ದೇಶ- ವಿದೇಶ

ಇಂದು ಸಂಜೆ ಬಿಹಾರ ಚುನಾವಣೆಗೆ ದಿನಾಂಕ ಪ್ರಕಟ

ನವದೆಹಲಿ: ಇಂದು ಸಂಜೆ 4 ಗಂಟೆಗೆ ಭಾರತೀಯ ಚುನಾವಣಾ ಆಯೋಗ ಸುದ್ದಿಗೋಷ್ಠಿ ನಡೆಸಿ ಬಿಹಾರ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಪ್ರಕಟಿಸಲಿದೆ.

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್‌ ಈ ಹಿಂದೆ ಬಿಹಾರದ 243 ಸ್ಥಾನಗಳಿಗೆ ಚುನಾವಣೆಯನ್ನು ನವೆಂಬರ್.‌22ರ ಮೊದಲು ಮತ್ತು ಪ್ರಸ್ತು ವಿಧಾನಸಭೆಯ ಅವಧಿ ಮುಗಿಯುವ ಮೊದಲು ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದ್ದರು.

ಬಿಹಾರದಲ್ಲಿ ಸಿಎಂ ನಿತೀಶ್‌ ಕುಮಾರ್‌ ನೇತೃತ್ವದ ಎನ್‌ಡಿಎ ಮತ್ತು ಆರ್‌ಜೆಡಿ ನೇತೃತ್ವದ ಮಹಾಘಟಬಂಧನ್‌ ಮಧ್ಯೆ ನೇರ ಸ್ಪರ್ಧೆಯಿದೆ. ಎನ್‌ಡಿಎ ಪ್ರಸ್ತುತ 131 ಸ್ಥಾನಗಳನ್ನು ಹೊಂದಿದ್ದರೆ ವಿರೋಧ ಪಕ್ಷ 111 ಸ್ಥಾನಗಳನ್ನು ಹೊಂದಿದೆ.

 ಇದನ್ನು ಓದಿ : ಬಿಹಾರ ಚುನಾವಣೆ ಬಳಿಕ ರಾಜ್ಯ ರಾಜಕಾರಣದಲ್ಲಿ ಅಲ್ಲೋಲ, ಕಲ್ಲೋಲ: ಬಿ.ವೈ.ವಿಜಯೇಂದ್ರ ಭವಿಷ್ಯ

ಬಿಜೆಪಿ 80, ಜೆಡಿಯು 45, ಎಚ್‌ಎಎಂ(ಎಸ್)‌ 4 ಮತ್ತು ಇಬ್ಬರು ಸ್ವತಂತ್ರರು ಎನ್‌ಡಿಗೆ ಬಲ ನೀಡಿದರೆ ಆರ್‌ಜೆಡಿ 77, ಕಾಂಗ್ರೆಸ್‌ 19, ಸಿಪಿಐ(ಎಂ) 2, ಸಿಪಿಐ 2 ಸ್ಥಾನ ಹೊಂದಿದೆ.

ಕೊರೊನಾ ಸಾಂಕ್ರಾಮಿಕ ರೋಗದ ನಡುವೆ ಬಿಹಾರದಲ್ಲಿ 2020ರ ವಿಧಾನಸಭಾ ಚುನಾವಣೆಗಳು ಮೂರು ಹಂತಗಳಲ್ಲಿ ನಡೆದಿದ್ದವು. ಎನ್‌ಡಿಎ ಜಯಗಳಿಸಿದ ಬಳಿಕ ನಿತೀಶ್‌ ಕುಮಾರ್‌ ಅವರು ಮುಖ್ಯಮಂತ್ರಿಯಾಗಿದ್ದರು. ಹೀಗಿದ್ದರೂ 2022ರಲ್ಲಿ ನಿತೀಶ್‌ ಕುಮಾರ್‌ ಎನ್‌ಡಿಎ ತೊರೆದು ಆರ್‌ಜೆಡಿ ನೇತೃತ್ವದ ಮಹಾಘಟಬಂಧನ್‌ ಜೊತೆ ಸೇರಿ ಸರ್ಕಾರ ರಚಿಸಿದ್ದರು. ನಿತೀಶ್‌ ಕುಮಾರ್‌ 2024ರಲ್ಲಿ ಮಹಾಘಟಬಂಧನ್‌ ಜೊತೆಗಿನ ಸಂಬಂಧವನ್ನು ಮುರಿದು ಎನ್‌ಡಿಎ ಜೊತೆ ಮತ್ತೆ ಕೈಜೋಡಿಸಿ ಅಧಿಕಾರಕ್ಕೆ ಏರಿದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

12 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

13 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

13 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

13 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

13 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

13 hours ago