ದೇಶ- ವಿದೇಶ

ಅಕ್ರಮ ವಲಸಿಗರ ಬಗ್ಗೆ ಮೃದು ಧೋರಣೆ ವಹಿಸುವ ಸಮಯ ಮುಗಿದಿದೆ: ಡೊನಾಲ್ಡ್‌ ಟ್ರಂಪ್‌

ವಾಷಿಂಗ್ಟನ್: ಅಕ್ರಮ ವಲಸಿಗರ ಬಗ್ಗೆ ಮೃದು ಧೋರಣೆ ವಹಿಸುವ ಸಮಯ ನನ್ನ ಆಡಳಿತದಲ್ಲಿ ಮುಗಿದಿದೆ. ಈ ಹತ್ಯೆಯನ್ನು ನಾನು ಖಂಡಿಸುತ್ತೇನೆ ಎಂದು ಪತ್ನಿ ಮತ್ತು ಮಗನ ಎದುರೇ ವಲಸಿಗನಿಂದ ಶಿರಚ್ಚೇದನಕ್ಕೊಳಗಾದ ಕರ್ನಾಟಕ ಮೂಲದ ಚಂದ್ರ ನಾಗ ಮಲ್ಲಯ್ಯ ಅವರ ಹತ್ಯೆಗೆ ಸಂಬಂಧಪಟ್ಟಂತೆ ಆರೋಪಿ ವಿರುದ್ಧ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗುಡುಗಿದ್ದಾರೆ.

ಈ ಅಪರಾಧಿ ನಮ್ಮ ದೇಶದಲ್ಲಿ ಇರಬಾರದಿತ್ತು. ನನ್ನ ಆಡಳಿತದಲ್ಲಿ ಅಕ್ರಮ ವಲಸೆ ಅಪರಾಧಿಗಳ ಬಗ್ಗೆ ಮೃದುವಾಗಿ ವರ್ತಿಸುವ ಸಮಯ ಮುಗಿದಿದೆ.ಅಮೆರಿಕವನ್ನು ಮತ್ತೆ ಸುರಕ್ಷಿತವನ್ನಾಗಿ ಮಾಡುವ ಪ್ರತಿಜ್ಞೆ ಮಾಡಿರುವ ಡೊನಾಲ್ಡ್ ಟ್ರಂಪ್, ತಮ್ಮ ಆಡಳಿತದಲ್ಲಿ ಅಕ್ರಮ ವಲಸಿಗ ಅಪರಾಧಿಗಳ ಬಗ್ಗೆ ಮೃದುವಾಗಿರುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: Asia cup | ಭಾರತಕ್ಕೆ ಸುಲಭ ಜಯ : ಪಾಕಿಸ್ತಾನಕ್ಕೆ ಮುಖಭಂಗ

