ದೇಶ- ವಿದೇಶ

ಅಕ್ರಮ ವಲಸಿಗರ ಬಗ್ಗೆ ಮೃದು ಧೋರಣೆ ವಹಿಸುವ ಸಮಯ ಮುಗಿದಿದೆ: ಡೊನಾಲ್ಡ್‌ ಟ್ರಂಪ್‌

ವಾಷಿಂಗ್ಟನ್: ಅಕ್ರಮ ವಲಸಿಗರ ಬಗ್ಗೆ ಮೃದು ಧೋರಣೆ ವಹಿಸುವ ಸಮಯ ನನ್ನ ಆಡಳಿತದಲ್ಲಿ ಮುಗಿದಿದೆ. ಈ ಹತ್ಯೆಯನ್ನು ನಾನು ಖಂಡಿಸುತ್ತೇನೆ ಎಂದು ಪತ್ನಿ ಮತ್ತು ಮಗನ ಎದುರೇ ವಲಸಿಗನಿಂದ ಶಿರಚ್ಚೇದನಕ್ಕೊಳಗಾದ ಕರ್ನಾಟಕ ಮೂಲದ ಚಂದ್ರ ನಾಗ ಮಲ್ಲಯ್ಯ ಅವರ ಹತ್ಯೆಗೆ ಸಂಬಂಧಪಟ್ಟಂತೆ ಆರೋಪಿ ವಿರುದ್ಧ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗುಡುಗಿದ್ದಾರೆ.

ಈ ಅಪರಾಧಿ ನಮ್ಮ ದೇಶದಲ್ಲಿ ಇರಬಾರದಿತ್ತು. ನನ್ನ ಆಡಳಿತದಲ್ಲಿ ಅಕ್ರಮ ವಲಸೆ ಅಪರಾಧಿಗಳ ಬಗ್ಗೆ ಮೃದುವಾಗಿ ವರ್ತಿಸುವ ಸಮಯ ಮುಗಿದಿದೆ.ಅಮೆರಿಕವನ್ನು ಮತ್ತೆ ಸುರಕ್ಷಿತವನ್ನಾಗಿ ಮಾಡುವ ಪ್ರತಿಜ್ಞೆ ಮಾಡಿರುವ ಡೊನಾಲ್ಡ್ ಟ್ರಂಪ್, ತಮ್ಮ ಆಡಳಿತದಲ್ಲಿ ಅಕ್ರಮ ವಲಸಿಗ ಅಪರಾಧಿಗಳ ಬಗ್ಗೆ ಮೃದುವಾಗಿರುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: Asia cup | ಭಾರತಕ್ಕೆ ಸುಲಭ ಜಯ : ಪಾಕಿಸ್ತಾನಕ್ಕೆ ಮುಖಭಂಗ

ಈ ಕುರಿತು ತಮ್ಮ ಟ್ರೋತ್ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿರುವ ಟ್ರಂಪ್, ಚಂದ್ರ ನಾಗಮಲ್ಲಯ್ಯ ಅವರನ್ನು ಕ್ಯೂಬಾದ ವಲಸಿಗರೊಬ್ಬರು ಬರ್ಬರವಾಗಿ ಶಿರಚ್ಛೇದನ ಮಾಡಿದ್ದಾರೆ. ಈ ವ್ಯಕ್ತಿ ನಮ್ಮ ದೇಶದಲ್ಲಿ ಎಂದಿಗೂ ಇರಬಾರದಿತ್ತು . ಆರೋಪಿ ವಿರುದ್ಧ ಕಾನೂನು ಪ್ರಕಾರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಟೆಕ್ಸಾಸ್ ನ ಡಲ್ಲಾಸ್‌ನಲ್ಲಿ ಗೌರವಾನ್ವಿತ ವ್ಯಕ್ತಿಯಾಗಿದ್ದ ಚಂದ್ರ ನಾಗಮಲ್ಲಯ್ಯ ಅವರನ್ನು ಪತ್ನಿ ಮತ್ತು ಮುಂದೆಯೇ ಕ್ರೂರವಾಗಿ ಶಿರಚ್ಛೇದ ಮಾಡಿ ಕೊಲೆ ಮಾಡಿದ ಘಟನೆಯ ಭಯಾನಕ ವರದಿಗಳು ನನಗೆ ತಿಳಿದಿವೆ. ಆರೋಪಿಯನ್ನು ಈ ಹಿಂದೆ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಸೇರಿದಂತೆ ಭಯಾನಕ ಕ್ರಿಮಿನಲ್ ಕೇಸ್‌ಗಳ ಆರೋಪಗಳ ಹಿನ್ನೆಲೆಯಲ್ಲಿ ಬಂಧಿಸಲಾಗಿತ್ತು. ಆದರೆ, ಕ್ಯೂಬಾ ಅಂತಹ ದುಷ್ಟರನ್ನು ತಮ್ಮ ದೇಶಕ್ಕೆ ಬಯಸಲಿಲ್ಲ ಎಂದು ಅಸಮರ್ಥ ಜೋ ಬೈಡನ್ ನೇತೃತ್ವದಲ್ಲಿ ಆರೋಪಿ ನಮ್ಮ ತಾಯ್ನಾಡಿಗೆ ಮರಳಿದರು ಎಂದು ತಿಳಿಸಿದ್ದಾರೆ.

