ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಂದು ಮಂಡಿಸಿದ ಬಜೆಟ್ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮಾತನಾಡಿ ಸಂತಸ ವ್ಯಕ್ತಪಡಿಸಿದ್ದಾರೆ.
ಬಜೆಟ್ ಮಂಡನೆ ಬಳಿಕ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಈ ಬಜೆಟ್ ಜನಸಾಮಾನ್ಯರ ಬಜೆಟ್ ಆಗಿದೆ. ಹಣ ಉಳಿತಾಯ ಮತ್ತು ಹೂಡಿಕೆಗೆ ಬಜೆಟ್ ಉತ್ತೇಜನ ನೀಡುತ್ತದೆ. ವಿಕಸಿತ ಭಾರತ ಮತ್ತು ಅಭಿವೃದ್ಧಿ ಹೊಂದಿದ ಭಾರತದ ಗುರಿಗೆ ದಾರಿ ಮಾಡಿಕೊಡುತ್ತದೆ ಎಂದು ಹೇಳಿದರು.
ಇನ್ನು ಈ ಬಜೆಟ್ನಲ್ಲಿ ವಾರ್ಷಿಕ 12 ಲಕ್ಷ ರೂವರೆಗಿನ ಆದಾಯವನ್ನು ತೆರಿಗೆ ಮುಕ್ತಗೊಳಿಸಲಾಗಿದೆ. ಎಲ್ಲಾ ಆದಾಯ ಗುಂಪುಗಳಿಗೆ ತೆರಿಗೆಗಳನ್ನು ಸಹ ಕಡಿಮೆ ಮಾಡಲಾಗಿದೆ. ಇದರಿಂದ ಮಧ್ಯಮ ವರ್ಗಕ್ಕೆ ತುಂಬಾ ಪ್ರಯೋಜನವಾಗಲಿದೆ ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಈ ಬಜೆಟ್ ಪ್ರವಾಸೋದ್ಯಮ ಮತ್ತು ಆತಿಥ್ಯ ಕ್ಷೇತ್ರಗಳಿಗೆ, ಹಡಗು ನಿರ್ಮಾಣ ಮತ್ತು ಸಮುದ್ರ ಕೈಗಾರಿಕೆಗಳಿಗೆ ಹಾಗೂ ದೇಶಾದ್ಯಂತ ರೈತರಿಗೆ ಸಹಾಯ ಮಾಡುತ್ತದೆ ಎಂದು ತಿಳಿಸಿದ್ದಾರೆ.
ಇನ್ನು ಈ ಬಜೆಟ್ನಲ್ಲಿ ಮೊದಲ ಬಾರಿಗೆ ಹೋಟೆಲ್ ಗಳನ್ನು ಮೂಲಸೌಕರ್ಯ ವ್ಯಾಪ್ತಿಗೆ ತರುವ ಮೂಲಕ ಪ್ರವಾಸೋದ್ಯಮಕ್ಕೆ ದೊಡ್ಡ ಉತ್ತೇಜನ ಸಿಗುತ್ತದೆ ಎಂದು ಹೇಳಿದರು.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…