ಈ ಕುರಿತು ತಮ್ಮ ಟ್ರೋತ್ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿರುವ ಟ್ರಂಪ್, ಚಂದ್ರ ನಾಗಮಲ್ಲಯ್ಯ ಅವರನ್ನು ಕ್ಯೂಬಾದ ವಲಸಿಗರೊಬ್ಬರು ಬರ್ಬರವಾಗಿ ಶಿರಚ್ಛೇದನ ಮಾಡಿದ್ದಾರೆ. ಈ ವ್ಯಕ್ತಿ ನಮ್ಮ ದೇಶದಲ್ಲಿ ಎಂದಿಗೂ ಇರಬಾರದಿತ್ತು . ಆರೋಪಿ ವಿರುದ್ಧ ಕಾನೂನು ಪ್ರಕಾರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಟೆಕ್ಸಾಸ್ ನ ಡಲ್ಲಾಸ್‌ನಲ್ಲಿ ಗೌರವಾನ್ವಿತ ವ್ಯಕ್ತಿಯಾಗಿದ್ದ ಚಂದ್ರ ನಾಗಮಲ್ಲಯ್ಯ ಅವರನ್ನು ಪತ್ನಿ ಮತ್ತು ಮುಂದೆಯೇ ಕ್ರೂರವಾಗಿ ಶಿರಚ್ಛೇದ ಮಾಡಿ ಕೊಲೆ ಮಾಡಿದ ಘಟನೆಯ ಭಯಾನಕ ವರದಿಗಳು ನನಗೆ ತಿಳಿದಿವೆ. ಆರೋಪಿಯನ್ನು ಈ ಹಿಂದೆ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಸೇರಿದಂತೆ ಭಯಾನಕ ಕ್ರಿಮಿನಲ್ ಕೇಸ್‌ಗಳ ಆರೋಪಗಳ ಹಿನ್ನೆಲೆಯಲ್ಲಿ ಬಂಧಿಸಲಾಗಿತ್ತು. ಆದರೆ, ಕ್ಯೂಬಾ ಅಂತಹ ದುಷ್ಟರನ್ನು ತಮ್ಮ ದೇಶಕ್ಕೆ ಬಯಸಲಿಲ್ಲ ಎಂದು ಅಸಮರ್ಥ ಜೋ ಬೈಡನ್ ನೇತೃತ್ವದಲ್ಲಿ ಆರೋಪಿ ನಮ್ಮ ತಾಯ್ನಾಡಿಗೆ ಮರಳಿದರು ಎಂದು ತಿಳಿಸಿದ್ದಾರೆ.

ಭಾರತೀಯ ಮೂಲಕ ವ್ಯಕ್ತಿ ಚಂದ್ರ ನಾಗಮಲ್ಲಯ್ಯ ಕೊಲೆಯ ಆರೋಪಿಯಾದ ಕ್ಯೂಬಾದ ಅಕ್ರಮ ವಲಸಿ ಯೋರ್ಡಾನಿಸ್ ಕೊಬೋಸ್-ಮಾರ್ಟಿನೆಜ್(37) ವಿರುದ್ಧ ಪ್ರಥಮ ದರ್ಜೆಯ ಕೊಲೆ ಆರೋಪ ಹೊರಿಸಿ, ಕಾನೂನಿನ ಪೂರ್ಣ ಪ್ರಮಾಣದಲ್ಲಿ ವಿಚಾರಣೆ ನಡೆಸುವುದಾಗಿ ಟ್ರಂಪ್? ಘೋಷಿಸಿದ್ದಾರೆ. ಈ ಘಟನೆಯು ಅಮೆರಿಕದ ಅಕ್ರಮ ವಲಸೆ ನೀತಿಯ ಬಗ್ಗೆ ರಾಷ್ಟ್ರೀಯ ಚರ್ಚೆಯನ್ನು ಉಂಟುಮಾಡಿದ್ದು, ಭಾರತೀಯ-ಅಮೆರಿಕನ್ ಸಮುದಾಯದಲ್ಲಿ ಆಘಾತವನ್ನುಂಟುಮಾಡಿದೆ.

ವರದಿ ಪ್ರಕಾರ 50 ವರ್ಷದ ಚಂದ್ರ ನಾಗಮಲ್ಲಯ್ಯ (ಬಾಬ್) ಅವರನ್ನು ಸೆಪ್ಟೆಂಬರ್ 10ರಂದು ಡಲ್ಲಾಸ್‍ನ ಡೌನ್‍ಟೌನ್ ಸೂಟ್ಸ್ ಮೋಟೆಲ್‍ನಲ್ಲಿ ಕೊಬೋಸ್-ಮಾರ್ಟಿನೆಜ್ ಚಾಕು ದಾಳಿ ಮಾಡಿ ಶಿರಚ್ಛೇದನ ಮಾಡಿ ಕೊಂದಿದ್ದಾರೆ. ಈ ದಾಳಿಯನ್ನು ಅವರ ಪತ್ನಿ ನಿಶಾ ಮತ್ತು ಮಗ ಗೌರವ್ ಕಣ್ಣಾರೆ ನೋಡಿದ್ದಾರೆ. ದಾಳಿಯು ಒಂದು ವಾಷಿಂಗ್ ಮೆಷಿನ್ ಮುರಿದ ವಿವಾದದಿಂದ ಆರಂಭವಾಗಿತ್ತು. ಆರೋಪಿ ಕ್ಯೂಬಾದ ಅಕ್ರಮ ವಲಸಿಯಾಗಿದ್ದು, ಇದ್ದಕ್ಕಿದ್ದಂತೆ ಕೊಲೆ ಮಾಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಬೆಂಗಳೂರು : ನೈರುತ್ಯ ರೈಲ್ವೆ ಪರೀಕ್ಷೆಯಲ್ಲಿ ಕನ್ನಡ ಭಾಷೆಯನ್ನು ಮತ್ತೆ ಕಡೆಗಣಿಸಲಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ…

