ದೇಶ- ವಿದೇಶ

ಪಕ್ಷ ಸಂಘಟನೆ ಮಾಡದವರು ನಿವೃತ್ತಿ ಹೊಂದಲಿ: ಮಲ್ಲಕಾರ್ಜುನ ಖರ್ಗೆ

ಅಹಮಾದಾಬಾದ್:‌ ಪಕ್ಷದ ಬಲವರ್ಧನೆ ಹಾಗೂ ಸಂಘಟನೆಯಲ್ಲಿ ಯಾರು ಕೆಲಸ ಮಾಡುವುದಿಲ್ಲವೋ ಅಂತಹವರು ಪಕ್ಷದಿಂದ ನಿವೃತ್ತಿ ಹೊಂದಲಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಖಡಕ್‌ ಎಚ್ಚರಿಕೆ ನೀಡಿದ್ದಾರೆ.

ಬುಧವಾರ ಪೂರ್ಣಗೊಂಡ ಕಾಂಗ್ರೆಸ್‌ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ಪಕ್ಷ ಸಂಘಟನೆಯಲ್ಲಿ ಜಿಲ್ಲಾ ಕಾಂಗ್ರೆಸ್‌ ಸಮಿತಿಗಳ ಅಧ್ಯಕ್ಷರ ಪಾತ್ರ ದೊಡ್ಡದಿದೆ. ಪಕ್ಷ ನೀಡಿದ ಜವಬ್ದಾರಿಯನ್ನು ನಿರ್ವಹಿಸಬೇಕು. ಹಾಗಾಗಿ, ಏಐಸಿಸಿ ಮಾರ್ಗಸೂಚಿಯಂತೆ ಜಿಲ್ಲಾಧ್ಯಕ್ಷ ನೇಮಕವನ್ನು ಕಟ್ಟುನಿಟ್ಟಾಗಿ ಮತ್ತು ನಿಷ್ಪಕ್ಷಪಾತವಾಗಿ ಮಾಡಬೇಕು ಎಂದು ಹೇಳಿದರು.

ಜಿಲ್ಲಾಧ್ಯಕ್ಷರಾಗಿ ನೇಮಕಗೊಂಡ ಒಂದು ವರ್ಷದೊಳಗೆ ಜನರನ್ನು ಸೇರಿಸಿ ಪಕ್ಷದ ಬಲವರ್ಧನೆಗೆ ಮುಂದಾಗಬೇಕು. ಭವಿಷ್ಯದಲ್ಲಿ ಚುನಾವಣಾ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಪ್ರಕ್ರಿಯೆಯಲ್ಲಿ ಜಿಲ್ಲಾಧ್ಯಕ್ಷರು ಪಾಲ್ಗೊಳ್ಳಲಿದ್ದಾರೆ ಎಂದರು.

ಕೇಂದ್ರ ಸರ್ಕಾರವು ರಾಷ್ಟ್ರೀಯತೆ ಹೆಸರಿನಲ್ಲಿ ಜನರಿಗೆ ಮಂಕು ಬೂದಿ ಎರಚುತ್ತಿದೆ. ಮುಸ್ಲಿಂರು ಮತ್ತು ಕ್ರಿಶ್ಚಿಯನ್ನರನ್ನು ಗುರಿಯಾಗಿಸಿಕೊಳ್ಳಲಾಗಿದೆ. ಇವರಲ್ಲಿ ಬಹುತೇಕರು ಭಯದಿಂದ ಬದುಕುವಂತೆ ಮಾಡಲಾಗುತ್ತಿದೆ. ಇದು ಅಪಮಾನಕರ ಮಾತ್ರವಲ್ಲ, ಸಂವಿಧಾನದ ವಿರುದ್ಧದ ಅಪರಾಧ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

11 mins ago

ಚಲನೆ ಕೇವಲ ವ್ಯಾಯಾಮವಲ್ಲ ಆರೋಗ್ಯದ ಶಕ್ತಿ

ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…

17 mins ago

ಒಂದು ಸೈನ್ಯದ ಆತ್ಮಾಹುತಿ ತಡೆದಿದ್ದರು ಅರಸು

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…

21 mins ago

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

11 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

12 hours ago