ದೇಶ- ವಿದೇಶ

ಅಕ್ರಮ ವಲಸಿಗರ ಬಗ್ಗೆ ಮೃದು ಧೋರಣೆ ವಹಿಸುವ ಸಮಯ ಮುಗಿದಿದೆ: ಡೊನಾಲ್ಡ್‌ ಟ್ರಂಪ್‌

ವಾಷಿಂಗ್ಟನ್: ಅಕ್ರಮ ವಲಸಿಗರ ಬಗ್ಗೆ ಮೃದು ಧೋರಣೆ ವಹಿಸುವ ಸಮಯ ನನ್ನ ಆಡಳಿತದಲ್ಲಿ ಮುಗಿದಿದೆ. ಈ ಹತ್ಯೆಯನ್ನು ನಾನು ಖಂಡಿಸುತ್ತೇನೆ ಎಂದು ಪತ್ನಿ ಮತ್ತು ಮಗನ ಎದುರೇ ವಲಸಿಗನಿಂದ ಶಿರಚ್ಚೇದನಕ್ಕೊಳಗಾದ ಕರ್ನಾಟಕ ಮೂಲದ ಚಂದ್ರ ನಾಗ ಮಲ್ಲಯ್ಯ ಅವರ ಹತ್ಯೆಗೆ ಸಂಬಂಧಪಟ್ಟಂತೆ ಆರೋಪಿ ವಿರುದ್ಧ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗುಡುಗಿದ್ದಾರೆ.

ಈ ಅಪರಾಧಿ ನಮ್ಮ ದೇಶದಲ್ಲಿ ಇರಬಾರದಿತ್ತು. ನನ್ನ ಆಡಳಿತದಲ್ಲಿ ಅಕ್ರಮ ವಲಸೆ ಅಪರಾಧಿಗಳ ಬಗ್ಗೆ ಮೃದುವಾಗಿ ವರ್ತಿಸುವ ಸಮಯ ಮುಗಿದಿದೆ.ಅಮೆರಿಕವನ್ನು ಮತ್ತೆ ಸುರಕ್ಷಿತವನ್ನಾಗಿ ಮಾಡುವ ಪ್ರತಿಜ್ಞೆ ಮಾಡಿರುವ ಡೊನಾಲ್ಡ್ ಟ್ರಂಪ್, ತಮ್ಮ ಆಡಳಿತದಲ್ಲಿ ಅಕ್ರಮ ವಲಸಿಗ ಅಪರಾಧಿಗಳ ಬಗ್ಗೆ ಮೃದುವಾಗಿರುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: Asia cup | ಭಾರತಕ್ಕೆ ಸುಲಭ ಜಯ : ಪಾಕಿಸ್ತಾನಕ್ಕೆ ಮುಖಭಂಗ

ಈ ಕುರಿತು ತಮ್ಮ ಟ್ರೋತ್ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿರುವ ಟ್ರಂಪ್, ಚಂದ್ರ ನಾಗಮಲ್ಲಯ್ಯ ಅವರನ್ನು ಕ್ಯೂಬಾದ ವಲಸಿಗರೊಬ್ಬರು ಬರ್ಬರವಾಗಿ ಶಿರಚ್ಛೇದನ ಮಾಡಿದ್ದಾರೆ. ಈ ವ್ಯಕ್ತಿ ನಮ್ಮ ದೇಶದಲ್ಲಿ ಎಂದಿಗೂ ಇರಬಾರದಿತ್ತು . ಆರೋಪಿ ವಿರುದ್ಧ ಕಾನೂನು ಪ್ರಕಾರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಟೆಕ್ಸಾಸ್ ನ ಡಲ್ಲಾಸ್‌ನಲ್ಲಿ ಗೌರವಾನ್ವಿತ ವ್ಯಕ್ತಿಯಾಗಿದ್ದ ಚಂದ್ರ ನಾಗಮಲ್ಲಯ್ಯ ಅವರನ್ನು ಪತ್ನಿ ಮತ್ತು ಮುಂದೆಯೇ ಕ್ರೂರವಾಗಿ ಶಿರಚ್ಛೇದ ಮಾಡಿ ಕೊಲೆ ಮಾಡಿದ ಘಟನೆಯ ಭಯಾನಕ ವರದಿಗಳು ನನಗೆ ತಿಳಿದಿವೆ. ಆರೋಪಿಯನ್ನು ಈ ಹಿಂದೆ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಸೇರಿದಂತೆ ಭಯಾನಕ ಕ್ರಿಮಿನಲ್ ಕೇಸ್‌ಗಳ ಆರೋಪಗಳ ಹಿನ್ನೆಲೆಯಲ್ಲಿ ಬಂಧಿಸಲಾಗಿತ್ತು. ಆದರೆ, ಕ್ಯೂಬಾ ಅಂತಹ ದುಷ್ಟರನ್ನು ತಮ್ಮ ದೇಶಕ್ಕೆ ಬಯಸಲಿಲ್ಲ ಎಂದು ಅಸಮರ್ಥ ಜೋ ಬೈಡನ್ ನೇತೃತ್ವದಲ್ಲಿ ಆರೋಪಿ ನಮ್ಮ ತಾಯ್ನಾಡಿಗೆ ಮರಳಿದರು ಎಂದು ತಿಳಿಸಿದ್ದಾರೆ.

