ದೇಶ- ವಿದೇಶ

ಅಕ್ರಮ ವಲಸಿಗರ ಬಗ್ಗೆ ಮೃದು ಧೋರಣೆ ವಹಿಸುವ ಸಮಯ ಮುಗಿದಿದೆ: ಡೊನಾಲ್ಡ್‌ ಟ್ರಂಪ್‌

ವಾಷಿಂಗ್ಟನ್: ಅಕ್ರಮ ವಲಸಿಗರ ಬಗ್ಗೆ ಮೃದು ಧೋರಣೆ ವಹಿಸುವ ಸಮಯ ನನ್ನ ಆಡಳಿತದಲ್ಲಿ ಮುಗಿದಿದೆ. ಈ ಹತ್ಯೆಯನ್ನು ನಾನು ಖಂಡಿಸುತ್ತೇನೆ ಎಂದು ಪತ್ನಿ ಮತ್ತು ಮಗನ ಎದುರೇ ವಲಸಿಗನಿಂದ ಶಿರಚ್ಚೇದನಕ್ಕೊಳಗಾದ ಕರ್ನಾಟಕ ಮೂಲದ ಚಂದ್ರ ನಾಗ ಮಲ್ಲಯ್ಯ ಅವರ ಹತ್ಯೆಗೆ ಸಂಬಂಧಪಟ್ಟಂತೆ ಆರೋಪಿ ವಿರುದ್ಧ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗುಡುಗಿದ್ದಾರೆ.

ಈ ಅಪರಾಧಿ ನಮ್ಮ ದೇಶದಲ್ಲಿ ಇರಬಾರದಿತ್ತು. ನನ್ನ ಆಡಳಿತದಲ್ಲಿ ಅಕ್ರಮ ವಲಸೆ ಅಪರಾಧಿಗಳ ಬಗ್ಗೆ ಮೃದುವಾಗಿ ವರ್ತಿಸುವ ಸಮಯ ಮುಗಿದಿದೆ.ಅಮೆರಿಕವನ್ನು ಮತ್ತೆ ಸುರಕ್ಷಿತವನ್ನಾಗಿ ಮಾಡುವ ಪ್ರತಿಜ್ಞೆ ಮಾಡಿರುವ ಡೊನಾಲ್ಡ್ ಟ್ರಂಪ್, ತಮ್ಮ ಆಡಳಿತದಲ್ಲಿ ಅಕ್ರಮ ವಲಸಿಗ ಅಪರಾಧಿಗಳ ಬಗ್ಗೆ ಮೃದುವಾಗಿರುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: Asia cup | ಭಾರತಕ್ಕೆ ಸುಲಭ ಜಯ : ಪಾಕಿಸ್ತಾನಕ್ಕೆ ಮುಖಭಂಗ

