ದೇಶ- ವಿದೇಶ

ಮುಂಬೈಗೆ ಬೆದರಿಕೆ ಕರೆ | 400ಕೆಜಿRDX, 34 ಮಾನವ ಬಾಂಬ್‌ ಸ್ಪೋಟ..? ; ಎಲ್ಲೆಡೆ ಕಟ್ಟೆಚ್ಚರ!

ಮುಂಬೈ : ವಾಣಿಜ್ಯ ರಾಜಧಾನಿ ಮುಂಬೈ ನಗರವನ್ನೇ ಸಂಪೂರ್ಣವಾಗಿ ಸ್ಫೋಟಿಸಲು 400 ಕೆಜಿ ಆರ್‍ಡಿಎಕ್ಸ್‌ ಹೊತ್ತ 34 ಮಾನವ ಬಾಂಬ್‍ಗಳನ್ನು ವಾಹನದಲ್ಲಿ ಇಡಲಾಗಿದೆ ಎಂದು ಬೆದರಿಕೆ ಕರೆ ಬಂದಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚೆತ್ತುಕೊಂಡಿರುವ ಪೊಲೀಸರು ಇಡೀ ಮುಂಬೈ ನಗರದಲ್ಲಿ ಹೈ ಅಲರ್ಟ್ ಘೋಷಿಸಿದ್ದಾರೆ.

ನಗರಕ್ಕೆ ಬರುವ ಮತ್ತು ಒಳಪ್ರವೇಶ ಮಾಡುವ ವಾಹನಗಳನ್ನು ಬಿಗಿ ತಪಾಸಣೆ ನಡೆಸಲಾಗುತ್ತಿದ್ದು, ಮುಖ್ಯವಾಗಿ ವಿಧಾನಸೌಧ, ರಾಜಭವನ, ಹೈಕೋರ್ಟ್, ಬಂದರು, ವಿಮಾನ ನಿಲ್ದಾಣ ಸೇರಿದಂತೆ ಪ್ರಮುಖ ಸರ್ಕಾರಿ ಕಟ್ಟಡಗಳು, ಖಾಸಗಿ ಕಟ್ಟಡಗಳು, ಐಟಿಬಿಟಿ ಕಚೇರಿ ಮತ್ತಿತರ ಕಡೆ ಭಾರೀ ಭದ್ರತೆಯನ್ನು ಒದಗಿಸಿದ್ದಾರೆ.

ಇಡೀ ನಗರವನ್ನು ಸ್ಫೋಟಿಸಲು 400 ಕೆಜಿ ಆರ್‍ಡಿಎಕ್ಸ್‌ ಹೊತ್ತ 34 ಮಾನವ ಬಾಂಬ್‍ಗಳನ್ನು 34 ವಾಹನಗಳಲ್ಲಿ ಇರಿಸಲಾಗಿದೆ ಎಂದು ಅನಾಮಧೇಯ ವ್ಯಕ್ತಿಯೊಬ್ಬ ಕರೆ ಮಾಡಿ ಬೆದರಿಕೆ ಹಾಕಿರುವುದು ತಲ್ಲಣ ಸೃಷ್ಟಿಸಿದೆ. ಮುಂಬೈನ ಸಂಚಾರ ಪೊಲೀಸರಿಗೆ ಅವರ ಅಧಿಕೃತ ವಾಟ್ಸಾಪ್ ಸಂಖ್ಯೆಯ ಮೂಲಕ ಬೆದರಿಕೆಗಳು ಬಂದಿವೆ. ನಗರದಾದ್ಯಂತ 34 ವಾಹನಗಳಲ್ಲಿ 34 ಮಾನವ ಬಾಂಬ್‍ಗಳನ್ನು ಇರಿಸಲಾಗಿದೆ ಮತ್ತು ಸ್ಫೋಟವು ಇಡೀ ಮುಂಬೈಯನ್ನು ನಡುಗಿಸುತ್ತದೆ ಎಂದು ಬೆದರಿಕೆಯಲ್ಲಿ ಹೇಳಲಾಗಿದೆ.