ಭಾರತೀಯ ಮೂಲಕ ವ್ಯಕ್ತಿ ಚಂದ್ರ ನಾಗಮಲ್ಲಯ್ಯ ಕೊಲೆಯ ಆರೋಪಿಯಾದ ಕ್ಯೂಬಾದ ಅಕ್ರಮ ವಲಸಿ ಯೋರ್ಡಾನಿಸ್ ಕೊಬೋಸ್-ಮಾರ್ಟಿನೆಜ್(37) ವಿರುದ್ಧ ಪ್ರಥಮ ದರ್ಜೆಯ ಕೊಲೆ ಆರೋಪ ಹೊರಿಸಿ, ಕಾನೂನಿನ ಪೂರ್ಣ ಪ್ರಮಾಣದಲ್ಲಿ ವಿಚಾರಣೆ ನಡೆಸುವುದಾಗಿ ಟ್ರಂಪ್? ಘೋಷಿಸಿದ್ದಾರೆ. ಈ ಘಟನೆಯು ಅಮೆರಿಕದ ಅಕ್ರಮ ವಲಸೆ ನೀತಿಯ ಬಗ್ಗೆ ರಾಷ್ಟ್ರೀಯ ಚರ್ಚೆಯನ್ನು ಉಂಟುಮಾಡಿದ್ದು, ಭಾರತೀಯ-ಅಮೆರಿಕನ್ ಸಮುದಾಯದಲ್ಲಿ ಆಘಾತವನ್ನುಂಟುಮಾಡಿದೆ.

ವರದಿ ಪ್ರಕಾರ 50 ವರ್ಷದ ಚಂದ್ರ ನಾಗಮಲ್ಲಯ್ಯ (ಬಾಬ್) ಅವರನ್ನು ಸೆಪ್ಟೆಂಬರ್ 10ರಂದು ಡಲ್ಲಾಸ್‍ನ ಡೌನ್‍ಟೌನ್ ಸೂಟ್ಸ್ ಮೋಟೆಲ್‍ನಲ್ಲಿ ಕೊಬೋಸ್-ಮಾರ್ಟಿನೆಜ್ ಚಾಕು ದಾಳಿ ಮಾಡಿ ಶಿರಚ್ಛೇದನ ಮಾಡಿ ಕೊಂದಿದ್ದಾರೆ. ಈ ದಾಳಿಯನ್ನು ಅವರ ಪತ್ನಿ ನಿಶಾ ಮತ್ತು ಮಗ ಗೌರವ್ ಕಣ್ಣಾರೆ ನೋಡಿದ್ದಾರೆ. ದಾಳಿಯು ಒಂದು ವಾಷಿಂಗ್ ಮೆಷಿನ್ ಮುರಿದ ವಿವಾದದಿಂದ ಆರಂಭವಾಗಿತ್ತು. ಆರೋಪಿ ಕ್ಯೂಬಾದ ಅಕ್ರಮ ವಲಸಿಯಾಗಿದ್ದು, ಇದ್ದಕ್ಕಿದ್ದಂತೆ ಕೊಲೆ ಮಾಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಆರೋಗ್ಯ ಸಚಿವರ ಕಳಕಳಿ ಶ್ಲಾಘನೀಯ

ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…

6 hours ago

ಓದುಗರ ಪತ್ರ: ರಾಜಕೀಯ ಗದ್ದಲದ ಮುಂದೆ ಜನರ ಸಮಸ್ಯೆ ಗೌಣವಾಗಬಾರದು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…

6 hours ago

ಓದುಗರ ಪತ್ರ: ಸಾಹಿತ್ಯ ಸಮಾರಂಭದಲ್ಲಿ ವಿಷಯಾಂತರ ಏಕೆ?

ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…

6 hours ago

ಹಾಳಾಗಿರುವ ಜನರೇಟರ್; ಡಯಾಲಿಸಿಸ್ ರೋಗಿಗಳ ಪರದಾಟ

ವೈದ್ಯರು ಮೊಬೈಲ್ ಟಾರ್ಚ್ ‌ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…

6 hours ago

1 ಕೆಜಿ 520 ಗ್ರಾಂ ತೂಕದ ಬಟರ್ ಫ್ರೂಟ್ ಬೆಳೆದ ಸಾವಯವ ಕೃಷಿಕ

ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…

6 hours ago