ಭಾರತೀಯ ಮೂಲಕ ವ್ಯಕ್ತಿ ಚಂದ್ರ ನಾಗಮಲ್ಲಯ್ಯ ಕೊಲೆಯ ಆರೋಪಿಯಾದ ಕ್ಯೂಬಾದ ಅಕ್ರಮ ವಲಸಿ ಯೋರ್ಡಾನಿಸ್ ಕೊಬೋಸ್-ಮಾರ್ಟಿನೆಜ್(37) ವಿರುದ್ಧ ಪ್ರಥಮ ದರ್ಜೆಯ ಕೊಲೆ ಆರೋಪ ಹೊರಿಸಿ, ಕಾನೂನಿನ ಪೂರ್ಣ ಪ್ರಮಾಣದಲ್ಲಿ ವಿಚಾರಣೆ ನಡೆಸುವುದಾಗಿ ಟ್ರಂಪ್? ಘೋಷಿಸಿದ್ದಾರೆ. ಈ ಘಟನೆಯು ಅಮೆರಿಕದ ಅಕ್ರಮ ವಲಸೆ ನೀತಿಯ ಬಗ್ಗೆ ರಾಷ್ಟ್ರೀಯ ಚರ್ಚೆಯನ್ನು ಉಂಟುಮಾಡಿದ್ದು, ಭಾರತೀಯ-ಅಮೆರಿಕನ್ ಸಮುದಾಯದಲ್ಲಿ ಆಘಾತವನ್ನುಂಟುಮಾಡಿದೆ.

ವರದಿ ಪ್ರಕಾರ 50 ವರ್ಷದ ಚಂದ್ರ ನಾಗಮಲ್ಲಯ್ಯ (ಬಾಬ್) ಅವರನ್ನು ಸೆಪ್ಟೆಂಬರ್ 10ರಂದು ಡಲ್ಲಾಸ್‍ನ ಡೌನ್‍ಟೌನ್ ಸೂಟ್ಸ್ ಮೋಟೆಲ್‍ನಲ್ಲಿ ಕೊಬೋಸ್-ಮಾರ್ಟಿನೆಜ್ ಚಾಕು ದಾಳಿ ಮಾಡಿ ಶಿರಚ್ಛೇದನ ಮಾಡಿ ಕೊಂದಿದ್ದಾರೆ. ಈ ದಾಳಿಯನ್ನು ಅವರ ಪತ್ನಿ ನಿಶಾ ಮತ್ತು ಮಗ ಗೌರವ್ ಕಣ್ಣಾರೆ ನೋಡಿದ್ದಾರೆ. ದಾಳಿಯು ಒಂದು ವಾಷಿಂಗ್ ಮೆಷಿನ್ ಮುರಿದ ವಿವಾದದಿಂದ ಆರಂಭವಾಗಿತ್ತು. ಆರೋಪಿ ಕ್ಯೂಬಾದ ಅಕ್ರಮ ವಲಸಿಯಾಗಿದ್ದು, ಇದ್ದಕ್ಕಿದ್ದಂತೆ ಕೊಲೆ ಮಾಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮಂಡ್ಯ | ಕಬ್ಬಿನ ಗದ್ದೆಯಲ್ಲಿ ಮೂರು ಚಿರತೆ ಮರಿಗಳು ಪತ್ತೆ

ಮಂಡ್ಯ : ತಾಲೂಕಿನ ಸೂನಗಹಳ್ಳಿ-ಬೂತನಹೊಸೂರು ನಡುವಿನ ಹೆಬ್ಬಾಳ ಕಟ್ಟೆ ಬಳಿ ಕಬ್ಬಿನ ಗದ್ದೆಯಲ್ಲಿ ಬುಧವಾರ ಮೂರು ಚಿರತೆ ಮರಿಗಳು ಪತ್ತೆಯಾಗಿವೆ.…

5 hours ago

ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ದಾಳಿ : ಇರಾನಿನ ಕ್ಷಿಪಣಿ ತಾಣ ನಾಶ

ಟೆಹ್ರಾನ್ : ಇರಾನ್ ಹಿಡಿತದಲ್ಲಿದ್ದ ಜಗತ್ತಿನ ಪ್ರಮುಖ ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ತೀವ್ರ ದಾಳಿ ನಡೆಸಿದೆ. ಜಲಮಾರ್ಗದ ಬಳಿಕ…

6 hours ago

ಮರ್ಯಾದಾ ಹತ್ಯೆ ನಿಷೇಧ ಮಸೂದೆ ಮಂಡನೆ

ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ…

8 hours ago

ಮೈಸೂರು ನಗರದಲ್ಲಿ ಮಳೆ ; ತಂಪಾದ ಇಳೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…

8 hours ago

ಯುಗಾದಿ ಸಂಭ್ರಮ : ಮೈಸೂರಲ್ಲಿ ಖರೀದಿ ಜೋರು

ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ…

10 hours ago

ನಾಳೆ ಧುರಂಧರ್-2 ಬಿಡುಗಡೆ : ಎಲ್ಲಾ ದಾಖಲೆ ಮುರಿಯುವ ನಿರೀಕ್ಷೆ

ಮುಂಬೈ : ಆದಿತ್ಯ ಧರ್‌ ನಿರ್ದೇಶನದ, ರಣವೀರ್‌ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.‌19) ಬಿಡುಗಡೆಯಾಗಲಿದೆ. ಕಳೆದ ವರ್ಷ…

10 hours ago