ವಾಷಿಂಗ್ಟನ್ : ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮೇಲೆ ಮತ್ತೆ ಹತ್ಯೆಗೆ ಯತ್ನ ನಡೆದಿದೆ. ಹಿಲ್ಟನ್ ಹೋಟೆಲ್ನ ಘಟನೆ ಸೇರಿ ಒಟ್ಟು 4 ಬಾರಿ ಅಪರಿಚಿತರು ಹತ್ಯೆಗೆ ಯತ್ನ ನಡೆಸಿದ್ದರು.
ವಾಷಿಂಗ್ಟನ್ ಡಿ.ಸಿಯ ಪ್ರತಿಷ್ಠಿತ ವಾಷಿಂಗ್ಟನ್ ಹಿಲ್ಟನ್ ಹೋಟೆಲ್ನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಅಧ್ಯಕ್ಷ ಟ್ರಂಪ್ ಅವರು ಭಾಷಣ ಮಾಡಲು ವೇದಿಕೆಗೆ ಸಿದ್ಧರಾಗುತ್ತಿದ್ದಂತೆಯೇ, ಹೋಟೆಲ್ನ ಹೊರಗೆ ಸತತವಾಗಿ 5 ರಿಂದ 8 ಬಾರಿ ಗುಂಡಿನ ಸದ್ದು ಕೇಳಿಬಂದಿದೆ. ಇದರಿಂದ ಎಚ್ಚೆತ್ತ ಸೀಕ್ರೆಟ್ ಸರ್ವಿಸ್ ಏಜೆಂಟ್ಗಳು ಕ್ಷಣಾರ್ಧದಲ್ಲಿ ಅಧ್ಯಕ್ಷರು ಮತ್ತು ಗಣ್ಯರನ್ನು ಸುತ್ತುವರಿದು ಸುರಕ್ಷಿತ ಸ್ಥಳಕ್ಕೆ ಕರೆದೊಯ್ದರು.
ಗುಂಡಿನ ದಾಳಿ ನಡೆದ ತಕ್ಷಣ ಕಾರ್ಯಪ್ರವೃತ್ತರಾದ ಭದ್ರತಾ ಪಡೆಗಳು ಒಬ್ಬ ಶಂಕಿತ ವ್ಯಕ್ತಿಯನ್ನು ಸ್ಥಳದಲ್ಲೇ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ ಶ್ವೇತಭವನದ ಸುತ್ತಮುತ್ತಲಿನ ಭದ್ರತೆಯನ್ನು ಹಿಂದೆಂದಿಗಿಂತಲೂ ಹೆಚ್ಚಿಸಲಾಗಿದ್ದು, ಹೈ ಅಲರ್ಟ್ ಘೋಷಿಸಲಾಗಿದೆ.
ಟ್ರಂಪ್ ಮೇಲಿನ ಆ 4 ದಾಳಿಗಳು ಇಂತಿವೆ…
1. ಪೆನ್ಸಿಲ್ವೇನಿಯಾ ರ್ಯಾಲಿ ದಾಳಿ ( ಜುಲೈ 13, 2024)
ಇದು ಟ್ರಂಪ್ ಅವರ ಮೇಲಿನ ಅತ್ಯಂತ ಗಂಭೀರ ದಾಳಿಯಾಗಿದ್ದು, ಅವರ ಬಲಗಿವಿಗೆ ಗುಂಡು ತಗುಲಿ ಗಾಯವಾಗಿತ್ತು. ಥಾಮಸ್ ಮ್ಯಾಥ್ಯೂ ಕ್ರೂಕ್ಸ್ ಎಂಬ 20 ವರ್ಷದ ಯುವಕ ಹತ್ತಿರದ ಕಟ್ಟಡದ ಮೇಲ್ಛಾವಣಿಯಿಂದ ಎಂಟು ಬಾರಿ ಗುಂಡು ಹಾರಿಸಿದ್ದ. ಘಟನೆಯಲ್ಲಿ ಒಬ್ಬ ಪ್ರೇಕ್ಷಕ ಮೃತಪಟ್ಟಿದ್ದು, ಇಬ್ಬರು ತೀವ್ರವಾಗಿ ಗಾಯಗೊಂಡಿದ್ದರು.
2. ಫ್ಲೋರಿಡಾ ಗಾಲ್ಫ್ ಕೋರ್ಸ್ ದಾಳಿ (ಸೆಪ್ಟೆಂಬರ್, 2024)
2024ರ ಸೆಪ್ಟೆಂಬರ್ನಲ್ಲಿ ಫ್ಲೋರಿಡಾದ ವೆಸ್ಟ್ ಪಾಮ್ ಬೀಚ್ನಲ್ಲಿ ಟ್ರಂಪ್ ಗಾಲ್ಫ್ ಆಡುತ್ತಿದ್ದಾಗ ಅವರ ಮೇಲೆ ದಾಳಿಗೆ ಸಂಚು ರೂಪಿಸಲಾಗಿತ್ತು. ರೈಯಾನ್ ವೆಸ್ಲಿ ರೌತ್ ಎಂಬತಾ ರೈಫಲ್ನೊಂದಿಗೆ ಪೊದೆಗಳಲ್ಲಿ ಅಡಗಿದ್ದಾಗ ಸೀಕ್ರೆಟ್ ಸರ್ವಿಸ್ ಸಿಬ್ಬಂದಿ ಅವನನ್ನು ಗುರುತಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಳಿಕೋರನಿಗೆ ಫೆಬ್ರವರಿ 2026ರಲ್ಲಿ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.
