ದೇಶ- ವಿದೇಶ

ಪಹಲ್ಗಾಮ್‌ ದಾಳಿಯ ಮೂವರು ಶಂಕಿತ ಉಗ್ರರು ಎನ್‌ಕೌಂಟರ್‌ಗೆ ಬಲಿ

ಶ್ರೀನಗರ: ಪಹಲ್ಗಾಮ್‌ ದಾಳಿಯ ಮೂವರು ಶಂಕಿತ ಉಗ್ರನ್ನು ಭದ್ರತಾ ಪಡೆ ಹಾಗೂ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಹೊಡೆದುರುಳಿಸಲಾಗಿದೆ.

ಜಮ್ಮು-ಕಾಶ್ಮೀರದ ರಾಜಧಾನಿ ಶ್ರೀನಗರದಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ ಕಾರ್ಯಾಚರಣೆಯಲ್ಲಿ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಈ ಮೂವರು ಉಗ್ರರು ಪಹಲ್ಗಾಮ್‌ ದಾಳಿಯಲ್ಲಿ ಭಾಗಿಯಾದವರು ಎಂದು ತಿಳಿದುಬಂದಿದೆ.

ಭಾರತೀಯ ಸೇನೆ, ಜಮ್ಮು-ಕಾಶ್ಮೀರ ಪೊಲೀಸರು, ಸಿಆರ್‌ಪಿಎಫ್‌ ಸೇರಿದಂತೆ ಆಪರೇಷನ್‌ ಮಹಾದೇವ್‌ ಕಾರ್ಯಾಚರಣೆ ನಡೆಸಿದ್ದು, ಮೂವರು ಉಗ್ರರನ್ನು ಸದೆಬಡಿಯಲಾಗಿದೆ. ಕಳೆದ ಏಪ್ರಿಲ್.‌22ರಂದು ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ದಾಳಿ ನಡೆಸಿದ್ದ ಉಗ್ರರು 26 ಪ್ರವಾಸಿಗರನ್ನು ಗುಂಡಿಟ್ಟು ಹತ್ಯೆಗೈದಿದ್ದರು. ಈಗ ಮೂವರು ಉಗ್ರರನ್ನು ಸೇನೆ ಹಾಗೂ ಪೊಲೀಸರು ಸದೆಬಡಿದಿದ್ದು, ಈ ಡ್ರೋನ್‌ನಲ್ಲಿ ಸೆರೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಆಂದೋಲನ ಡೆಸ್ಕ್

Recent Posts

ಮೈಸೂರು ದಸರಾ | ಯುವ ಸಂಭ್ರಮ ಉದ್ಘಾಟನೆಗೆ ವಿಜಯಪ್ರಕಾಶ್‌

ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…

11 hours ago

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

16 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

20 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

20 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

20 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

23 hours ago