ಈ ಕುರಿತು ತಮ್ಮ ಟ್ರೋತ್ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿರುವ ಟ್ರಂಪ್, ಚಂದ್ರ ನಾಗಮಲ್ಲಯ್ಯ ಅವರನ್ನು ಕ್ಯೂಬಾದ ವಲಸಿಗರೊಬ್ಬರು ಬರ್ಬರವಾಗಿ ಶಿರಚ್ಛೇದನ ಮಾಡಿದ್ದಾರೆ. ಈ ವ್ಯಕ್ತಿ ನಮ್ಮ ದೇಶದಲ್ಲಿ ಎಂದಿಗೂ ಇರಬಾರದಿತ್ತು . ಆರೋಪಿ ವಿರುದ್ಧ ಕಾನೂನು ಪ್ರಕಾರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಟೆಕ್ಸಾಸ್ ನ ಡಲ್ಲಾಸ್‌ನಲ್ಲಿ ಗೌರವಾನ್ವಿತ ವ್ಯಕ್ತಿಯಾಗಿದ್ದ ಚಂದ್ರ ನಾಗಮಲ್ಲಯ್ಯ ಅವರನ್ನು ಪತ್ನಿ ಮತ್ತು ಮುಂದೆಯೇ ಕ್ರೂರವಾಗಿ ಶಿರಚ್ಛೇದ ಮಾಡಿ ಕೊಲೆ ಮಾಡಿದ ಘಟನೆಯ ಭಯಾನಕ ವರದಿಗಳು ನನಗೆ ತಿಳಿದಿವೆ. ಆರೋಪಿಯನ್ನು ಈ ಹಿಂದೆ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಸೇರಿದಂತೆ ಭಯಾನಕ ಕ್ರಿಮಿನಲ್ ಕೇಸ್‌ಗಳ ಆರೋಪಗಳ ಹಿನ್ನೆಲೆಯಲ್ಲಿ ಬಂಧಿಸಲಾಗಿತ್ತು. ಆದರೆ, ಕ್ಯೂಬಾ ಅಂತಹ ದುಷ್ಟರನ್ನು ತಮ್ಮ ದೇಶಕ್ಕೆ ಬಯಸಲಿಲ್ಲ ಎಂದು ಅಸಮರ್ಥ ಜೋ ಬೈಡನ್ ನೇತೃತ್ವದಲ್ಲಿ ಆರೋಪಿ ನಮ್ಮ ತಾಯ್ನಾಡಿಗೆ ಮರಳಿದರು ಎಂದು ತಿಳಿಸಿದ್ದಾರೆ.

ಭಾರತೀಯ ಮೂಲಕ ವ್ಯಕ್ತಿ ಚಂದ್ರ ನಾಗಮಲ್ಲಯ್ಯ ಕೊಲೆಯ ಆರೋಪಿಯಾದ ಕ್ಯೂಬಾದ ಅಕ್ರಮ ವಲಸಿ ಯೋರ್ಡಾನಿಸ್ ಕೊಬೋಸ್-ಮಾರ್ಟಿನೆಜ್(37) ವಿರುದ್ಧ ಪ್ರಥಮ ದರ್ಜೆಯ ಕೊಲೆ ಆರೋಪ ಹೊರಿಸಿ, ಕಾನೂನಿನ ಪೂರ್ಣ ಪ್ರಮಾಣದಲ್ಲಿ ವಿಚಾರಣೆ ನಡೆಸುವುದಾಗಿ ಟ್ರಂಪ್? ಘೋಷಿಸಿದ್ದಾರೆ. ಈ ಘಟನೆಯು ಅಮೆರಿಕದ ಅಕ್ರಮ ವಲಸೆ ನೀತಿಯ ಬಗ್ಗೆ ರಾಷ್ಟ್ರೀಯ ಚರ್ಚೆಯನ್ನು ಉಂಟುಮಾಡಿದ್ದು, ಭಾರತೀಯ-ಅಮೆರಿಕನ್ ಸಮುದಾಯದಲ್ಲಿ ಆಘಾತವನ್ನುಂಟುಮಾಡಿದೆ.

ವರದಿ ಪ್ರಕಾರ 50 ವರ್ಷದ ಚಂದ್ರ ನಾಗಮಲ್ಲಯ್ಯ (ಬಾಬ್) ಅವರನ್ನು ಸೆಪ್ಟೆಂಬರ್ 10ರಂದು ಡಲ್ಲಾಸ್‍ನ ಡೌನ್‍ಟೌನ್ ಸೂಟ್ಸ್ ಮೋಟೆಲ್‍ನಲ್ಲಿ ಕೊಬೋಸ್-ಮಾರ್ಟಿನೆಜ್ ಚಾಕು ದಾಳಿ ಮಾಡಿ ಶಿರಚ್ಛೇದನ ಮಾಡಿ ಕೊಂದಿದ್ದಾರೆ. ಈ ದಾಳಿಯನ್ನು ಅವರ ಪತ್ನಿ ನಿಶಾ ಮತ್ತು ಮಗ ಗೌರವ್ ಕಣ್ಣಾರೆ ನೋಡಿದ್ದಾರೆ. ದಾಳಿಯು ಒಂದು ವಾಷಿಂಗ್ ಮೆಷಿನ್ ಮುರಿದ ವಿವಾದದಿಂದ ಆರಂಭವಾಗಿತ್ತು. ಆರೋಪಿ ಕ್ಯೂಬಾದ ಅಕ್ರಮ ವಲಸಿಯಾಗಿದ್ದು, ಇದ್ದಕ್ಕಿದ್ದಂತೆ ಕೊಲೆ ಮಾಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಕಣಿವೆಗೆ ಉರುಳಿದ ಸೇನಾ ವಾಹನ : 10 ಸೈನಿಕರ ಸಾವು