3. ಮಾರ್-ಎ-ಲಾಗೋ ಘಟನೆ (ಫೆಬ್ರವರಿ 22, 2026)
ಸುಮಾರು ಎರಡು ತಿಂಗಳ ಹಿಂದೆ ಟ್ರಂಪ್ ಅವರ ಫ್ಲೋರಿಡಾ ನಿವಾಸವಾದ ಮಾರ್-ಎ-ಲಾಗೋದ ಭದ್ರತಾ ವಲಯವನ್ನು ಪ್ರವೇಶಿಸಲು ಪ್ರಯತ್ನಿಸಿದ ಸಶಸ್ತ್ರ ವ್ಯಕ್ತಿಯನ್ನು ಭದ್ರತಾ ಸಿಬ್ಬಂದಿ ಗುಂಡಿಕ್ಕಿ ಕೊಂದಿದ್ದರು. ಈತ ನುಗ್ಗಿದ ಸಂದರ್ಭದಲ್ಲಿ ಟ್ರಂಪ್ ನಿವಾಸದಲ್ಲಿ ಇರಲಿಲ್ಲ.
4. ಶ್ವೇತಭವನದ ವರದಿಗಾರರ ಔತಣಕೂಟ (ಏಪ್ರಿಲ್ 25/26, 2026)
ವಾಷಿಂಗ್ಟನ್ ಡಿ.ಸಿಯ ವಾಷಿಂಗ್ಟನ್ ಹಿಲ್ಟನ್ ಹೋಟೆಲ್ನಲ್ಲಿ ನಡೆದ “ವೈಟ್ ಹೌಸ್ ಕರೆಸ್ಪಾಂಡೆಂಟ್ಸ್ ಡಿನ್ನರ್” ವೇಳೆ ದಾಳಿ ನಡೆದಿದೆ. ಟ್ರಂಪ್ ಅವರು ಭಾಷಣ ಮಾಡಲು ಸಿದ್ಧರಾಗಿದ್ದಾಗ ಸುಮಾರು 5 ರಿಂದ 8 ಬಾರಿ ಗುಂಡಿನ ಸದ್ದು ಕೇಳಿಬಂದಿದೆ.
ನವದೆಹಲಿ : ಆಮ್ ಆದ್ಮಿ ಪಕ್ಷದಲ್ಲಿ ಭಾರೀ ರಾಜಕೀಯ ಬೆಳವಣಿಗೆ ನಡೆದಿದ್ದು, ಪಕ್ಷ ತೊರೆದು ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ)…
ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಪ್ರತಿದಿನ ದಿನಪತ್ರಿಕೆ ಓದಿಸುವುದನ್ನು ಕಡ್ಡಾಯಗೊಳಿಸಲು ಶಿಕ್ಷಣ…
ನವದೆಹಲಿ : ದೇಶದಾದ್ಯಂತ ನಡೆಯುತ್ತಿರುವ ಜನಗಣತಿ ಕಾರ್ಯವು ಕೇವಲ ಸರ್ಕಾರದ ಕೆಲಸವಲ್ಲ, ಬದಲಾಗಿ ಪ್ರತಿ ನಾಗರಿಕರ ಜವಾಬ್ದಾರಿಯಾಗಿದೆ. ಇದರಲ್ಲಿ ಎಲ್ಲರ…
ಮೈಸೂರು : ನಗರದ ಇಟ್ಟಿಗೆಗೂಡಿನ ಶ್ರೀ ರೇಣುಕಾದೇವಿ ಕರಗ ದೇವಸ್ಥಾನ ಟ್ರಸ್ಟ್, ಶ್ರೀ ಚಾಮುಂಡೇಶ್ವರಿ ಮತ್ತು ಮಾರಿಯಮ್ಮನವರ ೧೦೨ನೇ ಕರಗಮಹೋತ್ಸವ…
ರಾಮನಗರ : ರಾಜ್ಯದಲ್ಲಿ ಮಾನವ ಮತ್ತು ಕಾಡು ಪ್ರಾಣಿಗಳ ನಡುವಿನ ಸಂಘರ್ಷ ಮುಂದುವರಿದಿದ್ದು, ಒಂಟಿ ಸಲಗ ದಾಳಿದ ಓರ್ವ ವ್ಯಕ್ತಿ…
ವಾಷಿಂಗ್ಟನ್ : ವರದಿಗಾರರ ಔತಣಕೂಟದಲ್ಲಿ ಗುಂಡಿನ ದಾಳಿ ನಡೆಸಿದ್ದ ವ್ಯಕ್ತಿ ಅತಿಥಿಯಾಗಿ ಹೋಟೆಲ್ ಪ್ರವೇಶ ಮಾಡಿದ್ದ ವಿಚಾರ ಪ್ರಾಥಮಿಕ ತನಿಖೆಯಿಂದ…