ನವದೆಹಲಿ: ಭಾರತದಾದ್ಯಂತ ಇಂದು 25ನೇ ಕಾರ್ಗಿಲ್ ವಿಜಯದಿವಸ್ ಆಚರಣೆ ಮಾಡಲಾಗುತ್ತಿದ್ದು, 25ನೇ ಕಾರ್ಗಿಲ್ ವಿಜಯ್ ದಿವಸದಂದು ಕಾರ್ಗಿಲ್ಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಗೌರವ ಸಲ್ಲಿಸಿದರು.
ಬಳಿಕ ಕಾರ್ಗಿಲ್ ವಿಜಯ ದಿವಸ್ ಕುರಿತು ಮಾತನಾಡಿದ ಮೋದಿ, ನಾವು ಕೇವಲ ಯುದ್ಧ ಗೆದ್ದಿಲ್ಲ, ಸತ್ಯ, ಸಂಯಮ, ಹಾಗೂ ಸಾಮರ್ಥ್ಯದ ಅದ್ಭುತ ಪರಿಚಯವನ್ನು ವಿರೋಧಿಗಳಿಗೆ ಮಾಡಿಕೊಟ್ಟಿದ್ದೇವೆ. ಪಾಕಿಸ್ತಾನ ನಮ್ಮಿಂದ ಎಷ್ಟೇ ಪೆಟ್ಟು ತಿಂದಿದ್ದರೂ ಇನ್ನೂ ಬುದ್ಧಿ ಕಲಿತಿಲ್ಲ ಎಂದು ಹೇಳಿದರು.
ಇದೇ ಆಗಸ್ಟ್ 5 ರಂದು 370 ನೇ ವಿಧಿಯನ್ನು ರದ್ದುಪಡಿಸಿ ಐದು ವರ್ಷಗಳಾಗುತ್ತವೆ ಎಂದು ಪ್ರಧಾನಿ ಮೋದಿ ಇದೇ ವೇಳೆ ಸ್ಮರಿಸಿದರು. ಇಂದು ಕಾಶ್ಮೀರ ದೊಡ್ಡ ಕನಸುಗಳ ಬಗ್ಗೆ ಮಾತನಾಡುತ್ತಿದೆ. ಜಿ 20ರ ಮಹತ್ವದ ಸಭೆಯನ್ನು ಆಯೋಜಿಸಲು ಜಮ್ಮು ಮತ್ತು ಕಾಶ್ಮೀರವನ್ನು ಗುರುತಿಸಲಾಗಿದೆ. ಜಮ್ಮು ಕಾಶ್ಮೀರ ಲಡಾಖ್ನಲ್ಲಿ ಪ್ರವಾಸೋದ್ಯಮ ಕ್ಷೇತ್ರ ಬೆಳೆಯುತ್ತಿದೆ. ದಶಕಗಳ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ಸಿನಿಮಾ ತೆರೆಕಂಡು ತಜಿಯಾ ತೆರೆಗೆ ಬಂದಿದೆ. ಇಂದು ಲಡಾಖ್ನಲ್ಲಿಯೂ ಅಭಿವೃದ್ಧಿಯ ಹೊಸ ಹೊಳೆ ಸೃಷ್ಟಿಯಾಗಿದೆ ಎಂದು ಹೇಳಿದರು.
ಶಿಂಗು ಲಾ ಸುರಂಗವು ಲಡಾಖ್ನಲ್ಲಿ ಅಭಿವೃದ್ಧಿ ಮತ್ತು ಉತ್ತಮ ಭವಿಷ್ಯಕ್ಕಾಗಿ ಹೊಸ ಮಾರ್ಗವನ್ನು ತೆರೆಯುತ್ತದೆ. ಲಡಾಖ್ನ ಜನರು ಕಠಿಣ ಹವಾಮಾನದಿಂದಾಗಿ ಹಲವಾರು ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಕೊರೊನಾ ಸಮಯದಲ್ಲಿ, ಕಾರ್ಗಿಲ್ ಪ್ರದೇಶದ ನಮ್ಮ ಅನೇಕ ಜನರು ಇರಾನ್ನಲ್ಲಿ ಸಿಲುಕಿಕೊಂಡಿದ್ದರು, ಅವರನ್ನು ಮರಳಿ ಕರೆತರಲು ನಾನು ವೈಯಕ್ತಿಕ ಮಟ್ಟದಲ್ಲಿ ಸಾಕಷ್ಟು ಪ್ರಯತ್ನಗಳನ್ನು ಮಾಡಿದ್ದೇನೆ ಎಂದು ನನಗೆ ನೆನಪಿದೆ. ಅವರನ್ನು ಇರಾನ್ನಿಂದ ಕರೆತಂದು ಜೈಸಲ್ಮೇರ್ನಲ್ಲಿ ಇರಿಸಲಾಗಿದ್ದು, ಆರೋಗ್ಯದ ದೃಷ್ಟಿಯಿಂದ ಸಂಪೂರ್ಣ ತೃಪ್ತಿದಾಯಕ ವರದಿಗಳು ಬಂದ ನಂತರ ಅವರನ್ನು ಅವರ ಮನೆಗೆ ಕರೆದೊಯ್ಯಲಾಯಿತು ಎಂದು ನೆನೆದರು.
ಕಳೆದ 5 ವರ್ಷಗಳಲ್ಲಿ, ನಾವು ಲಡಾಖ್ನ ಬಜೆಟ್ ಅನ್ನು 1100 ಕೋಟಿಯಿಂದ 6 ಸಾವಿರ ಕೋಟಿಗೆ ಹೆಚ್ಚಿಸಿದ್ದೇವೆ. ಅಂದರೆ ಸುಮಾರು 6 ಪಟ್ಟು ಹೆಚ್ಚಳವಾಗಿದೆ. ಈ ಹಣವನ್ನು ಲಡಾಖ್ನ ಜನರ ಅಭಿವೃದ್ಧಿಗೆ ಬಳಸಲಾಗುತ್ತಿದೆ, ಇಲ್ಲಿ ಸೌಲಭ್ಯಗಳನ್ನು ಹೆಚ್ಚಿಸುವಲ್ಲಿ, ರಸ್ತೆಗಳು, ವಿದ್ಯುತ್, ನೀರು, ಶಿಕ್ಷಣ, ವಿದ್ಯುತ್ ಪೂರೈಕೆ, ಉದ್ಯೋಗ ಲಡಾಖ್ನ ಪ್ರತಿಯೊಂದು ದಿಕ್ಕಿನಲ್ಲೂ ದೃಶ್ಯ ಮತ್ತು ಸನ್ನಿವೇಶವು ಬದಲಾಗುತ್ತಿದೆ ಎಂದು ಪ್ರಧಾನಿ ಮೋದಿ ತಿಳಿಸಿದರು.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…