11 ಯೋಧರಿಗೆ ಗಂಭೀರ ಗಾಯ ಭದೇರ್ವಾ : ದೋಡಾ ಜಿಲ್ಲೆಯ ಥನಾಲಾದ ಮೇಲ್ಭಾಗದ ಪ್ರದೇಶದಲ್ಲಿನ ಭದೇರ್ವಾ-ಚಂಬಾ ರಸ್ತೆಯಲ್ಲಿ ಗುರುವಾರ ಸೇನಾ…

13 mins ago

‘ಬಿಗ್ ಬಾಸ್’ ಗಿಲ್ಲಿಗೆ ಸಿಎಂ ಅಭಿನಂದನೆ!

ಬೆಂಗಳೂರು : ಬಿಗ್ ಬಾಸ್ ಮುಗಿದ ಮೇಲೂ ಗಿಲ್ಲಿ ನಟನ ಕ್ರೇಜ್ ಕಮ್ಮಿಯಾಗಿಲ್ಲ. ಹೋದ ಕಡೆ, ಬಂದಕಡೆ ಅಭಿಮಾನಿಗಳು ಮುತ್ತಿಕೊಳ್ಳುತ್ತಿದ್ದು,…

19 mins ago

ಬೆಳ್ಳಿ ಬರೋಬ್ಬರಿ 20 ಸಾವಿರ ರೂ.ಇಳಿಕೆ : ಚಿನ್ನದ ದರದಲ್ಲೂ ದಿಢೀರ್ 4 ಸಾವಿರ ರೂ ಕುಸಿತ

ಹೈದರಾಬಾದ್ : ಕಳೆದ ಕೆಲವು ದಿನಗಳಿಂದ ದಾಖಲೆಯ ಗರಿಷ್ಠ ಮಟ್ಟವನ್ನು ತಲುಪುತ್ತಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಗುರುವಾರ ಇದ್ದಕ್ಕಿದ್ದಂತೆ…

30 mins ago

ಟಿವಿಕೆ ವಿಜಯ್ ಪಕ್ಷಕ್ಕೆ ಸೀಟಿ ಗುರುತು ನೀಡಿದ ಆಯೋಗ

ಚೆನ್ನೈ : ನಟ, ರಾಜಕಾರಣಿ ವಿಜಯ್ ಅವರ ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಪಕ್ಷಕ್ಕೆ ಚುನಾವಣಾ ಆಯೋಗವು ಗುರುವಾರ ಚಿಹ್ನೆ…

1 hour ago

ಮ.ಬೆಟ್ಟ | ಡ್ರೋನ್‌ ಕ್ಯಾಮೆರಾದಲ್ಲಿ ಸೆರೆಯಾದ ಚಿರತೆ ದೃಶ್ಯ

ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ತಾಳು ಬೆಟ್ಟದಿಂದ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…

1 hour ago

MGNREGA ಕಾಯ್ದೆಯನ್ನು ಮರುಸ್ಥಾಪಿಸುವವರೆಗೆ ನಮ್ಮ ಹೋರಾಟ ಇರಲಿದೆ : ಸಿಎಂ

ಬೆಂಗಳೂರು : ಮೊದಲ ವರ್ಷದ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು ಸಚಿವ ಸಂಪುಟ ಸಿದ್ಧಪಡಿಸಿದ ಭಾಷಣವನ್ನು ಓದದೇ, ಸಂವಿಧಾನದ ವಿಧಿಗಳನ್ನು ಉಲ್ಲಂಘನೆ…

2 hours ago