‌ 4 ಮತ್ತು ಇಬ್ಬರು ಸ್ವತಂತ್ರರು ಎನ್‌ಡಿಗೆ ಬಲ ನೀಡಿದರೆ ಆರ್‌ಜೆಡಿ 77, ಕಾಂಗ್ರೆಸ್‌ 19, ಸಿಪಿಐ(ಎಂ) 2, ಸಿಪಿಐ 2 ಸ್ಥಾನ ಹೊಂದಿದೆ.

ಕೊರೊನಾ ಸಾಂಕ್ರಾಮಿಕ ರೋಗದ ನಡುವೆ ಬಿಹಾರದಲ್ಲಿ 2020ರ ವಿಧಾನಸಭಾ ಚುನಾವಣೆಗಳು ಮೂರು ಹಂತಗಳಲ್ಲಿ ನಡೆದಿದ್ದವು. ಎನ್‌ಡಿಎ ಜಯಗಳಿಸಿದ ಬಳಿಕ ನಿತೀಶ್‌ ಕುಮಾರ್‌ ಅವರು ಮುಖ್ಯಮಂತ್ರಿಯಾಗಿದ್ದರು. ಹೀಗಿದ್ದರೂ 2022ರಲ್ಲಿ ನಿತೀಶ್‌ ಕುಮಾರ್‌ ಎನ್‌ಡಿಎ ತೊರೆದು ಆರ್‌ಜೆಡಿ ನೇತೃತ್ವದ ಮಹಾಘಟಬಂಧನ್‌ ಜೊತೆ ಸೇರಿ ಸರ್ಕಾರ ರಚಿಸಿದ್ದರು. ನಿತೀಶ್‌ ಕುಮಾರ್‌ 2024ರಲ್ಲಿ ಮಹಾಘಟಬಂಧನ್‌ ಜೊತೆಗಿನ ಸಂಬಂಧವನ್ನು ಮುರಿದು ಎನ್‌ಡಿಎ ಜೊತೆ ಮತ್ತೆ ಕೈಜೋಡಿಸಿ ಅಧಿಕಾರಕ್ಕೆ ಏರಿದ್ದರು.

ಆಂದೋಲನ ಡೆಸ್ಕ್

Recent Posts

ನನಗೂ ಸಿಎಂ ಆಗಬೇಕು ಎನ್ನುವ ಆಸೆ ಇದೆ: ಸಚಿವ ದಿನೇಶ್‌ ಗುಂಡೂರಾವ್‌

ಮೈಸೂರು: ಪಕ್ಷದಲ್ಲಿ ಎಲ್ಲರಿಗೂ ಸಿಎಂ ಆಗಬೇಕು ಎನ್ನುವ ಆಸೆ ಇದೆ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದರು.…

41 mins ago

ಮಾಸ್ಕ್‌ ಮ್ಯಾನ್‌ ಚಿನ್ನಯ್ಯನಿಗೆ ಜಾಮೀನು ಸಿಕ್ಕರೂ ಬಿಡುಗಡೆ ಭಾಗ್ಯವಿಲ್ಲ

ಮಂಗಳೂರು: ಧರ್ಮಸ್ಥಳದಲ್ಲಿ ಶವಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರನಾಗಿ ಬಂದ ಬಳಿಕ ಆರೋಪಿಯಾಗಿ ಜೈಲಿನಲ್ಲಿರುವ ಮಾಸ್ಕ್‌ ಮ್ಯಾನ್‌ ಚಿನ್ನಯ್ಯನಿಗೆ ಜಾಮೀನು ಸಿಕ್ಕಿ…

51 mins ago

ಜಗದ್ಗುರು ಶ್ರೀ ಶಿವರಾತ್ರಿ ಡಾ.ರಾಜೇಂದ್ರ ಶ್ರೀಗಳ 110ನೇ ಜಯಂತೋತ್ಸವ, ಶ್ರೀ ನಂಜುಂಡಸ್ವಾಮಿಗಳ 16ನೇ ಸಂಸ್ಮರಣೋತ್ಸವ

ಟಿ.ನರಸೀಪುರ: ಜಗದ್ಗುರು ಶ್ರೀ ಶಿವರಾತ್ರಿ ಡಾ.ರಾಜೇಂದ್ರ ಶ್ರೀಗಳ 110ನೇ ಜಯಂತೋತ್ಸವ ಹಾಗೂ ಶ್ರೀ ನಂಜುಂಡಸ್ವಾಮಗಳ 16ನೇ ಸಂಸ್ಮರಣೋತ್ಸವ ಕಾರ್ಯಕ್ರಮ ಹೊಸಮಠದ…

1 hour ago

ರೆಪೋ ದರ ಕಡಿತಗೊಳಿಸಿದ ಭಾರತೀಯ ರಿಸರ್ವ್ ಬ್ಯಾಂಕ್

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ರೆಪೊ ದರವನ್ನು ಶೇ. 5.5% ರಿಂದ 5.25ಕ್ಕೆ ಅಂದರೆ 25 ಬೇಸಿಸ್ ಪಾಯಿಂಟ್‍ಗಳಷ್ಟು…

1 hour ago

ಮಂಡ್ಯ ಕೃಷಿ ಪ್ರದಾನ ಜಿಲ್ಲೆ: ಸಿಎಂ ಸಿದ್ದರಾಮಯ್ಯ

ಮಂಡ್ಯ: ಲ್ಯಾಬ್‌ ಟು ಲ್ಯಾಂಡ್‌ ಆದರೆ ಮಾತ್ರ ರೈತರಿಗೆ ಸಂಪೂರ್ಣ ಅನುಕೂಲವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಈ ಕುರಿತು…

1 hour ago

ಹೊಸ ದಾಖಲೆ ನಿರ್ಮಿಸಿದ ಬೆಂಗಳೂರು ಪೊಲೀಸರು: ಏನದು ಗೊತ್ತಾ?

ಬೆಂಗಳೂರು: ಮಾದಕದ್ರವ್ಯ ಮಾರಾಟ ಮತ್ತು ಮಾದಕದ್ರವ್ಯ ಸೇವನೆಯನ್ನು ನಿಗ್ರಹಿಸುವ ನಿಟ್ಟಿನಲ್ಲಿ ಬೆಂಗಳೂರು ಪೊಲೀಸರು ಹೊಸ ದಾಖಲೆ ನಿರ್ಮಿಸಿದ್ದಾರೆ. ಪ್ರಸಕ್ತ ಸಾಲಿನ…

2 hours ago