53 mins ago

ಚುನಾವಣಾ ರಾಜಕಾರಣಕ್ಕೆ ಎಚ್.ವಿಶ್ವನಾಥ್‌ ವಿದಾಯ

ಮೈಸೂರು : 50 ಕೋಟಿ ಖರ್ಚು ಮಾಡಿ ಇಂದಿನ ಚುನಾವಣೆ ಎದುರಿಸುವಷ್ಟು ಶಕ್ತಿ ನನ್ನಲ್ಲಿ ಇಲ್ಲ. ಹೀಗಾಗಿ ಮುಂದೆ ಯಾವ…

1 hour ago

ಯೋಗೇಶ್‌ ಗೌಡ ಕೊಲೆ ಪ್ರಕರಣ: ವಿನಯ್‌ ಕುಲಕರ್ಣಿ ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಯೋಗೇಶ್‌ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ವಿನಯ್‌ ಕುಲಕರ್ಣಿ ಅವರು ಶಿಕ್ಷೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ…

3 hours ago

ರಾಮಚಂದ್ರರಾವ್‌ ಮೇಲಿನ ಅಮಾನತು ಆದೇಶ ರದ್ದು: ಎಚ್.ವಿಶ್ವನಾಥ್‌ ಆಕ್ಷೇಪ

ಮೈಸೂರು: ಹಿರಿಯ ಪೊಲೀಸ್‌ ಅಧಿಕಾರಿ ರಾಮಚಂದ್ರರಾವ್‌ ಅವರ ಮೇಲಿನ ಅಮಾನತು ಆದೇಶ ರದ್ದುಗೊಳಿಸಿರುವ ರಾಜ್ಯ ಸರ್ಕಾರಕ್ಕೆ ಕ್ರಮಕ್ಕೆ ವಿಧಾನಪರಿಷತ್‌ ಎಚ್.ವಿಶ್ವನಾಥ್‌…

4 hours ago

ಮತ್ತೆ ರಾಜ್ಯಪಾಲರನ್ನು ಭೇಟಿಯಾದ ವಿಜಯ್:‌ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸಿ ಎಂದ ಗವರ್ನರ್‌

ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ 108 ಸ್ಥಾನಗಳಲ್ಲಿ ಭರ್ಜರಿ ಗೆಲುವು ಸಾಧಿಸುವ ಮೂಲಕ ನಟ ವಿಜಯ್‌ ಅವರ ಟಿವಿಕೆ ಪಕ್ಷ…

4 hours ago

ಆಪರೇಷನ್‌ ಸಿಂಧೂರಕ್ಕೆ ಒಂದು ವರ್ಷ: ಇನ್ನೂ ಚೇತರಿಸಿಕೊಳ್ಳದ ಪಾಕ್‌

ನವದೆಹಲಿ: ಕುಟುಂಬದೊಂದಿಗೆ ಪ್ರವಾಸದಲ್ಲಿದ್ದ 26 ಜೀವಗಳನ್ನು ಬಲಿ ಪಡೆದ ಉಗ್ರರಿಗೆ ತಕ್ಕ ಪಾಠ ಕಲಿಸಿದ ಆಪರೇಷನ್‌ ಸಿಂಧೂರಕ್ಕೆ ಒಂದು ವರ್ಷವಾಗಿದೆ.…

5 hours ago