bomb
ಮುಂಬೈ : ವಾಣಿಜ್ಯ ರಾಜಧಾನಿ ಮುಂಬೈ ನಗರವನ್ನೇ ಸಂಪೂರ್ಣವಾಗಿ ಸ್ಫೋಟಿಸಲು 400 ಕೆಜಿ ಆರ್ಡಿಎಕ್ಸ್ ಹೊತ್ತ 34 ಮಾನವ ಬಾಂಬ್ಗಳನ್ನು ವಾಹನದಲ್ಲಿ ಇಡಲಾಗಿದೆ ಎಂದು ಬೆದರಿಕೆ ಕರೆ ಬಂದಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚೆತ್ತುಕೊಂಡಿರುವ ಪೊಲೀಸರು ಇಡೀ ಮುಂಬೈ ನಗರದಲ್ಲಿ ಹೈ ಅಲರ್ಟ್ ಘೋಷಿಸಿದ್ದಾರೆ.
ನಗರಕ್ಕೆ ಬರುವ ಮತ್ತು ಒಳಪ್ರವೇಶ ಮಾಡುವ ವಾಹನಗಳನ್ನು ಬಿಗಿ ತಪಾಸಣೆ ನಡೆಸಲಾಗುತ್ತಿದ್ದು, ಮುಖ್ಯವಾಗಿ ವಿಧಾನಸೌಧ, ರಾಜಭವನ, ಹೈಕೋರ್ಟ್, ಬಂದರು, ವಿಮಾನ ನಿಲ್ದಾಣ ಸೇರಿದಂತೆ ಪ್ರಮುಖ ಸರ್ಕಾರಿ ಕಟ್ಟಡಗಳು, ಖಾಸಗಿ ಕಟ್ಟಡಗಳು, ಐಟಿಬಿಟಿ ಕಚೇರಿ ಮತ್ತಿತರ ಕಡೆ ಭಾರೀ ಭದ್ರತೆಯನ್ನು ಒದಗಿಸಿದ್ದಾರೆ.
ಇಡೀ ನಗರವನ್ನು ಸ್ಫೋಟಿಸಲು 400 ಕೆಜಿ ಆರ್ಡಿಎಕ್ಸ್ ಹೊತ್ತ 34 ಮಾನವ ಬಾಂಬ್ಗಳನ್ನು 34 ವಾಹನಗಳಲ್ಲಿ ಇರಿಸಲಾಗಿದೆ ಎಂದು ಅನಾಮಧೇಯ ವ್ಯಕ್ತಿಯೊಬ್ಬ ಕರೆ ಮಾಡಿ ಬೆದರಿಕೆ ಹಾಕಿರುವುದು ತಲ್ಲಣ ಸೃಷ್ಟಿಸಿದೆ. ಮುಂಬೈನ ಸಂಚಾರ ಪೊಲೀಸರಿಗೆ ಅವರ ಅಧಿಕೃತ ವಾಟ್ಸಾಪ್ ಸಂಖ್ಯೆಯ ಮೂಲಕ ಬೆದರಿಕೆಗಳು ಬಂದಿವೆ. ನಗರದಾದ್ಯಂತ 34 ವಾಹನಗಳಲ್ಲಿ 34 ಮಾನವ ಬಾಂಬ್ಗಳನ್ನು ಇರಿಸಲಾಗಿದೆ ಮತ್ತು ಸ್ಫೋಟವು ಇಡೀ ಮುಂಬೈಯನ್ನು ನಡುಗಿಸುತ್ತದೆ ಎಂದು ಬೆದರಿಕೆಯಲ್ಲಿ ಹೇಳಲಾಗಿದೆ.
ಲಷ್ಕರ್-ಎ-ಜಿಹಾದಿ ಎಂದು ಹೇಳಿಕೊಳ್ಳುವ ಸಂಘಟನೆಯು 14 ಪಾಕಿಸ್ತಾನಿ ಭಯೋತ್ಪಾದಕರು ಭಾರತವನ್ನು ಪ್ರವೇಶಿಸಿದ್ದಾರೆ. ಸ್ಫೋಟದಲ್ಲಿ 400 ಕೆಜಿ ಆರ್ಡಿಎಕ್ಸ್ ಬಳಸಲಾಗುವುದು ಎಂದು ಬೆದರಿಕೆ ಸಂದೇಶದಲ್ಲಿ ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಮುಂಬೈ ಪೊಲೀಸರು ಜಾಗರೂಕರಾಗಿದ್ದು, ರಾಜ್ಯಾದ್ಯಂತ ಭದ್ರತೆ ಹೆಚ್ಚಿಸಲಾಗಿದೆ. ಬೆದರಿಕೆಯ ಎಲ್ಲಾ ಕೋನಗಳನ್ನು ತನಿಖೆ ಮಾಡಲಾಗುತ್ತಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…