ಲಷ್ಕರ್-ಎ-ಜಿಹಾದಿ ಎಂದು ಹೇಳಿಕೊಳ್ಳುವ ಸಂಘಟನೆಯು 14 ಪಾಕಿಸ್ತಾನಿ ಭಯೋತ್ಪಾದಕರು ಭಾರತವನ್ನು ಪ್ರವೇಶಿಸಿದ್ದಾರೆ. ಸ್ಫೋಟದಲ್ಲಿ 400 ಕೆಜಿ ಆರ್‍ಡಿಎಕ್ಸ್ ಬಳಸಲಾಗುವುದು ಎಂದು ಬೆದರಿಕೆ ಸಂದೇಶದಲ್ಲಿ ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಮುಂಬೈ ಪೊಲೀಸರು ಜಾಗರೂಕರಾಗಿದ್ದು, ರಾಜ್ಯಾದ್ಯಂತ ಭದ್ರತೆ ಹೆಚ್ಚಿಸಲಾಗಿದೆ. ಬೆದರಿಕೆಯ ಎಲ್ಲಾ ಕೋನಗಳನ್ನು ತನಿಖೆ ಮಾಡಲಾಗುತ್ತಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಚಾ.ನಗರ | ಟೊಮೆಟೊ ದರ ಕುಸಿತ; ರೈತರಿಂದ ಹೆದ್ದಾರಿ ತಡೆ

ಚಾಮರಾಜನಗರ : ಟೊಮೆಟೊ ದರ ಕುಸಿತ ಖಂಡಿಸಿ, ಬೆಲೆ ತಾರತಮ್ಯ ವಿರೋಧಿಸಿ ತಾಲ್ಲೂಕಿನ ಚಿಕ್ಕಹೊಳೆ ಚೆಕ್‌ಪೋಸ್ಟ್ ಬಳಿ ಸಾಮೂಹಿಕ ನಾಯಕತ್ವದ…

4 hours ago

ಪಂಜಾಬ್‌ | ಪಾಕ್‌ ಪೋಷಿತ ಉಗ್ರ ಘಟಕದ ಮೇಲೆ ದಾಳಿ, ಇಬ್ಬರ ಬಂಧನ

ಅಮೃತಸರ : ಪಂಜಾಬ್‌ ಪೊಲೀಸರು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ ಪೋಷಿತ ಭಯೋತ್ಪಾದಕ ಘಟಕವೊಂದನ್ನು ಭೇದಿಸಿ, ಇಬ್ಬರು ಶಂಕಿತರನ್ನು ಬಂಧಿಸಿದ್ದಾರೆ.…

4 hours ago

ಅಮೆರಿಕದೊಂದಿಗೆ ಮಾತುಕತೆ ಇಲ್ಲ, ದೀರ್ಘಕಾಲದ ಯುದ್ಧಕ್ಕೆ ಸಿದ್ಧ ; ಇರಾನ್‌

ಹೊಸದಿಲ್ಲಿ : ಇರಾನ್‌ ನಮ್ಮ ಜೊತೆ ಮಾತುಕತೆಗೆ ಸಿದ್ಧವಿದೆ ಎಂದಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿಕೆಯನ್ನು ತಳ್ಳಿ ಹಾಕಿರುವ…

5 hours ago

ನಂಜನಗೂಡು | ನಾಲೆಯಲ್ಲಿ ನವಜಾತ ಶಿಶು ಪತ್ತೆ

ನಂಜನಗೂಡು : ನವಜಾತ ಶಿಶುವನ್ನು ನಾಲೆಗೆ ಎಸೆದ ದುರಂತ ಘಟನೆ ನಂಜನಗೂಡು ತಾಲ್ಲೂಕಿನ ನಗರ್ಲೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶ್ರೀ…

6 hours ago

ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ : ಮುಖ್ಯಮಂತ್ರಿ

ಬಾಗಲಕೋಟೆ : ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ…

7 hours ago

ಮಹದೇಶ್ವರ ಬೆಟ್ಟ | ದಾಸೋಹ-ಲಾಡು ಪ್ರಸಾದಕ್ಕೆ ಸಿಲಿಂಡರ್ ಕೊರತೆ ಇಲ್ಲ ; ಅಪಪ್ರಚಾರಕ್ಕೆ ಕಿವಿಗೊಡದಿರಿ

ಹನೂರು : ಶ್ರೀಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುವ ದಾಸೋಹ, ಲಾಡು ಪ್ರಸಾದ ತಯಾರಿಸಲು ಯಾವುದೇ ರೀತಿಯ ಸಿಲಿಂಡರ್ ಕೊರತೆಯಾಗಿಲ್ಲ…

8 hours ago